ETV Bharat / state

ಪ್ರಿಯಾಂಕ ಗಾಂಧಿ ಬಂಧಿಸಿ, ಬಿಡುಗಡೆ ಮಾಡಿದ್ದಕ್ಕೆ ಮೈಸೂರು ಕಾಂಗ್ರೆಸ್ ಪ್ರತಿಭಟನೆ - kannada newspaper, etvbharat, congress members, protest, UP government, Priyanka gandi issue, mysuru congress committee, uttarpradesh sonu badra community, gandi circle

ಉತ್ತರಪ್ರದೇಶದಲ್ಲಿ ತುಂಡುಭೂಮಿ ವಿಚಾರಕ್ಕೆ ಗುಂಡಿನ ದಾಳಿ ನಡೆದು 10 ಮಂದಿ ಮೃತಪಟ್ಟಿದ್ದರು. ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋಗುತ್ತಿದ್ದ ಪ್ರಿಯಾಂಕಗಾಂಧಿ ಅವರನ್ನು  ತಡೆದು ಉತ್ತರಪ್ರದೇಶ ಸರ್ಕಾರ ಅಪಮಾನ ಮಾಡಿದೆ ಎಂದು ಮೈಸೂರಿನ ಕಾಂಗ್ರೆಸ್ ಸಮಿತಿಯಿಂದ ಇಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್
author img

By

Published : Jul 20, 2019, 7:24 PM IST

Updated : Jul 20, 2019, 7:31 PM IST

ಮೈಸೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನ ಬಂಧಿಸಿ ಬಿಡುಗಡೆ ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮ ಖಂಡಿಸಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರಿಯಾಂಕಗಾಂಧಿಯನ್ನು ಬಂಧಿಸಿ, ಬಿಡುಗಡೆ ಮಾಡಿದ್ದಕ್ಕೆ ಕಾಂಗ್ರೆಸ್ ಪ್ರತಿಭಟನೆ: ಮೈಸೂರು

ಉತ್ತರ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ತುಂಡುಭೂಮಿ ವಿಚಾರಕ್ಕೆ ಬುಧವಾರ ಗುಂಡಿನ ದಾಳಿ ನಡೆದು 10 ಮಂದಿ ಮೃತಪಟ್ಟಿದ್ದರು. ಸಾವನ್ನಪ್ಪಿದ ಉತ್ತರಪ್ರದೇಶದ ಸೋನಾಭದ್ರ ಬುಡುಕಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋಗುತ್ತಿದ್ದ ಪ್ರಿಯಾಂಕ ಗಾಂಧಿಯನ್ನು ತಡೆದು ಉತ್ತರಪ್ರದೇಶ ಸರ್ಕಾರ ಅವಮಾನ ಮಾಡಿದೆ ಎಂದು ಮೈಸೂರಿನ ಕಾಂಗ್ರೆಸ್ ಸಮಿತಿ ವತಿಯಿಂದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಹೋರಾಟ ಮನೋಭಾವನೆಯನ್ನು ಸರ್ಕಾರಿ ಯಂತ್ರದ ಮೂಲಕ ದುರುಪಯೋಗ ಮಾಡುತ್ತಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ತೊಘಲಕ್ ದರ್ಬಾರ್ ನಡೆಸುತ್ತ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಾಳಿಗೆ ತೂರುತ್ತಿದ್ದಾರೆಂದು ಕಿಡಿಕಾಡಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಿಯಾಂಕ ಗಾಂಧಿಯೊಂದಿಗಿನ ಈ ವರ್ತನೆ ಯೋಗ್ಯವಲ್ಲ, ಬಿಜೆಪಿ ನಡೆ ಸರಿಯಿಲ್ಲವೆಂದು ಹರಿಹಾಯ್ದರು.

ಮೈಸೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನ ಬಂಧಿಸಿ ಬಿಡುಗಡೆ ಮಾಡಿರುವ ಉತ್ತರ ಪ್ರದೇಶ ಸರ್ಕಾರದ ಕ್ರಮ ಖಂಡಿಸಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರಿಯಾಂಕಗಾಂಧಿಯನ್ನು ಬಂಧಿಸಿ, ಬಿಡುಗಡೆ ಮಾಡಿದ್ದಕ್ಕೆ ಕಾಂಗ್ರೆಸ್ ಪ್ರತಿಭಟನೆ: ಮೈಸೂರು

ಉತ್ತರ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ತುಂಡುಭೂಮಿ ವಿಚಾರಕ್ಕೆ ಬುಧವಾರ ಗುಂಡಿನ ದಾಳಿ ನಡೆದು 10 ಮಂದಿ ಮೃತಪಟ್ಟಿದ್ದರು. ಸಾವನ್ನಪ್ಪಿದ ಉತ್ತರಪ್ರದೇಶದ ಸೋನಾಭದ್ರ ಬುಡುಕಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋಗುತ್ತಿದ್ದ ಪ್ರಿಯಾಂಕ ಗಾಂಧಿಯನ್ನು ತಡೆದು ಉತ್ತರಪ್ರದೇಶ ಸರ್ಕಾರ ಅವಮಾನ ಮಾಡಿದೆ ಎಂದು ಮೈಸೂರಿನ ಕಾಂಗ್ರೆಸ್ ಸಮಿತಿ ವತಿಯಿಂದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಹೋರಾಟ ಮನೋಭಾವನೆಯನ್ನು ಸರ್ಕಾರಿ ಯಂತ್ರದ ಮೂಲಕ ದುರುಪಯೋಗ ಮಾಡುತ್ತಿದ್ದಾರೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ತೊಘಲಕ್ ದರ್ಬಾರ್ ನಡೆಸುತ್ತ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಾಳಿಗೆ ತೂರುತ್ತಿದ್ದಾರೆಂದು ಕಿಡಿಕಾಡಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಿಯಾಂಕ ಗಾಂಧಿಯೊಂದಿಗಿನ ಈ ವರ್ತನೆ ಯೋಗ್ಯವಲ್ಲ, ಬಿಜೆಪಿ ನಡೆ ಸರಿಯಿಲ್ಲವೆಂದು ಹರಿಹಾಯ್ದರು.

Intro:ಕಾಂಗ್ರೆಸ್ ಪ್ರತಿಭಟನೆ


Body:ಕಾಂಗ್ರೆಸ್ ಪ್ರತಿಭಟನೆ


Conclusion:ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ ಬಂಧಿಸಿ,ಬಿಡುಗಡೆ ಮಾಡಿದ್ದಕ್ಕೆ ಕಾಂಗ್ರೆಸ್ ಪ್ರತಿಭಟನೆ
ಮೈಸೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ ಅವರನ್ನು ಬಂಧಿಸಿ ಬಿಡುಗಡೆ ಮಾಡಿರುವ ಉತ್ತರ ಪ್ರದೇಶದ ಕ್ರಮ ಖಂಡಿಸಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿವತಿಯಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
ತುಂಡುಭೂಮಿ ವಿಚಾರಕ್ಕೆ ಬಧುವಾರ ಗುಂಡಿನ ದಾಳಿ ನಡೆದು 10 ಮಂದಿ ಸಾವನ್ನಪ್ಪಿದ ಉತ್ತರಪ್ರದೇಶದ ಸೋನ್ ಭದ್ರ ಬುಡುಕಟ್ಟು ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಹೋಗುತ್ತಿದ್ದ ಪ್ರಿಯಾಂಕಗಾಂಧಿ ಅವರನ್ನು ತಡೆದ ಉತ್ತರಪ್ರದೇಶ ಸರ್ಕಾರ ಅಪಮಾನ ಮಾಡಿದೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಹೋರಾಟ ಮನೋಭಾವನೆಯನ್ನು ಸರ್ಕಾರಿ ಯಂತ್ರದ ದುರುಪಯೋಗ ಮಾಡಿಕೊಂಡು ಹೋರಾಟ ಧಮನ ಮಾಡಲಾಗುತ್ತಿದೆ.ಯುಪಿ ಸಿಎಂ ಯೋಗಿ ಆದಿತ್ಯನಾಥ್ ತೊಘಲಕ್ ದರ್ಬಾರ್ ನಡೆಸುತ್ತ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ಕಿಡಿಕಾಡಿದರು.
ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾಧ್ಯಮಗಳೊಂದಿಗೆ ಮಾತನಾಡಿ,ಬಿಜೆಪಿ ವಿರುದ್ಧ ಹರಿಹಾಯ್ದರು.
Last Updated : Jul 20, 2019, 7:31 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.