ETV Bharat / state

ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

author img

By ETV Bharat Karnataka Team

Published : Dec 22, 2023, 10:27 PM IST

2023ರ ಅರಮನೆ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ನಡೆಯುತ್ತಿರುವ ಅರಮನೆ ಫಲಪುಷ್ಪ ಪ್ರದರ್ಶನ 2023 ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಕಳೆದ ಬಾರಿಯಂತೆ ಈ ವರ್ಷವೂ ಕೂಡ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಆನೆಯ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿಕಂಠದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ
CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಹಣ್ಣುಗಳಿಂದ ಚಿತ್ರಿಸಿದ ಕಲಾಕೃತಿಗಳಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಆಕೃತಿಗಳು ಜನರ ಮನ ಸೆಳೆದವು. ವಿವಿಧ ರೀತಿಯ ಕಲಾಕೃತಿಗಳು, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಸೂಪರ್ ಮ್ಯಾನ್ ಹೀಗೆ ಮಕ್ಕಳಿಗೆ ಪ್ರಿಯವಾಗಿರುವ ಹೂಗಳಿಂದ ಅಲಂಕೃತಗೊಂಡ ವಿವಿಧ ಕಲಾಕೃತಿಗಳು, ಸೆಲ್ಫಿ ಪಾಯಿಂಟ್, ಕ್ರಿಸ್​ಮಸ್ ಟ್ರೀಗಳು ಜನರನ್ನು ಆಕರ್ಷಿಸಿದವು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಮೈಸೂರು ಅರಮನೆ ಮಂಡಳಿ ವತಿಯಿಂದ ರಾಜ ಮನೆತನಕ್ಕೆ ಸೇರಿದ ಆಯ್ದ ಹಳೆಯ ಹಾಗೂ ಅಮೂಲ್ಯ ಛಾಯಾ ಚಿತ್ರಗಳು, ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸಿದ ಬೊಂಬೆಗಳು, ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಮೈಸೂರು ಅರಮನೆ ಕುರಿತು ವಿಡಿಯೋ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ 'ಸರ್ವರೂ ಸಮಾನರು' ಎಂಬ ಸಂದೇಶವನ್ನು ಸಾರುವ ಸಂವಿಧಾನ ಪೀಠಿಕೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಸಮಾನತೆ, ಏಕತೆ ಮತ್ತು ಸಮಗ್ರತೆಯನ್ನು ಮೂಡಿಸುವಲ್ಲಿ ಸಂವಿಧಾನದ ಪಾತ್ರ ಮುಖ್ಯ ಎಂಬುದರ ವಿಷಯವನ್ನು ಪ್ರತಿಯೊಬ್ಬ ಸಾರ್ವಜನಿಕರಿಗೂ ತಿಳಿಸಲು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ನಿರ್ಮಿಸಲಾಗಿತ್ತು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಅರಮನೆ ಆನೆಗಳಿಂದ ನಾಲ್ವಡಿ ಕೃಷ್ಣರಾಜ ಒಡೆಯರು, ಕೆಂಪ ನಂಜಮ್ಮಣಿ, ಶ್ರಿಕಂಠದತ್ತ ಒಡೆಯರ್ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ಎರಡು ದಿನ ಸಿಎಂ ಸಿದ್ದರಾಮಯ್ಯ ಪ್ರವಾಸ

ಮೈಸೂರು: ಮೈಸೂರು ಅರಮನೆ ಮಂಡಳಿ ವತಿಯಿಂದ ಇಂದು ಅರಮನೆ ಆವರಣದಲ್ಲಿ ನಡೆಯುತ್ತಿರುವ ಅರಮನೆ ಫಲಪುಷ್ಪ ಪ್ರದರ್ಶನ 2023 ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿ ಸಂತೋಷ ವ್ಯಕ್ತಪಡಿಸಿದರು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಕಳೆದ ಬಾರಿಯಂತೆ ಈ ವರ್ಷವೂ ಕೂಡ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಆನೆಯ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿಕಂಠದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ
CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಹಣ್ಣುಗಳಿಂದ ಚಿತ್ರಿಸಿದ ಕಲಾಕೃತಿಗಳಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಆಕೃತಿಗಳು ಜನರ ಮನ ಸೆಳೆದವು. ವಿವಿಧ ರೀತಿಯ ಕಲಾಕೃತಿಗಳು, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಸೂಪರ್ ಮ್ಯಾನ್ ಹೀಗೆ ಮಕ್ಕಳಿಗೆ ಪ್ರಿಯವಾಗಿರುವ ಹೂಗಳಿಂದ ಅಲಂಕೃತಗೊಂಡ ವಿವಿಧ ಕಲಾಕೃತಿಗಳು, ಸೆಲ್ಫಿ ಪಾಯಿಂಟ್, ಕ್ರಿಸ್​ಮಸ್ ಟ್ರೀಗಳು ಜನರನ್ನು ಆಕರ್ಷಿಸಿದವು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಮೈಸೂರು ಅರಮನೆ ಮಂಡಳಿ ವತಿಯಿಂದ ರಾಜ ಮನೆತನಕ್ಕೆ ಸೇರಿದ ಆಯ್ದ ಹಳೆಯ ಹಾಗೂ ಅಮೂಲ್ಯ ಛಾಯಾ ಚಿತ್ರಗಳು, ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸಿದ ಬೊಂಬೆಗಳು, ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಮೈಸೂರು ಅರಮನೆ ಕುರಿತು ವಿಡಿಯೋ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ 'ಸರ್ವರೂ ಸಮಾನರು' ಎಂಬ ಸಂದೇಶವನ್ನು ಸಾರುವ ಸಂವಿಧಾನ ಪೀಠಿಕೆ, ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಸಮಾನತೆ, ಏಕತೆ ಮತ್ತು ಸಮಗ್ರತೆಯನ್ನು ಮೂಡಿಸುವಲ್ಲಿ ಸಂವಿಧಾನದ ಪಾತ್ರ ಮುಖ್ಯ ಎಂಬುದರ ವಿಷಯವನ್ನು ಪ್ರತಿಯೊಬ್ಬ ಸಾರ್ವಜನಿಕರಿಗೂ ತಿಳಿಸಲು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ನಿರ್ಮಿಸಲಾಗಿತ್ತು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಅರಮನೆ ಆನೆಗಳಿಂದ ನಾಲ್ವಡಿ ಕೃಷ್ಣರಾಜ ಒಡೆಯರು, ಕೆಂಪ ನಂಜಮ್ಮಣಿ, ಶ್ರಿಕಂಠದತ್ತ ಒಡೆಯರ್ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

CM Siddaramaiah inaugurated the Palace Flower Show
ಅರಮನೆ ಫಲಪುಷ್ಪ ಪ್ರದರ್ಶನ

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ಎರಡು ದಿನ ಸಿಎಂ ಸಿದ್ದರಾಮಯ್ಯ ಪ್ರವಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.