ETV Bharat / state

ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು?: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಗೀತಾ ಶಿವರಾಜ್​ಕುಮಾರ್

ಮಕ್ಕಳ ಅನುಕೂಲಕ್ಕೆ ತಕ್ಕಂತೆ ಪಠ್ಯ ಬದಲಾಯಿಸಿದರೆ ಅದರಲ್ಲಿ ತಪ್ಪೇನು? ಎಂದು ಹೇಳುವ ಮೂಲಕ ಕಾಂಗ್ರೆಸ್​ ಮುಖಂಡೆ ಗೀತಾ ಶಿವ ರಾಜ್​ಕುಮಾರ್ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

author img

By

Published : Jun 17, 2023, 1:42 PM IST

Updated : Jun 17, 2023, 3:50 PM IST

geetha
ಗೀತಾ ಶಿವ ರಾಜ್​ಕುಮಾರ್
ಕಾಂಗ್ರೆಸ್​ ನಾಯಕಿ ಗೀತಾ ಶಿವರಾಜ್​ಕುಮಾರ್ ಮಾತನಾಡುತ್ತಿರುವುದು

ಮೈಸೂರು: ರಾಜ್ಯ ಸರ್ಕಾರವು ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಮಕ್ಕಳ ಅನುಕೂಲಕ್ಕೆ ತಕ್ಕಂತೆ ಪಠ್ಯ ಬದಲಾಯಿಸಿದರೆ ಅದರಲ್ಲಿ ತಪ್ಪೇನು? ಎಂದು ಕಾಂಗ್ರೆಸ್​ ನಾಯಕಿ ಗೀತಾ ಶಿವರಾಜ್​ಕುಮಾರ್​​ ಹೇಳಿದರು. ಈ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು ಎಂದರು. ಒಂದೊಂದು ಸರ್ಕಾರ ಒಂದೊಂದು ರೀತಿಯಲ್ಲಿ ಪಠ್ಯ ಬದಲಾವಣೆ ಮಾಡುವ ಕ್ರಮದಿಂದ ಮಕ್ಕಳಲ್ಲಿ ಗೊಂದಲ ಆಗುವುದಿಲ್ಲವೇ? ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದರು.

ನಾನು ಇಲ್ಲಿ ಈ ವಿಚಾರಗಳ ಬಗ್ಗೆ ಏನನ್ನೂ ಮಾತನಾಡುವುದಿಲ್ಲ. ಮಕ್ಕಳ ಒಳ್ಳೆಯದಕ್ಕೆ ಪಠ್ಯ ಬದಲಾವಣೆ ಮಾಡಿದರೆ ಒಳ್ಳೆಯದು ಅಲ್ಲವೇ ಎಂದು ಹೇಳಿದರು. ಬಳಿಕ ಸಿದ್ದರಾಮಯ್ಯ ಭೇಟಿ ವಿಚಾರವಾಗಿ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸೌಜನ್ಯಯುತ ಭೇಟಿಯಾಗಿತ್ತು ಅಷ್ಟೇ. ಚುನಾವಣಾ ಪ್ರಚಾರದ ನಂತರ ಭೇಟಿ ಮಾಡಿರಲಿಲ್ಲ. ಈ ಕಾರಣದಿಂದ ಅವರನ್ನು ಮೊನ್ನೆ ಭೇಟಿ ಮಾಡಿದ್ದೆವು" ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಇಲ್ಲಿ ಈ ವಿಚಾರ ಮಾತನಾಡುವುದಿಲ್ಲ. ಇದು ಸೂಕ್ತ ಸ್ಥಳ ಅಲ್ಲ. ರಾಜಕೀಯ ಮಾತನಾಡಲ್ಲ. ಮುಂದೊಂದು ದಿನ ಈ ಬಗ್ಗೆ ಮಾತನಾಡುತ್ತೇನೆ" ಎಂದು ಹೇಳುವ ಮೂಲಕ ಕುತೂಹಲ ಕಾಯ್ದಿರಿಸಿಕೊಂಡರು. ಬಳಿಕ ಶಕ್ತಿಧಾಮದ ಮಕ್ಕಳೊಂದಿಗೆ ಕುಕ್ಕರಹಳ್ಳಿ ಕೆರೆಯಲ್ಲಿ ಪಕ್ಷಿ ವೀಕ್ಷಣೆ ಮಾಡಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶೀಘ್ರವೇ ಶಿಕ್ಷಣಾಸಕ್ತರ ಸಭೆ ನಡೆಸಲು ಬಿಜೆಪಿ ನಿರ್ಧಾರ

ಸರ್ಕಾರವು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು, ಆರ್​ಎಸ್​ಎಸ್​ ಸಂಸ್ಥಾಪಕ ಹೆಡ್ಗೇವಾರ್​, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್​ ಹಾಗೂ ಚಿಂತಕ ಸೂಲಿಬೆಲೆ ಚಕ್ರವರ್ತಿ ಕುರಿತಾದ ಪಾಠ ತೆಗೆಯಲು ತೀರ್ಮಾನಿಸಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್​ಎಸ್​ಎಸ್​ ಮುಖಂಡ ಹೆಡ್ಗೇವಾರ್, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್​ ಹಾಗೂ ಚಿಂತಕ ಸೂಲಿಬೆಲೆ ಚಕ್ರವರ್ತಿಯವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಮೊದಲು ತಿಳಿಸಿದ್ದರು.

ಈ ಹಿಂದೆ ಇದ್ದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಸಾವಿತ್ರಿಬಾಯಿ ಪುಲೆ ಅವರ ವಿಷಯವನ್ನು ತೆಗೆದಿತ್ತು. ಅದನ್ನು ಮರಳಿ ಸೇರಿಸಲಾಗಿದೆ. ನೀ ಹೋದ ಮರುದಿನ ಅಂಬೇಡ್ಕರ್​ ಅವರ ಬಗೆಗಿನ ಕವನ, ಮಗಳಿಗೆ ಬರೆದ ಪತ್ರ ಎಂಬ ನೆಹರೂ ಅವರದ್ದನ್ನೂ ಸಹ ಮರಳಿ ಸೇರಿಸಲಾಗುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ರಾಜಪ್ಪ ದಳವಾಯಿ, ರಮೇಶ್​ ಕುಮಾರ್​, ಪಿ.ಆರ್​ ಚಂದ್ರಶೇಖರ್​, ಅಶ್ವತ್ಥನಾರಾಯಣ ಹಾಗೂ ರಾಜೇಶ್ ಸೇರಿದಂತೆ ಐದು ಮಂದಿಯ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಸಮಿತಿ ಮುಂದಿನ ದಿನಗಳಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವರದಿ ನೀಡಲಿದೆ ಎಂದು ಅವರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ಖಂಡಿತ ಮಾಡುತ್ತೇವೆ.. ಕಾಂಗ್ರೆಸನ್ನು ಪ್ರಶ್ನಿಸುವ ಹಕ್ಕು ಬಿಜೆಪಿಯವರಿಗೆ ಇಲ್ಲ: ಮಧು ಬಂಗಾರಪ್ಪ

ಕಾಂಗ್ರೆಸ್​ ನಾಯಕಿ ಗೀತಾ ಶಿವರಾಜ್​ಕುಮಾರ್ ಮಾತನಾಡುತ್ತಿರುವುದು

ಮೈಸೂರು: ರಾಜ್ಯ ಸರ್ಕಾರವು ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಮಕ್ಕಳ ಅನುಕೂಲಕ್ಕೆ ತಕ್ಕಂತೆ ಪಠ್ಯ ಬದಲಾಯಿಸಿದರೆ ಅದರಲ್ಲಿ ತಪ್ಪೇನು? ಎಂದು ಕಾಂಗ್ರೆಸ್​ ನಾಯಕಿ ಗೀತಾ ಶಿವರಾಜ್​ಕುಮಾರ್​​ ಹೇಳಿದರು. ಈ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು ಎಂದರು. ಒಂದೊಂದು ಸರ್ಕಾರ ಒಂದೊಂದು ರೀತಿಯಲ್ಲಿ ಪಠ್ಯ ಬದಲಾವಣೆ ಮಾಡುವ ಕ್ರಮದಿಂದ ಮಕ್ಕಳಲ್ಲಿ ಗೊಂದಲ ಆಗುವುದಿಲ್ಲವೇ? ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದರು.

ನಾನು ಇಲ್ಲಿ ಈ ವಿಚಾರಗಳ ಬಗ್ಗೆ ಏನನ್ನೂ ಮಾತನಾಡುವುದಿಲ್ಲ. ಮಕ್ಕಳ ಒಳ್ಳೆಯದಕ್ಕೆ ಪಠ್ಯ ಬದಲಾವಣೆ ಮಾಡಿದರೆ ಒಳ್ಳೆಯದು ಅಲ್ಲವೇ ಎಂದು ಹೇಳಿದರು. ಬಳಿಕ ಸಿದ್ದರಾಮಯ್ಯ ಭೇಟಿ ವಿಚಾರವಾಗಿ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸೌಜನ್ಯಯುತ ಭೇಟಿಯಾಗಿತ್ತು ಅಷ್ಟೇ. ಚುನಾವಣಾ ಪ್ರಚಾರದ ನಂತರ ಭೇಟಿ ಮಾಡಿರಲಿಲ್ಲ. ಈ ಕಾರಣದಿಂದ ಅವರನ್ನು ಮೊನ್ನೆ ಭೇಟಿ ಮಾಡಿದ್ದೆವು" ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಇಲ್ಲಿ ಈ ವಿಚಾರ ಮಾತನಾಡುವುದಿಲ್ಲ. ಇದು ಸೂಕ್ತ ಸ್ಥಳ ಅಲ್ಲ. ರಾಜಕೀಯ ಮಾತನಾಡಲ್ಲ. ಮುಂದೊಂದು ದಿನ ಈ ಬಗ್ಗೆ ಮಾತನಾಡುತ್ತೇನೆ" ಎಂದು ಹೇಳುವ ಮೂಲಕ ಕುತೂಹಲ ಕಾಯ್ದಿರಿಸಿಕೊಂಡರು. ಬಳಿಕ ಶಕ್ತಿಧಾಮದ ಮಕ್ಕಳೊಂದಿಗೆ ಕುಕ್ಕರಹಳ್ಳಿ ಕೆರೆಯಲ್ಲಿ ಪಕ್ಷಿ ವೀಕ್ಷಣೆ ಮಾಡಿದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶೀಘ್ರವೇ ಶಿಕ್ಷಣಾಸಕ್ತರ ಸಭೆ ನಡೆಸಲು ಬಿಜೆಪಿ ನಿರ್ಧಾರ

ಸರ್ಕಾರವು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು, ಆರ್​ಎಸ್​ಎಸ್​ ಸಂಸ್ಥಾಪಕ ಹೆಡ್ಗೇವಾರ್​, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್​ ಹಾಗೂ ಚಿಂತಕ ಸೂಲಿಬೆಲೆ ಚಕ್ರವರ್ತಿ ಕುರಿತಾದ ಪಾಠ ತೆಗೆಯಲು ತೀರ್ಮಾನಿಸಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಆರ್​ಎಸ್​ಎಸ್​ ಮುಖಂಡ ಹೆಡ್ಗೇವಾರ್, ಹಿಂದೂ ಮಹಾಸಭಾ ಮುಖಂಡ ವಿ.ಡಿ ಸಾವರ್ಕರ್​ ಹಾಗೂ ಚಿಂತಕ ಸೂಲಿಬೆಲೆ ಚಕ್ರವರ್ತಿಯವರ ಪಠ್ಯವನ್ನು ಕೈಬಿಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಮೊದಲು ತಿಳಿಸಿದ್ದರು.

ಈ ಹಿಂದೆ ಇದ್ದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಸಾವಿತ್ರಿಬಾಯಿ ಪುಲೆ ಅವರ ವಿಷಯವನ್ನು ತೆಗೆದಿತ್ತು. ಅದನ್ನು ಮರಳಿ ಸೇರಿಸಲಾಗಿದೆ. ನೀ ಹೋದ ಮರುದಿನ ಅಂಬೇಡ್ಕರ್​ ಅವರ ಬಗೆಗಿನ ಕವನ, ಮಗಳಿಗೆ ಬರೆದ ಪತ್ರ ಎಂಬ ನೆಹರೂ ಅವರದ್ದನ್ನೂ ಸಹ ಮರಳಿ ಸೇರಿಸಲಾಗುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ರಾಜಪ್ಪ ದಳವಾಯಿ, ರಮೇಶ್​ ಕುಮಾರ್​, ಪಿ.ಆರ್​ ಚಂದ್ರಶೇಖರ್​, ಅಶ್ವತ್ಥನಾರಾಯಣ ಹಾಗೂ ರಾಜೇಶ್ ಸೇರಿದಂತೆ ಐದು ಮಂದಿಯ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಈ ಸಮಿತಿ ಮುಂದಿನ ದಿನಗಳಲ್ಲಿ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವರದಿ ನೀಡಲಿದೆ ಎಂದು ಅವರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ಖಂಡಿತ ಮಾಡುತ್ತೇವೆ.. ಕಾಂಗ್ರೆಸನ್ನು ಪ್ರಶ್ನಿಸುವ ಹಕ್ಕು ಬಿಜೆಪಿಯವರಿಗೆ ಇಲ್ಲ: ಮಧು ಬಂಗಾರಪ್ಪ

Last Updated : Jun 17, 2023, 3:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.