ETV Bharat / state

ಕಾಂಗ್ರೆಸ್​ ಶಾಸಕ ತನ್ವೀರ್​ ಸೇಠ್​ ಆಪ್ತ ಸಹಾಯಕನ ಮೇಲೆ ಮಾರಣಾಂತಿಕ ಹಲ್ಲೆ!

author img

By

Published : Mar 6, 2020, 8:45 AM IST

ಕಾಂಗ್ರೆಸ್​ ಶಾಸಕ ತನ್ವೀರ್​ ಸೇಠ್​ ಆಪ್ತ ಸಹಾಯಕನ ಮೇಲೆ ಕೆಲ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ತನ್ವೀರ್​ ಸೇಠ್​ ಆಪ್ತ ಸಹಾಯಕನ ಮೇಲೆ ಮಾರಣಾಂತಿಕ ಹಲ್ಲೆ
ತನ್ವೀರ್​ ಸೇಠ್​ ಆಪ್ತ ಸಹಾಯಕನ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್​ ಶಾಸಕ ತನ್ವೀರ್​​ ಸೇಠ್​ ಕೊಲೆ ಯತ್ನ ನಡೆದಿತ್ತು. ಆ ಸುದ್ದಿ ಮಾಸುವ ಮುನ್ನವೇ ಇದೀಗ ಅವರ ಆಪ್ತನ ಕೊಲೆ ಯತ್ನ ಸಹ ನಡೆದಿದೆ.

ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ರಜನಿ ಅಣ್ಣಯ್ಯ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮದೇವತೆಯ ಹಬ್ಬದ ವೇಳೆ ಲಾಂಗು ಬೀಸಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

Congress MLA Tanveer Sait close associate Brutally Attacked
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾಂಗ್ರೆಸ್​ ಮುಖಂಡರಾಗಿರುವ ರಜನಿ ಅಣ್ಣಯ್ಯ ಜಾತ್ರೆಯಲ್ಲಿ ಭಾಗಿಯಾಗಿದ್ದರು. ರಾಜಕೀಯ ವೈಷಮ್ಯದಿಂದಲೇ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಯರಗನಹಳ್ಳಿಯ ಮಹದೇವು ಹಾಗೂ ಚಿದಂಬರಂ ಈ ಕೃತ್ಯವೆಸಗಿದ್ದಾರೆ. ತಕ್ಷಣವೇ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಪಿಗಳಲ್ಲಿ ಒಬ್ಬ ಮಹದೇವನನ್ನ ಗ್ರಾಮಸ್ಥರು ಹಿಡಿದು ಪೊಲೀಸರ ವಶಕ್ಕೆ ನೀಡಲಾಗಿದ್ದು, ಇನ್ನೋರ್ವ ಆರೋಪಿ ಚಿದಂಬರಂ ಪರಾರಿಯಾಗಿದ್ದಾನೆ.

ಘಟನೆ ನಡೆಯುತ್ತಿದ್ದಂತೆ ಯರಗನಹಳ್ಳಿಯಲ್ಲಿ ವ್ಯಾಪಕ ಪೊಲೀಸ್​ ಬಂದೋಬಸ್ತ್​ ನೀಡಲಾಗಿದೆ.

ಮೈಸೂರು: ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್​ ಶಾಸಕ ತನ್ವೀರ್​​ ಸೇಠ್​ ಕೊಲೆ ಯತ್ನ ನಡೆದಿತ್ತು. ಆ ಸುದ್ದಿ ಮಾಸುವ ಮುನ್ನವೇ ಇದೀಗ ಅವರ ಆಪ್ತನ ಕೊಲೆ ಯತ್ನ ಸಹ ನಡೆದಿದೆ.

ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ರಜನಿ ಅಣ್ಣಯ್ಯ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮದೇವತೆಯ ಹಬ್ಬದ ವೇಳೆ ಲಾಂಗು ಬೀಸಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

Congress MLA Tanveer Sait close associate Brutally Attacked
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾಂಗ್ರೆಸ್​ ಮುಖಂಡರಾಗಿರುವ ರಜನಿ ಅಣ್ಣಯ್ಯ ಜಾತ್ರೆಯಲ್ಲಿ ಭಾಗಿಯಾಗಿದ್ದರು. ರಾಜಕೀಯ ವೈಷಮ್ಯದಿಂದಲೇ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಯರಗನಹಳ್ಳಿಯ ಮಹದೇವು ಹಾಗೂ ಚಿದಂಬರಂ ಈ ಕೃತ್ಯವೆಸಗಿದ್ದಾರೆ. ತಕ್ಷಣವೇ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಪಿಗಳಲ್ಲಿ ಒಬ್ಬ ಮಹದೇವನನ್ನ ಗ್ರಾಮಸ್ಥರು ಹಿಡಿದು ಪೊಲೀಸರ ವಶಕ್ಕೆ ನೀಡಲಾಗಿದ್ದು, ಇನ್ನೋರ್ವ ಆರೋಪಿ ಚಿದಂಬರಂ ಪರಾರಿಯಾಗಿದ್ದಾನೆ.

ಘಟನೆ ನಡೆಯುತ್ತಿದ್ದಂತೆ ಯರಗನಹಳ್ಳಿಯಲ್ಲಿ ವ್ಯಾಪಕ ಪೊಲೀಸ್​ ಬಂದೋಬಸ್ತ್​ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.