ಮೈಸೂರು: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 50 ಹಸುಗಳನ್ನು ಕೆ.ಆರ್.ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಅಕ್ರಮವಾಗಿ ಕಸಾಯಿಖಾನೆಗೆ 3 ಆಟೋಗಳಲ್ಲಿ 50 ಹಸುಗಳನ್ನು ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕೆ.ಆರ್ ನಗರ ಪೊಲೀಸರು ಚುಂಚನಕಟ್ಟೆ ಬಳಿ ದಾಳಿ ನಡೆಸಿದ್ದಾರೆ. ಸಂತೆಯಿಂದ ಹಸುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, 3 ಆಟೋಗಳನ್ನು ವಶಕ್ಕೆ ಪಡೆದು ಒಬ್ಬ ಆರೋಪಿ ಮಹ್ಮದ್ ಫಾಜ್ವಿಲ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಈ ಸಂಬಂಧ ಕೆ.ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.