ETV Bharat / state

ಗಿರವಿ ಇರಿಸಿದ್ದ ಚಿನ್ನದೊಂದಿಗೆ ಪರಾರಿಯಾಗಿದ್ದ ಅಂಗಡಿ ಮಾಲೀಕನ ಬಂಧನ

ಜನರು ಗಿರವಿ ಇರಿಸಿದ್ದ ಚಿನ್ನದೊಂದಿಗೆ ರಾಜಸ್ಥಾನಕ್ಕೆ ಪರಾರಿಯಾಗಿದ್ದ ವ್ಯಕ್ತಿಯನ್ನು ಮೈಸೂರಿನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ.

author img

By

Published : Dec 29, 2022, 7:54 PM IST

arrest-of-jewellary-owner-in-mysore
ಗಿರವಿ ಇರಿಸಿದ್ದ ಚಿನ್ನದೊಂದಿಗೆ ಪರಾರಿಯಾಗಿದ್ದ ಅಂಗಡಿ ಮಾಲೀಕನ ಬಂಧನ

ಮೈಸೂರು: ಜನರು ಗಿರವಿ ಇರಿಸಿದ್ದ ಚಿನ್ನದೊಂದಿಗೆ ಪರಾರಿಯಾಗಿದ್ದ ಚಿನ್ನದ ಅಂಗಡಿ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನೇಮಿರಾಮ್​ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮೈಸೂರಿನ ವಿವೇಕಾನಂದನಗರದಲ್ಲಿ ಕಳೆದ 10 ವರ್ಷಗಳಿಂದ ಮಾರುತಿ ಜ್ಯುವೆಲ್ಲರ್ಸ್​​ ಹಾಗೂ ಬ್ಯಾಂಕರ್ಸ್ ಅಂಗಡಿ ಇಟ್ಟು ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಬಂಧಿತ ನೇಮಿರಾಜ್​ಗೆ ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ನಿಂದ ತನ್ನ ವ್ಯವಹಾರದಲ್ಲಿ ನಷ್ಟ ಉಂಟಾಗಿದೆ. ಇದರಿಂದ ಬಡ್ಡಿ ಕಟ್ಟಲಾಗದೇ ಹಾಗೂ ಚಿನ್ನದ ಆಭರಣ ಮಾಡಿಸಲು ಮುಂಗಡ ಹಣ ನೀಡಿದವರಿಗೆ ಚಿನ್ನ ಕೊಡದೇ ಸತಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ನ.9ರಂದು ಆರೋಪಿ ತನ್ನ ಅಂಗಡಿಯನ್ನು ಮುಚ್ಚಿ ಗಿರವಿ ಇಟ್ಟಿದ್ದ ಚಿನ್ನದ ಆಭರಣದೊಂದಿಗೆ ರಾಜಸ್ಥಾನದ ತನ್ನ ಸ್ವಂತ ಊರಿಗೆ ಪರಾರಿಯಾಗಿದ್ದ. ಬಳಿಕ ಅಲ್ಲೆ ಇದ್ದು, ಕೃಷಿಯಲ್ಲಿ ತೊಡಗಿದ್ದ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ತಂಡ ರಚಿಸಿದ್ದಾರೆ. ಈ ವೇಳೆ ಆರೋಪಿಯು ರಾಜಸ್ಥಾನಕ್ಕೆ ಪರಾರಿ ಆಗಿರುವ ಬಗ್ಗೆ ತಿಳಿದ ಪೊಲೀಸರು ರಾಜಸ್ಥಾನಕ್ಕೆ ತೆರಳಿದ್ದಾರೆ. ಆದರೆ, ಈ ಬಗ್ಗೆ ತಿಳಿದ ಆರೋಪಿ ಅಲ್ಲಿಂದ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಆರೋಪಿಯ ಮೊಬೈಲ್​ನ ಜಾಡು ಹಿಡಿದು ಬೆಂಗಳೂರಿನಲ್ಲಿ ಬಂಧಿಸಿ ಮೈಸೂರಿಗೆ ಕರೆ ತಂದಿದ್ದಾರೆ. ಆರೋಪಿಯನ್ನು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ಹುಬ್ಬಳ್ಳಿ: ಚಿನ್ನದಾಸೆಗೆ ದೊಡ್ಡಮ್ಮನ ಕೊಲೆಗೈದ ಆರೋಪಿ ಸೆರೆ

ಮೈಸೂರು: ಜನರು ಗಿರವಿ ಇರಿಸಿದ್ದ ಚಿನ್ನದೊಂದಿಗೆ ಪರಾರಿಯಾಗಿದ್ದ ಚಿನ್ನದ ಅಂಗಡಿ ಮಾಲೀಕನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನೇಮಿರಾಮ್​ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮೈಸೂರಿನ ವಿವೇಕಾನಂದನಗರದಲ್ಲಿ ಕಳೆದ 10 ವರ್ಷಗಳಿಂದ ಮಾರುತಿ ಜ್ಯುವೆಲ್ಲರ್ಸ್​​ ಹಾಗೂ ಬ್ಯಾಂಕರ್ಸ್ ಅಂಗಡಿ ಇಟ್ಟು ವ್ಯವಹಾರ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಬಂಧಿತ ನೇಮಿರಾಜ್​ಗೆ ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ನಿಂದ ತನ್ನ ವ್ಯವಹಾರದಲ್ಲಿ ನಷ್ಟ ಉಂಟಾಗಿದೆ. ಇದರಿಂದ ಬಡ್ಡಿ ಕಟ್ಟಲಾಗದೇ ಹಾಗೂ ಚಿನ್ನದ ಆಭರಣ ಮಾಡಿಸಲು ಮುಂಗಡ ಹಣ ನೀಡಿದವರಿಗೆ ಚಿನ್ನ ಕೊಡದೇ ಸತಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ಈ ನಡುವೆ ನ.9ರಂದು ಆರೋಪಿ ತನ್ನ ಅಂಗಡಿಯನ್ನು ಮುಚ್ಚಿ ಗಿರವಿ ಇಟ್ಟಿದ್ದ ಚಿನ್ನದ ಆಭರಣದೊಂದಿಗೆ ರಾಜಸ್ಥಾನದ ತನ್ನ ಸ್ವಂತ ಊರಿಗೆ ಪರಾರಿಯಾಗಿದ್ದ. ಬಳಿಕ ಅಲ್ಲೆ ಇದ್ದು, ಕೃಷಿಯಲ್ಲಿ ತೊಡಗಿದ್ದ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ತಂಡ ರಚಿಸಿದ್ದಾರೆ. ಈ ವೇಳೆ ಆರೋಪಿಯು ರಾಜಸ್ಥಾನಕ್ಕೆ ಪರಾರಿ ಆಗಿರುವ ಬಗ್ಗೆ ತಿಳಿದ ಪೊಲೀಸರು ರಾಜಸ್ಥಾನಕ್ಕೆ ತೆರಳಿದ್ದಾರೆ. ಆದರೆ, ಈ ಬಗ್ಗೆ ತಿಳಿದ ಆರೋಪಿ ಅಲ್ಲಿಂದ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಆರೋಪಿಯ ಮೊಬೈಲ್​ನ ಜಾಡು ಹಿಡಿದು ಬೆಂಗಳೂರಿನಲ್ಲಿ ಬಂಧಿಸಿ ಮೈಸೂರಿಗೆ ಕರೆ ತಂದಿದ್ದಾರೆ. ಆರೋಪಿಯನ್ನು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ಹುಬ್ಬಳ್ಳಿ: ಚಿನ್ನದಾಸೆಗೆ ದೊಡ್ಡಮ್ಮನ ಕೊಲೆಗೈದ ಆರೋಪಿ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.