ETV Bharat / state

ಸಿದ್ದು, ಎಚ್​ಡಿಕೆ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ; ಸಚಿವ ಈಶ್ವರಪ್ಪ - ಮೈಸೂರು

ಮುಖ್ಯಮಂತ್ರಿ ಬದಲಾವಣೆ ಕೇವಲ ಸೃಷ್ಟಿ ಅಷ್ಟೇ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ‌. ಹತ್ತಾರೂ ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಇದು ಸುಳ್ಳು. ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೆ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.

Minister  KS Eshwarappa
ಕೆ‌.ಎಸ್‌.ಈಶ್ವರಪ್ಪ
author img

By

Published : Jan 11, 2021, 10:33 AM IST

ಮೈಸೂರು: ಮುಖ್ಯಮಂತ್ರಿ ಬದಲಾವಣೆ ಅಂತ ಸುಮ್ಮನೆ ಮಾತನಾಡ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರೂ ಹೇಳಿಲ್ಲ‌. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸಚಿವ ಕೆ‌.ಎಸ್‌.ಈಶ್ವರಪ್ಪ ಪ್ರತಿಕ್ರಿಯೆ

ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ‌. ಹತ್ತಾರು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ, ಆದರೆ ಇದು ಸುಳ್ಳು. ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೆ ಎಂದು ಸ್ಪಷ್ಟಪಡಿಸಿದರು.

2023ಕ್ಕೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಕೆಲವರು ಹಗಲು ಕನಸು ಕಾಣುತ್ತಿರುತ್ತಾರೆ. ಅದೇ ರೀತಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ‌. ಸಿದ್ದರಾಮಯ್ಯ ಅವರೆ ನಾನು ಮುಖ್ಯಮಂತ್ರಿ ಆಗ್ತಿನಿ ಅಂತಿದ್ದಾರೆ. ಅವರ ಪಕ್ಷದವರು ಯಾರಾದರೂ ಹೇಳಿದ್ದಾರಾ? ಕುಮಾರಸ್ವಾಮಿ ಅವರು ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ. ಇವರಿಬ್ಬರದ್ದು ಹಗಲು ಕನಸು. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆಡಿಎಸ್ ಅಧಿಕಾರಕ್ಕೆ ಬರಲ್ಲ‌ ಎಂದು ಲೇವಡಿ ಮಾಡಿದರು.

ಓದಿ: ಸಿಎಂ ಸ್ಥಾನದಿಂದ ಬಿಎಸ್​ವೈ ಅವರನ್ನು ಕೆಳಗಿಳಿಸೋದು ಸತ್ಯ: ಸಿದ್ದರಾಮಯ್ಯ

ಗೆದ್ದವರು ಸ್ವಾಭಾವಿಕವಾಗಿ ಮಂತ್ರಿ ಆಗಬೇಕು ಎಂದು ಅಪೇಕ್ಷೆ ಪಡುತ್ತಾರೆ. ಮಂತ್ರಿಯಾಗಬೇಕು ಎಂದು ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಮುಖ್ಯಮಂತ್ರಿಗಳು ಭರವಸೆ ಕೊಟ್ಟಿರುವಂತೆ ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ. ಅದರಂತೆ ಅವರಿಗೆ ಕೊಟ್ಟು ಉಳಿದಿರುವುದರಲ್ಲಿ ನೀಡಲಾಗುತ್ತೆ ಎಂದರು.

ಯಡಿಯೂರಪ್ಪನವರ ಸಂಪುಟದಲ್ಲಿ ಮಂತ್ರಿಯಾಗಲ್ಲ ಅಂತ ಯತ್ನಾಳ್ ಹೇಳಿದ್ದಾರೆ ಎಂಬ ವಿಚಾರವಾಗಿ ಮಾತನಾಡಿ, ಮಂತ್ರಿ ಮಾಡುವುದಿಲ್ಲ ಅಂತ ಹೇಳಿದ್ದಾರೆ. ಅವರನ್ನ ಮಂತ್ರಿ ಮಾಡುವುದು ಬಿಡುವುದು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಒಂದು ವೇಳೆ ಕೇಂದ್ರ ನಾಯಕರು ಹಾಗೂ ಮುಖ್ಯಮಂತ್ರಿ ಮಂತ್ರಿ ಮಾಡ್ತಿವಿ ಅಂದ್ರೆ ಅದನ್ನ ಅವರು ಒಪ್ಪಿಕೊಳ್ಳಬೇಕು. ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕೆಲವು ಬಾರಿ ಅವರು ಬಹಿರಂಗವಾಗಿ ಏನೇನೋ ಟೀಕೆ ಮಾಡಿ ಬಿಡುತ್ತಾರೆ, ಇದು ತಪ್ಪು. ಇದರ ಬಗ್ಗೆ ನಾವು ಹೇಳಿದ್ದೇವೆ. ಆದರೆ ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು. ಅವರನ್ನ ಮಂತ್ರಿ ಮಾಡ್ತಾರ ಇಲ್ಲವಾ? ಎಂಬುದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು‌.

ಮೈಸೂರು: ಮುಖ್ಯಮಂತ್ರಿ ಬದಲಾವಣೆ ಅಂತ ಸುಮ್ಮನೆ ಮಾತನಾಡ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರೂ ಹೇಳಿಲ್ಲ‌. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸಚಿವ ಕೆ‌.ಎಸ್‌.ಈಶ್ವರಪ್ಪ ಪ್ರತಿಕ್ರಿಯೆ

ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ‌. ಹತ್ತಾರು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳುತ್ತಿದ್ದಾರೆ, ಆದರೆ ಇದು ಸುಳ್ಳು. ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೆ ಎಂದು ಸ್ಪಷ್ಟಪಡಿಸಿದರು.

2023ಕ್ಕೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಕೆಲವರು ಹಗಲು ಕನಸು ಕಾಣುತ್ತಿರುತ್ತಾರೆ. ಅದೇ ರೀತಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ‌. ಸಿದ್ದರಾಮಯ್ಯ ಅವರೆ ನಾನು ಮುಖ್ಯಮಂತ್ರಿ ಆಗ್ತಿನಿ ಅಂತಿದ್ದಾರೆ. ಅವರ ಪಕ್ಷದವರು ಯಾರಾದರೂ ಹೇಳಿದ್ದಾರಾ? ಕುಮಾರಸ್ವಾಮಿ ಅವರು ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ. ಇವರಿಬ್ಬರದ್ದು ಹಗಲು ಕನಸು. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆಡಿಎಸ್ ಅಧಿಕಾರಕ್ಕೆ ಬರಲ್ಲ‌ ಎಂದು ಲೇವಡಿ ಮಾಡಿದರು.

ಓದಿ: ಸಿಎಂ ಸ್ಥಾನದಿಂದ ಬಿಎಸ್​ವೈ ಅವರನ್ನು ಕೆಳಗಿಳಿಸೋದು ಸತ್ಯ: ಸಿದ್ದರಾಮಯ್ಯ

ಗೆದ್ದವರು ಸ್ವಾಭಾವಿಕವಾಗಿ ಮಂತ್ರಿ ಆಗಬೇಕು ಎಂದು ಅಪೇಕ್ಷೆ ಪಡುತ್ತಾರೆ. ಮಂತ್ರಿಯಾಗಬೇಕು ಎಂದು ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಮುಖ್ಯಮಂತ್ರಿಗಳು ಭರವಸೆ ಕೊಟ್ಟಿರುವಂತೆ ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ. ಅದರಂತೆ ಅವರಿಗೆ ಕೊಟ್ಟು ಉಳಿದಿರುವುದರಲ್ಲಿ ನೀಡಲಾಗುತ್ತೆ ಎಂದರು.

ಯಡಿಯೂರಪ್ಪನವರ ಸಂಪುಟದಲ್ಲಿ ಮಂತ್ರಿಯಾಗಲ್ಲ ಅಂತ ಯತ್ನಾಳ್ ಹೇಳಿದ್ದಾರೆ ಎಂಬ ವಿಚಾರವಾಗಿ ಮಾತನಾಡಿ, ಮಂತ್ರಿ ಮಾಡುವುದಿಲ್ಲ ಅಂತ ಹೇಳಿದ್ದಾರೆ. ಅವರನ್ನ ಮಂತ್ರಿ ಮಾಡುವುದು ಬಿಡುವುದು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಒಂದು ವೇಳೆ ಕೇಂದ್ರ ನಾಯಕರು ಹಾಗೂ ಮುಖ್ಯಮಂತ್ರಿ ಮಂತ್ರಿ ಮಾಡ್ತಿವಿ ಅಂದ್ರೆ ಅದನ್ನ ಅವರು ಒಪ್ಪಿಕೊಳ್ಳಬೇಕು. ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕೆಲವು ಬಾರಿ ಅವರು ಬಹಿರಂಗವಾಗಿ ಏನೇನೋ ಟೀಕೆ ಮಾಡಿ ಬಿಡುತ್ತಾರೆ, ಇದು ತಪ್ಪು. ಇದರ ಬಗ್ಗೆ ನಾವು ಹೇಳಿದ್ದೇವೆ. ಆದರೆ ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು. ಅವರನ್ನ ಮಂತ್ರಿ ಮಾಡ್ತಾರ ಇಲ್ಲವಾ? ಎಂಬುದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.