ETV Bharat / state

ಮೈಸೂರಿನಲ್ಲಿ ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ಯುವಕ ಸಾವು

author img

By

Published : May 11, 2021, 12:10 PM IST

ಸ್ಥಳಕ್ಕೆ ಕುವೆಂಪುನಗರ ಪೊಲೀಸ್ ಠಾಣೆಯ ಸಬ್​ ಇನ್​ಸ್ಪೆಕ್ಟರ್ ವನಜಾಕ್ಷಿ, ಸಿಬ್ಬಂದಿಗಳಾದ ರವಿ, ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರ್ಯಾಕ್ಟರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ..

Bike collide with tractor in Mysore
ಮೈಸೂರಿನಲ್ಲಿ ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ಯುವಕ ಸಾವು

ಮೈಸೂರು : ದ್ವಿಚಕ್ರ ವಾಹನಕ್ಕೆ ಜಲ್ಲಿ ತುಂಬಿದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಲಿಂಗಾಬುಧಿ ಪಾಳ್ಯದ ಬಳಿಯ ಪ್ರೀತಿ ಲೇಔಟ್​ನಲ್ಲಿ ನಡೆದಿದೆ.

ಡಿ.ಸಾಲುಂಡಿ ನಿವಾಸಿ ಮಧುಸೂದನ್(25) ಮೃತ ಬೈಕ್ ಸವಾರ. ಕೆಲಸದ ನಿಮಿತ್ತ ಮೈಸೂರಿಗೆ ಬಂದಿದ್ದ ಈತ, ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಕುವೆಂಪುನಗರ ಪೊಲೀಸ್ ಠಾಣೆಯ ಸಬ್​ ಇನ್​ಸ್ಪೆಕ್ಟರ್ ವನಜಾಕ್ಷಿ, ಸಿಬ್ಬಂದಿಗಳಾದ ರವಿ, ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರ್ಯಾಕ್ಟರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದ್ದು, ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು : ದ್ವಿಚಕ್ರ ವಾಹನಕ್ಕೆ ಜಲ್ಲಿ ತುಂಬಿದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಲಿಂಗಾಬುಧಿ ಪಾಳ್ಯದ ಬಳಿಯ ಪ್ರೀತಿ ಲೇಔಟ್​ನಲ್ಲಿ ನಡೆದಿದೆ.

ಡಿ.ಸಾಲುಂಡಿ ನಿವಾಸಿ ಮಧುಸೂದನ್(25) ಮೃತ ಬೈಕ್ ಸವಾರ. ಕೆಲಸದ ನಿಮಿತ್ತ ಮೈಸೂರಿಗೆ ಬಂದಿದ್ದ ಈತ, ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಕುವೆಂಪುನಗರ ಪೊಲೀಸ್ ಠಾಣೆಯ ಸಬ್​ ಇನ್​ಸ್ಪೆಕ್ಟರ್ ವನಜಾಕ್ಷಿ, ಸಿಬ್ಬಂದಿಗಳಾದ ರವಿ, ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರ್ಯಾಕ್ಟರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದ್ದು, ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.