ETV Bharat / state

ಆರಂಭವಾಗದ ಸಿದ್ಧತೆ: ನಾಡಹಬ್ಬ ದಸರಾ ಮೇಲೆ ಕೊರೊನಾ ಕರಿ ನೆರಳು

author img

By

Published : Jul 27, 2020, 2:49 PM IST

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈಗಾಗಲೇ ಸಾವಿನ ಸಂಖ್ಯೆಯೂ ಏರುತ್ತಿದೆ. ಜೊತೆಗೆ ಕೊರೊನಾ ಸಮುದಾಯಕ್ಕೆ ಹರಡುವ ಭೀತಿ ಇರುವುದರಿಂದ ಈ ಬಾರಿ ನಾಡಹಬ್ಬ ದಸರಾ ಅದ್ಧೂರಿಯಾಗಿ ನಡೆಯುವುದು ಅನುಮಾನವಾಗಿದ್ದು, ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರ ಜರುಗಲಿದೆ ಎಂಬ ಮಾತುಗಳು ಈಗಾಗಲೇ ಕೇಳಿ ಬರುತ್ತಿವೆ.

Mysore
ನಾಡಹಬ್ಬ ದಸರಾಗೆ ಕೊರೊನಾದ ಕರಿ ನೆರಳು..

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾಗೆ 3 ತಿಂಗಳು ಮಾತ್ರ ಬಾಕಿಯಿದ್ದು, ಈವರೆಗೆ ಯಾವುದೇ ಸಿದ್ಧತೆಗಳು ಆರಂಭವಾಗಿಲ್ಲ. ಈ ಪರಿಸ್ಥಿತಿ ನೋಡಿದರೆ ಈ ಬಾರಿ ನಾಡಹಬ್ಬ ದಸರಾ ಸರಳವಾಗಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ನಾಡಹಬ್ಬ ದಸರಾಗೆ ಕೊರೊನಾದ ಕರಿ ನೆರಳು..

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವುಗಳ ಸಂಖ್ಯೆಯೂ ಏರುತ್ತಿದೆ. ಜೊತೆಗೆ ಕೊರೊನಾ ಸಮುದಾಯಕ್ಕೆ ಹರಡುವ ಭೀತಿ ಇರುವುದರಿಂದ ನಾಡಹಬ್ಬ ಅದ್ಧೂರಿಯಾಗಿ ನಡೆಯುವುದು ಅನುಮಾನವಾಗಿದ್ದು, ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರ ನಡೆಯುತ್ತದೆ ಎಂಬ ಮಾತುಗಳು ಈಗಾಗಲೇ ಕೇಳಿ ಬರುತ್ತಿವೆ. ಮುಖ್ಯವಾಗಿ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯಲು 4 ತಿಂಗಳ ಮುಂಚೆಯೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಬೇಕಿತ್ತು. ಆದರೆ ಆ ಯಾವುದೇ ಸಿದ್ಧತೆಗಳು ಆರಂಭವಾಗಿಲ್ಲ. ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿಗಳೇ ಈ ಬಾರಿ ದಸರಾದ ಬಗ್ಗೆ ಪೂರ್ವ ಸಿದ್ಧತಾ ಸಭೆ ನಡೆದಿಲ್ಲ ಎಂದು ಹೇಳಿದ್ದರು.

ಗಜ ಪಯಣ ಡೌಟ್: ಪ್ರತಿ ವರ್ಷವೂ ದಸರಾದಲ್ಲಿ ಪಾಲ್ಗೊಳ್ಳುವ 15 ಆನೆಗಳನ್ನು 3 ತಿಂಗಳ ಮೊದಲೇ ವಿವಿಧ ಕಾಡಿನ ಶಿಬಿರಕ್ಕೆ ಹೋಗಿ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಆಯ್ಕೆ ಮಾಡಬೇಕಿತ್ತು. ಆಗಸ್ಟ್ ತಿಂಗಳಿನಲ್ಲಿ ಗಜ ಪಯಣ ಮೂಲಕ ಈ ಆನೆಗಳನ್ನು ಮೈಸೂರು ಅರಮನೆಗೆ ಕರೆ ತರುವ ಗಜಪಯಣ ನಡೆಯಬೇಕಿತ್ತು. ಆದರೆ ಈ ಯಾವುದೇ ಕಾರ್ಯಗಳನ್ನು ನಡೆಸಲು ಸರ್ಕಾರದಿಂದ ನಿರ್ದೇಶನ ಇನ್ನೂ ಬಂದಿಲ್ಲ. ಆದ್ದರಿಂದ ಆನೆಗಳ ಆಯ್ಕೆ ಗಜಪಯಣ ಇವುಗಳ ಬಗ್ಗೆ ಇಲ್ಲಿಯವರೆಗೆ ಯಾವುದೇ ಪ್ರಕ್ರಿಯೆ ನಡೆಸಿಲ್ಲ ಎನ್ನುತ್ತಾರೆ ಡಿಸಿಎಫ್ ಅಲೆಕ್ಸಾಂಡರ್.

Mysore
ನಾಡಹಬ್ಬ ದಸರಾಗೆ ಕೊರೊನಾದ ಕರಿ ನೆರಳು..

ಜಂಬೂ ಸವಾರಿಗೆ 3 ತಿಂಗಳು ಬಾಕಿ: ಅಕ್ಟೋಬರ್ 26 ರಂದು ಜಂಬೂ ಸವಾರಿ ನಡೆಯಲಿದ್ದು, ಇದಕ್ಕೆ ಸಿದ್ಧತೆಗಳ ಬಗ್ಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಈ ಬಾರಿ ಕೊರೊನಾ ಇರುವುದರಿಂದ ಅದ್ಧೂರಿ ಜಂಬೂ ಸವಾರಿ ನಡೆಯುವುದು ಅನುಮಾನ. ಈ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಿದ್ಧತೆಗಳನ್ನು ಆರಂಭಿಸಿಲ್ಲ. ಈ‌ ಬಗ್ಗೆ ಸರ್ಕಾರದ ಮಟ್ಟದ ಹಾಗೂ ಉಸ್ತುವಾರಿ ಸಚಿವರ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ ಎಂದು ಹೆಸರನ್ನು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವಾಸೋದ್ಯಮಕ್ಕೆ ಪೆಟ್ಟು: ದಸರಾ ಸರಳವಾಗಿ ನಡೆದರೆ ಪ್ರವಾಸೋದ್ಯಮವನ್ನೇ ನಂಬಿ ಬದುಕುವ ಇಲ್ಲಿನ ಹೋಟೆಲ್​ಗಳು, ವ್ಯಾಪಾರ ಕೇಂದ್ರಗಳು, ಟಾಂಗಾ ಹಾಗೂ ಪ್ರವಾಸಿ ಕೇಂದ್ರಗಳಿಗೆ ಜನರು ಬಾರದಿರುವುದಕ್ಕೆ ಮತ್ತೊಂದು ಹೊಡೆತ ಬೀಳುತ್ತದೆ. ಸಾಮಾಜಿಕ ಅಂತರ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅದ್ಧೂರಿಯಾಗಿ ಅಲ್ಲದಿದ್ದರೂ, ಸರಳ ರೀತಿಯ ದಸರಾ ಉತ್ಸವ ಮಾಡಿದರೆ ಈಗಾಗಲೇ ನಷ್ಟದಲ್ಲಿ ಮುಳುಗಿರುವ ಪ್ರವಾಸೋದ್ಯಮ ಸ್ವಲ್ಪ ಚೇತರಿಕೆ ಕಾಣಬಹುದು ಎನ್ನುತ್ತಾರೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ.

ಒಟ್ಟಿನಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರ್ಕಾರದ ವತಿಯಿಂದ ಸರಳವಾಗಿ ಅರಮನೆ ಒಳಗೆ ನಡೆಸುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ರಾಜರು ನವರಾತ್ರಿ ಪೂಜೆಯನ್ನು ಅರಮನೆ ಒಳಗೆ ಸಾಂಪ್ರದಾಯಿಕ ಹಾಗೂ ಸರಳ ರೀತಿಯಲ್ಲಿ ಆಚರಿಸಲಿದ್ದಾರೆ ಎಂದು ಹೇಳಲಾಗ್ತಿದೆ.

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ದಸರಾಗೆ 3 ತಿಂಗಳು ಮಾತ್ರ ಬಾಕಿಯಿದ್ದು, ಈವರೆಗೆ ಯಾವುದೇ ಸಿದ್ಧತೆಗಳು ಆರಂಭವಾಗಿಲ್ಲ. ಈ ಪರಿಸ್ಥಿತಿ ನೋಡಿದರೆ ಈ ಬಾರಿ ನಾಡಹಬ್ಬ ದಸರಾ ಸರಳವಾಗಿ ನಡೆಯುವುದೇ ಎಂಬ ಅನುಮಾನ ಮೂಡಿದೆ.

ನಾಡಹಬ್ಬ ದಸರಾಗೆ ಕೊರೊನಾದ ಕರಿ ನೆರಳು..

ಮೈಸೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವುಗಳ ಸಂಖ್ಯೆಯೂ ಏರುತ್ತಿದೆ. ಜೊತೆಗೆ ಕೊರೊನಾ ಸಮುದಾಯಕ್ಕೆ ಹರಡುವ ಭೀತಿ ಇರುವುದರಿಂದ ನಾಡಹಬ್ಬ ಅದ್ಧೂರಿಯಾಗಿ ನಡೆಯುವುದು ಅನುಮಾನವಾಗಿದ್ದು, ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರ ನಡೆಯುತ್ತದೆ ಎಂಬ ಮಾತುಗಳು ಈಗಾಗಲೇ ಕೇಳಿ ಬರುತ್ತಿವೆ. ಮುಖ್ಯವಾಗಿ ವಿಶ್ವ ವಿಖ್ಯಾತ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯಲು 4 ತಿಂಗಳ ಮುಂಚೆಯೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಬೇಕಿತ್ತು. ಆದರೆ ಆ ಯಾವುದೇ ಸಿದ್ಧತೆಗಳು ಆರಂಭವಾಗಿಲ್ಲ. ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿಗಳೇ ಈ ಬಾರಿ ದಸರಾದ ಬಗ್ಗೆ ಪೂರ್ವ ಸಿದ್ಧತಾ ಸಭೆ ನಡೆದಿಲ್ಲ ಎಂದು ಹೇಳಿದ್ದರು.

ಗಜ ಪಯಣ ಡೌಟ್: ಪ್ರತಿ ವರ್ಷವೂ ದಸರಾದಲ್ಲಿ ಪಾಲ್ಗೊಳ್ಳುವ 15 ಆನೆಗಳನ್ನು 3 ತಿಂಗಳ ಮೊದಲೇ ವಿವಿಧ ಕಾಡಿನ ಶಿಬಿರಕ್ಕೆ ಹೋಗಿ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಆಯ್ಕೆ ಮಾಡಬೇಕಿತ್ತು. ಆಗಸ್ಟ್ ತಿಂಗಳಿನಲ್ಲಿ ಗಜ ಪಯಣ ಮೂಲಕ ಈ ಆನೆಗಳನ್ನು ಮೈಸೂರು ಅರಮನೆಗೆ ಕರೆ ತರುವ ಗಜಪಯಣ ನಡೆಯಬೇಕಿತ್ತು. ಆದರೆ ಈ ಯಾವುದೇ ಕಾರ್ಯಗಳನ್ನು ನಡೆಸಲು ಸರ್ಕಾರದಿಂದ ನಿರ್ದೇಶನ ಇನ್ನೂ ಬಂದಿಲ್ಲ. ಆದ್ದರಿಂದ ಆನೆಗಳ ಆಯ್ಕೆ ಗಜಪಯಣ ಇವುಗಳ ಬಗ್ಗೆ ಇಲ್ಲಿಯವರೆಗೆ ಯಾವುದೇ ಪ್ರಕ್ರಿಯೆ ನಡೆಸಿಲ್ಲ ಎನ್ನುತ್ತಾರೆ ಡಿಸಿಎಫ್ ಅಲೆಕ್ಸಾಂಡರ್.

Mysore
ನಾಡಹಬ್ಬ ದಸರಾಗೆ ಕೊರೊನಾದ ಕರಿ ನೆರಳು..

ಜಂಬೂ ಸವಾರಿಗೆ 3 ತಿಂಗಳು ಬಾಕಿ: ಅಕ್ಟೋಬರ್ 26 ರಂದು ಜಂಬೂ ಸವಾರಿ ನಡೆಯಲಿದ್ದು, ಇದಕ್ಕೆ ಸಿದ್ಧತೆಗಳ ಬಗ್ಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಈ ಬಾರಿ ಕೊರೊನಾ ಇರುವುದರಿಂದ ಅದ್ಧೂರಿ ಜಂಬೂ ಸವಾರಿ ನಡೆಯುವುದು ಅನುಮಾನ. ಈ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಿದ್ಧತೆಗಳನ್ನು ಆರಂಭಿಸಿಲ್ಲ. ಈ‌ ಬಗ್ಗೆ ಸರ್ಕಾರದ ಮಟ್ಟದ ಹಾಗೂ ಉಸ್ತುವಾರಿ ಸಚಿವರ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ ಎಂದು ಹೆಸರನ್ನು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವಾಸೋದ್ಯಮಕ್ಕೆ ಪೆಟ್ಟು: ದಸರಾ ಸರಳವಾಗಿ ನಡೆದರೆ ಪ್ರವಾಸೋದ್ಯಮವನ್ನೇ ನಂಬಿ ಬದುಕುವ ಇಲ್ಲಿನ ಹೋಟೆಲ್​ಗಳು, ವ್ಯಾಪಾರ ಕೇಂದ್ರಗಳು, ಟಾಂಗಾ ಹಾಗೂ ಪ್ರವಾಸಿ ಕೇಂದ್ರಗಳಿಗೆ ಜನರು ಬಾರದಿರುವುದಕ್ಕೆ ಮತ್ತೊಂದು ಹೊಡೆತ ಬೀಳುತ್ತದೆ. ಸಾಮಾಜಿಕ ಅಂತರ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಅದ್ಧೂರಿಯಾಗಿ ಅಲ್ಲದಿದ್ದರೂ, ಸರಳ ರೀತಿಯ ದಸರಾ ಉತ್ಸವ ಮಾಡಿದರೆ ಈಗಾಗಲೇ ನಷ್ಟದಲ್ಲಿ ಮುಳುಗಿರುವ ಪ್ರವಾಸೋದ್ಯಮ ಸ್ವಲ್ಪ ಚೇತರಿಕೆ ಕಾಣಬಹುದು ಎನ್ನುತ್ತಾರೆ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ್ ಗೌಡ.

ಒಟ್ಟಿನಲ್ಲಿ ಈ ಬಾರಿ ನಾಡಹಬ್ಬ ದಸರಾವನ್ನು ಸರ್ಕಾರದ ವತಿಯಿಂದ ಸರಳವಾಗಿ ಅರಮನೆ ಒಳಗೆ ನಡೆಸುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ರಾಜರು ನವರಾತ್ರಿ ಪೂಜೆಯನ್ನು ಅರಮನೆ ಒಳಗೆ ಸಾಂಪ್ರದಾಯಿಕ ಹಾಗೂ ಸರಳ ರೀತಿಯಲ್ಲಿ ಆಚರಿಸಲಿದ್ದಾರೆ ಎಂದು ಹೇಳಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.