ETV Bharat / state

ಕೋವಿಡ್​ ಪರೀಕ್ಷೆಗಳನ್ನು ಹೆಚ್ಚಿಸುತ್ತೇವೆ: ಡಿಸಿ ರೋಹಿಣಿ ಸಿಂಧೂರಿ

author img

By

Published : Mar 31, 2021, 6:06 PM IST

ಮೈಸೂರು ಜಿಲ್ಲೆಯ ಕೋವಿಡ್ ಸ್ಥಿತಿಗತಿಯ ಕುರಿತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದಾಗಿ ತಿಳಿಸಿದರು.

DC Rohini Sindhuri on Mysuru Covid Situation
ಕೋವಿಡ್ ಪ್ರಕರಣಗಳ ಬಗ್ಗೆ ಮೈಸೂರು ಡಿಸಿ ಮಾಹಿ

ಮೈಸೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪರೀಕ್ಷೆಗಳನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಕಳೆದ ಒಂದು ವಾರದಿಂದ ನಗರದಲ್ಲಿ ಕೋವಿಡ್​ ಪ್ರಕರಣಗಳು 100 ರ ಗಡಿ ದಾಟುತ್ತಿವೆ. ಹೀಗಾಗಿ, ಪ್ರತಿ ದಿನ 3 ಸಾವಿರಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡುವ ಗುರಿ ಇಟ್ಟುಕೊಂಡಿದ್ದೇವೆ. ಆ ಮೂಲಕ ಕೋವಿಡ್ ನಿಯಂತ್ರಣ ಮಾಡಬಹುದಾಗಿದೆ. ಕೋವಿಡ್ ಹರಡುವ ಪ್ರಾಥಮಿಕ ವ್ಯಕ್ತಿಯ ಸಂಪರ್ಕ ಕಂಡುಹಿಡಿದರೆ, ಪ್ರಕರಣಗಳನ್ನು ಕಡಿಮೆ ಮಾಡಬಹುದು. ನಮ್ಮಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ. ಆದರೂ, ಜನ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ: ಕೇರಳದಲ್ಲಿ ಕೋವಿಡ್​ ಕೇಸ್​ ಕಡಿಮೆ ಇವೆ, ಗಡಿಭಾಗದವರಿಗೆ ಆಂತಕ ಬೇಡ : ಸಚಿವ ಡಾ. ಸುಧಾಕರ್

ಗ್ರಾಮೀಣ ಪ್ರದೇಶಗಳಿಗಿಂತ ನಗರದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗಿವೆ. ಹಾಗಾಗಿ, ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಶಾಲಾ ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗುತ್ತಿದ್ದು, ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಿಸಲು ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ನಮ್ಮಲ್ಲಿ ಆಕ್ಸಿಜನ್ ಮತ್ತು ಬೆಡ್​ ಕೊರತೆಯಿಲ್ಲ. ಹೆಚ್ಚು ಜನ ಸೇರುವ ಜಾತ್ರೆ, ಉತ್ಸವಗಳಿಗೆ ಅನುಮತಿಯಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮೈಸೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪರೀಕ್ಷೆಗಳನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಕಳೆದ ಒಂದು ವಾರದಿಂದ ನಗರದಲ್ಲಿ ಕೋವಿಡ್​ ಪ್ರಕರಣಗಳು 100 ರ ಗಡಿ ದಾಟುತ್ತಿವೆ. ಹೀಗಾಗಿ, ಪ್ರತಿ ದಿನ 3 ಸಾವಿರಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ಮಾಡುವ ಗುರಿ ಇಟ್ಟುಕೊಂಡಿದ್ದೇವೆ. ಆ ಮೂಲಕ ಕೋವಿಡ್ ನಿಯಂತ್ರಣ ಮಾಡಬಹುದಾಗಿದೆ. ಕೋವಿಡ್ ಹರಡುವ ಪ್ರಾಥಮಿಕ ವ್ಯಕ್ತಿಯ ಸಂಪರ್ಕ ಕಂಡುಹಿಡಿದರೆ, ಪ್ರಕರಣಗಳನ್ನು ಕಡಿಮೆ ಮಾಡಬಹುದು. ನಮ್ಮಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ. ಆದರೂ, ಜನ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ: ಕೇರಳದಲ್ಲಿ ಕೋವಿಡ್​ ಕೇಸ್​ ಕಡಿಮೆ ಇವೆ, ಗಡಿಭಾಗದವರಿಗೆ ಆಂತಕ ಬೇಡ : ಸಚಿವ ಡಾ. ಸುಧಾಕರ್

ಗ್ರಾಮೀಣ ಪ್ರದೇಶಗಳಿಗಿಂತ ನಗರದಲ್ಲಿ ಕೋವಿಡ್​ ಪ್ರಕರಣಗಳು ಹೆಚ್ಚಾಗಿವೆ. ಹಾಗಾಗಿ, ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಶಾಲಾ ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗುತ್ತಿದ್ದು, ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಿಸಲು ಶಾಲಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ನಮ್ಮಲ್ಲಿ ಆಕ್ಸಿಜನ್ ಮತ್ತು ಬೆಡ್​ ಕೊರತೆಯಿಲ್ಲ. ಹೆಚ್ಚು ಜನ ಸೇರುವ ಜಾತ್ರೆ, ಉತ್ಸವಗಳಿಗೆ ಅನುಮತಿಯಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.