ETV Bharat / state

ಯಾರ ಜೊತೆಯೂ ಮೈತ್ರಿ ಇಲ್ಲ, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ: ಕುಮಾರಸ್ವಾಮಿ

author img

By

Published : Aug 20, 2023, 8:38 PM IST

ಮುಂಬರುವ ಲೋಕಸಭೆ ಹಾಗೂ ಇತರೆ ಚುನಾವಣೆಯಲ್ಲಿ ಯಾರ ಜೊತೆಯೂ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹೆಚ್​. ಡಿ ಕುಮಾರಸ್ವಾಮಿ
ಹೆಚ್​. ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆ

ಮೈಸೂರು: ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರು ಮೈತ್ರಿಗೆ ಮುಂದೆ ಬಂದಿಲ್ಲ. ಆದ್ದರಿಂದ ಯಾರ ಜೊತೆ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಭಾನವಾರ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಾದ ಪಡೆದ ನಂತರ ಮಾಧ್ಯಮಗಳ ಜೊತೆ ಹೆಚ್​ಡಿಕೆ ಮಾತನಾಡಿದರು. ಮುಂದೆ ಲೋಕಸಭೆ ಸೇರಿದಂತೆ ಇತರ ಚುನಾವಣೆಗಳು ಬರುತ್ತಿದ್ದು, ರಾಜಕೀಯ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕಾಗಿ ಶಾಸಕ ಜಿ ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ರಚನೆ ಮಾಡಿದ್ದೇವೆ. ಅವರ ನೇತೃತ್ವದಲ್ಲಿ ನಾಲ್ಕು ತಂಡ ರಾಜ್ಯದ ಪ್ರವಾಸ ಮಾಡುತ್ತದೆ. ಇದು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತದೆ. ಮುಂದಿನ ಚುನಾವಣೆಯಲ್ಲಿ ಯಾರ ಜೊತೆಯೂ ಮೈತ್ರಿಯ ಚರ್ಚೆಯೇ ಆಗಿಲ್ಲ. ಯಾರು ಮೈತ್ರಿಗೆ ಮುಂದೆ ಬಂದಿಲ್ಲ. ಆದ್ದರಿಂದ ಯಾರ ಜೊತೆಯೂ ಮೈತ್ರಿ ಇಲ್ಲ. ಮುಂಬರುವ ಚುನಾವಣೆಗಾಗಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ಮಾಡಿದ ಸಾಲ ತಿರಿಸುವವರು ಯಾರು : ಗ್ಯಾರಂಟಿ ಯೋಜನೆಗಳಿಗಾಗಿ 86 ಸಾವಿರ ಕೋಟಿ ಸಾಲ ಮಾಡಲಾಗಿದ್ದು, ಈಗ ಮಾಡಿದ ಸಾಲಗಳನ್ನು ತೀರಿಸುವವರು ಯಾರು? ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ. 200 ಯುನಿಟ್ ವಿದ್ಯುತ್ ಉಚಿತ ಎಂದಿದ್ದರು. ಈಗ ಕಂಡಿಷನ್ ಮೇಲೆ ಕಂಡಿಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಕಾರಣಕ್ಕಾಗಿ ಅಭಿವೃದ್ಧಿಯೇ ನಿಂತು ಹೋಗಿದೆ. ಶಾಸಕರಿಗೆ ಅನುದಾನ ಸಿಗುತ್ತಿಲ್ಲ. ಇದು ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡುತ್ತಿರಿ‌ ಎಂದು ಮಾರ್ಮಿಕವಾಗಿ ಹೆಚ್​ಡಿಕೆ ಹೇಳಿದರು.

ಸರ್ಕಾರದಿಂದ ರಾಜ್ಯದ ರೈತರ ಕಡೆಗಣನೆ : ಹಿಂದೆ ನಮ್ಮ ನೀರು ನಮ್ಮ ಹಕ್ಕು ಎನ್ನುತ್ತಿದ್ದರು. ಈಗ ಸರ್ಕಾರ ಬಂದ ಮೇಲೆ ನಮ್ಮ ನೀರು ತಮಿಳುನಾಡಿನ ಹಕ್ಕು ಎನ್ನುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುಂಚೆ ನೀರಿಗಾಗಿ ಮೇಕೆದಾಟು ಹೋರಾಟ ಮಾಡಿದವರು, ಈಗ ಏನು ಮಾಡುತ್ತಿದ್ದಾರೆ? ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ವಾದವನ್ನೇ ಮಾಡಲಿಲ್ಲ. ನನಗೆ ಒಂದು ಬಾರಿ ಪೆನ್ ಕೊಡಿ ಎಂದಿದ್ದು ಇದಕ್ಕೆಯೇ ಎಂದು ಡಿಸಿಎಂ ಡಿ ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರ ನಡೆಸುವವರಿಗೆ ರೈತರು ಹಾಗೂ ಕುಡಿಯುವ ನೀರಿನ ಬಗ್ಗೆ ಸರಿಯಾದ ರೀತಿ ಮಾಹಿತಿ ಇರಬೇಕು. ಮುಂದೆ ನಮ್ಮ ಬೆಳೆಗಳಿಗೆ ಹಾಗೂ ಬೆಂಗಳೂರಿಗೆ ಕುಡಿಯುವ ನೀರಿಗೂ ಸಮಸ್ಯೆ ಆಗಲಿದೆ. ಇದು ತಿಳಿದಿದ್ದರೂ ತಮಿಳುನಾಡಿಗೆ ನೀರು ಬಿಟ್ಟಿರುವುದು ಏಕೆ? ನಾವೆಲ್ಲ ಹೋರಾಟ ಮಾಡಿದ ಮೇಲೆ ಸುಪ್ರೀಂ ಕೋರ್ಟ್​ನ ಮುಂದೆ ಅರ್ಜಿ ಹಾಕಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿಕಾರಿದರು.

ಇದನ್ನೂ ಓದಿ : ಮೈಸೂರು ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು: ಕುಮಾರಸ್ವಾಮಿ

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿಕೆ

ಮೈಸೂರು: ಮೈತ್ರಿ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರು ಮೈತ್ರಿಗೆ ಮುಂದೆ ಬಂದಿಲ್ಲ. ಆದ್ದರಿಂದ ಯಾರ ಜೊತೆ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಭಾನವಾರ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಾದ ಪಡೆದ ನಂತರ ಮಾಧ್ಯಮಗಳ ಜೊತೆ ಹೆಚ್​ಡಿಕೆ ಮಾತನಾಡಿದರು. ಮುಂದೆ ಲೋಕಸಭೆ ಸೇರಿದಂತೆ ಇತರ ಚುನಾವಣೆಗಳು ಬರುತ್ತಿದ್ದು, ರಾಜಕೀಯ ಪಕ್ಷವಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕಾಗಿ ಶಾಸಕ ಜಿ ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ರಚನೆ ಮಾಡಿದ್ದೇವೆ. ಅವರ ನೇತೃತ್ವದಲ್ಲಿ ನಾಲ್ಕು ತಂಡ ರಾಜ್ಯದ ಪ್ರವಾಸ ಮಾಡುತ್ತದೆ. ಇದು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತದೆ. ಮುಂದಿನ ಚುನಾವಣೆಯಲ್ಲಿ ಯಾರ ಜೊತೆಯೂ ಮೈತ್ರಿಯ ಚರ್ಚೆಯೇ ಆಗಿಲ್ಲ. ಯಾರು ಮೈತ್ರಿಗೆ ಮುಂದೆ ಬಂದಿಲ್ಲ. ಆದ್ದರಿಂದ ಯಾರ ಜೊತೆಯೂ ಮೈತ್ರಿ ಇಲ್ಲ. ಮುಂಬರುವ ಚುನಾವಣೆಗಾಗಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ಮಾಡಿದ ಸಾಲ ತಿರಿಸುವವರು ಯಾರು : ಗ್ಯಾರಂಟಿ ಯೋಜನೆಗಳಿಗಾಗಿ 86 ಸಾವಿರ ಕೋಟಿ ಸಾಲ ಮಾಡಲಾಗಿದ್ದು, ಈಗ ಮಾಡಿದ ಸಾಲಗಳನ್ನು ತೀರಿಸುವವರು ಯಾರು? ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ. 200 ಯುನಿಟ್ ವಿದ್ಯುತ್ ಉಚಿತ ಎಂದಿದ್ದರು. ಈಗ ಕಂಡಿಷನ್ ಮೇಲೆ ಕಂಡಿಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಕಾರಣಕ್ಕಾಗಿ ಅಭಿವೃದ್ಧಿಯೇ ನಿಂತು ಹೋಗಿದೆ. ಶಾಸಕರಿಗೆ ಅನುದಾನ ಸಿಗುತ್ತಿಲ್ಲ. ಇದು ಮುಂದೆ ಎಲ್ಲಿಗೆ ಹೋಗಿ ನಿಲ್ಲುತ್ತದೆ ನೋಡುತ್ತಿರಿ‌ ಎಂದು ಮಾರ್ಮಿಕವಾಗಿ ಹೆಚ್​ಡಿಕೆ ಹೇಳಿದರು.

ಸರ್ಕಾರದಿಂದ ರಾಜ್ಯದ ರೈತರ ಕಡೆಗಣನೆ : ಹಿಂದೆ ನಮ್ಮ ನೀರು ನಮ್ಮ ಹಕ್ಕು ಎನ್ನುತ್ತಿದ್ದರು. ಈಗ ಸರ್ಕಾರ ಬಂದ ಮೇಲೆ ನಮ್ಮ ನೀರು ತಮಿಳುನಾಡಿನ ಹಕ್ಕು ಎನ್ನುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುಂಚೆ ನೀರಿಗಾಗಿ ಮೇಕೆದಾಟು ಹೋರಾಟ ಮಾಡಿದವರು, ಈಗ ಏನು ಮಾಡುತ್ತಿದ್ದಾರೆ? ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ವಾದವನ್ನೇ ಮಾಡಲಿಲ್ಲ. ನನಗೆ ಒಂದು ಬಾರಿ ಪೆನ್ ಕೊಡಿ ಎಂದಿದ್ದು ಇದಕ್ಕೆಯೇ ಎಂದು ಡಿಸಿಎಂ ಡಿ ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರ ನಡೆಸುವವರಿಗೆ ರೈತರು ಹಾಗೂ ಕುಡಿಯುವ ನೀರಿನ ಬಗ್ಗೆ ಸರಿಯಾದ ರೀತಿ ಮಾಹಿತಿ ಇರಬೇಕು. ಮುಂದೆ ನಮ್ಮ ಬೆಳೆಗಳಿಗೆ ಹಾಗೂ ಬೆಂಗಳೂರಿಗೆ ಕುಡಿಯುವ ನೀರಿಗೂ ಸಮಸ್ಯೆ ಆಗಲಿದೆ. ಇದು ತಿಳಿದಿದ್ದರೂ ತಮಿಳುನಾಡಿಗೆ ನೀರು ಬಿಟ್ಟಿರುವುದು ಏಕೆ? ನಾವೆಲ್ಲ ಹೋರಾಟ ಮಾಡಿದ ಮೇಲೆ ಸುಪ್ರೀಂ ಕೋರ್ಟ್​ನ ಮುಂದೆ ಅರ್ಜಿ ಹಾಕಲು ಮುಂದಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿಕಾರಿದರು.

ಇದನ್ನೂ ಓದಿ : ಮೈಸೂರು ಕೃಷಿ ಅಧಿಕಾರಿಗಳ ಬಂಧನದಿಂದ ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು: ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.