ETV Bharat / state

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ - ಯಡಿಯೂರಪ್ಪ ಚಾಮುಂಡಿ ಬೆಟ್ಟಕ್ಕೆ ಭೇಟಿ

ಸಿಎಂ ಯಡಿಯೂರಪ್ಪ ಇಂದು ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿದ್ದಾರೆ. ಇದಕ್ಕೂ ಮುನ್ನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಕೆ.ಆರ್​​.ಎಸ್​​ ಗೆ ತೆರಳಲಿದ್ದಾರೆ.

CM Yeddyurappa
author img

By

Published : Aug 29, 2019, 11:41 AM IST

ಮೈಸೂರು: ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಸಿಎಂ ಯಡಿಯೂರಪ್ಪ ಮೊದಲು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ ಸೇರಿದಂತೆ ಇತರ ಸಚಿವರ ಜೊತೆ ಆಗಮಿಸಲಿರುವ ಸಿಎಂ, ಮೊದಲು ಹೆಲಿಪ್ಯಾಡ್ ನಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಕೆ.ಆರ್.ಎಸ್. ಗೆ ತೆರಳಲಿದ್ದಾರೆ. ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿರುವ ಸಿಎಂ ಅವರಿಗೆ ಚಾಮುಂಡಿ ಬೆಟ್ಟದ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲು ಸಕಲ ಸಿದ್ಧತೆಯೊಂದಿಗೆ ತಯಾರಾಗಿದೆ.

ಕಬಿನಿ ಮರೆತ ಸಿಎಂ: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ ಸಹ ತುಂಬಿದ್ದು, ಸಂಪ್ರದಾಯದಂತೆ ಕೆ.ಆರ್.ಎಸ್ ಗೆ ಬಾಗಿನ ಅರ್ಪಿಸಲು ಆಗಮಿಸುವ ಸಿಎಂ ಕಬಿನಿಗೂ ಬಾಗಿನ ಅರ್ಪಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಆದರೆ, ಈ ಬಾರಿ ಯಡಿಯೂರಪ್ಪ ಅವರು ಆ ಸಂಪ್ರದಾಯವನ್ನು ಮರೆತಿದ್ದಾರೆ ಎನ್ನುತ್ತಾರೆ ಸಾರ್ವಜನಿಕರು.

ಮೈಸೂರು: ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಸಿಎಂ ಯಡಿಯೂರಪ್ಪ ಮೊದಲು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ ಸೇರಿದಂತೆ ಇತರ ಸಚಿವರ ಜೊತೆ ಆಗಮಿಸಲಿರುವ ಸಿಎಂ, ಮೊದಲು ಹೆಲಿಪ್ಯಾಡ್ ನಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಕೆ.ಆರ್.ಎಸ್. ಗೆ ತೆರಳಲಿದ್ದಾರೆ. ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿರುವ ಸಿಎಂ ಅವರಿಗೆ ಚಾಮುಂಡಿ ಬೆಟ್ಟದ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲು ಸಕಲ ಸಿದ್ಧತೆಯೊಂದಿಗೆ ತಯಾರಾಗಿದೆ.

ಕಬಿನಿ ಮರೆತ ಸಿಎಂ: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ ಸಹ ತುಂಬಿದ್ದು, ಸಂಪ್ರದಾಯದಂತೆ ಕೆ.ಆರ್.ಎಸ್ ಗೆ ಬಾಗಿನ ಅರ್ಪಿಸಲು ಆಗಮಿಸುವ ಸಿಎಂ ಕಬಿನಿಗೂ ಬಾಗಿನ ಅರ್ಪಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಆದರೆ, ಈ ಬಾರಿ ಯಡಿಯೂರಪ್ಪ ಅವರು ಆ ಸಂಪ್ರದಾಯವನ್ನು ಮರೆತಿದ್ದಾರೆ ಎನ್ನುತ್ತಾರೆ ಸಾರ್ವಜನಿಕರು.

Intro:ಮೈಸೂರು: ಕೆ.ಆರ್.ಎಸ್ ಗೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಸಿಎಂ ಯಡಿಯೂರಪ್ಪ ಮೊಸಲು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.


Body:ಕೆ.ಆರ್.ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುತ್ತಿರುವ ಸಿಎಂ ಯಡಿಯೂರಪ್ಪ ಇಂದು ಬೆಳಿಗ್ಗೆ ೧೧:೩೦ಕ್ಕೆ ಲಲಿತ್ ಮಹಲ್ ಹೆಲಿಪ್ಯಾಡ್ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ ಸೇರಿದಂತೆ ಇತರ ಸಚಿವರ ಜೊತೆ ಆಗಮಿಸಲಿರುವ ಸಿಎಂ ಅವರು ಮೊದಲು ಹೆಲಿಪ್ಯಾಡ್ ನಿಂದ್ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ಕೆ.ಆರ್.ಎಸ್. ಗೆ ತೆರಳಲಿದ್ದಾರೆ.
ಮುಖ್ಯಮಂತ್ರಿ ಆದ ಮೇಲೆ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿರುವ ಸಿಎಂ ಅವರಿಗೆ ಚಾಮುಂಡಿ ಬೆಟ್ಟದ ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಗುವುದು.

ಕಬಿನಿ ಮರೆತ ಸಿಎಂ: ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ ಸಹ ತುಂಬಿದ್ದು ಸಂಪ್ರದಾಯದಂತೆ ಕೆ.ಆರ್.ಎಸ್ ಗೆ ಬಾಗಿನ ಅರ್ಪಿಸಲು ಆಗಮಿಸುವ ಸಿಎಂ ಕಬಿನಿಗೂ ಬಾಗಿನ ಅರ್ಪಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ.
ಆದರೆ, ಈ ಬಾರಿ ಯಡಿಯೂರಪ್ಪ ಅವರು ಆ ಸಂಪ್ರದಾಯವನ್ನು ಮರೆತಿದ್ದಾರೆ ಎನ್ನುತ್ತಾರೆ ರೈತ ಸಂಘದ ನಾಯಕರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.