ಮೈಸೂರು: ಜಿಲ್ಲೆಯಲ್ಲಿ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವಿ ಮೊಹಲ್ಲದ ನಿವಾಸಿ ಮಾ. 22ರಂದು ಆಸ್ಟ್ರೇಲಿಯಾ ದೇಶದಿಂದ ಭಾರತಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಈ ವ್ಯಕ್ತಿಯ ಮುಂಗೈಗೆ ಸೀಲ್ ಮಾಡಿ, 14 ದಿನಗಳ ಕಾಲ ಹೋಮ್ ಕ್ವಾರಂಟೈನ್ಗೆ (ಏಪ್ರಿಲ್ 6ರವರೆಗೆ) ಒಳಪಡಿಸುವಂತೆ ಸೂಚಿಸಲಾಗಿತ್ತು.
ಆದರೆ, ಬಾಧಿತ ದೇಶದಿಂದ ಬಂದಿರುವ ತಿಳುವಳಿಕೆ ಇದ್ದರೂ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಉಲ್ಲಂಘಿನೆ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.