ETV Bharat / state

ಮೈಸೂರಿನಲ್ಲಿ ಸರಗಳ್ಳರ ಬಂಧನ: ಮೂರು ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಚೇತನ್ ಮತ್ತು ಕಿರಣ್ ಕಾರ್ಪೊರೇಷನ್ ಬ್ಯಾಂಕ್ ಬಳಿ ಸರ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಈ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರನ್ನು ಕಂಡು ಇಬ್ಬರು ಬೈಕ್ ಏರಿ ವೇಗವಾಗಿ ಹೊರಟಿದ್ದಾರೆ. ಕೂಡಲೇ ಅಲರ್ಟ್​ ಆದ ಪೊಲೀಸರು ಆರೋಪಿಗಳ ಬೈಕ್ ಬೆನ್ನು ಹತ್ತಿ ಬಂಧಿಸಿದ್ದಾರೆ.

author img

By

Published : May 8, 2020, 8:55 AM IST

Detention of Chainsnatcher 3 lakhs worth of jewelery seized in Mysore
ಮೈಸೂರಿನಲ್ಲಿ ಸರಗಳ್ಳರ ಬಂಧನ

ಮೈಸೂರು: ಸರಗಳ್ಳತನ ಮಾಡಿ ಬೈಕ್‌ನಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರ ಬೆನ್ನುಹತ್ತಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.

ಮಂಡ್ಯ ಮೂಲದ ಕಿರಣ್ ಹಾಗೂ ಚೇತನ್ ಬಂಧಿತರೆಂದು ತಿಳಿದುಬಂದಿದೆ. ವಿಜಯನಗರದ ಕಾರ್ಪೊರೇಷನ್ ಬ್ಯಾಂಕ್ ಬಳಿ ಸರಗಳ್ಳರಿಂದ ವಿಜಯನಗರ ಪೊಲೀಸರು 3 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಕಾರ್ಪೊರೇಷನ್ ಬ್ಯಾಂಕ್ ಬಳಿ ಸರಗಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಈ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರನ್ನು ಕಂಡು ಹೆದರಿದ ಇಬ್ಬರು ಬೈಕ್ ಏರಿ ಪರಾರಿಯಾಗಲು ಯತ್ನಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಬೈಕ್ ಚೇಸ್ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ಮೈಸೂರು: ಸರಗಳ್ಳತನ ಮಾಡಿ ಬೈಕ್‌ನಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರ ಬೆನ್ನುಹತ್ತಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.

ಮಂಡ್ಯ ಮೂಲದ ಕಿರಣ್ ಹಾಗೂ ಚೇತನ್ ಬಂಧಿತರೆಂದು ತಿಳಿದುಬಂದಿದೆ. ವಿಜಯನಗರದ ಕಾರ್ಪೊರೇಷನ್ ಬ್ಯಾಂಕ್ ಬಳಿ ಸರಗಳ್ಳರಿಂದ ವಿಜಯನಗರ ಪೊಲೀಸರು 3 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಕಾರ್ಪೊರೇಷನ್ ಬ್ಯಾಂಕ್ ಬಳಿ ಸರಗಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಈ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಪೊಲೀಸರನ್ನು ಕಂಡು ಹೆದರಿದ ಇಬ್ಬರು ಬೈಕ್ ಏರಿ ಪರಾರಿಯಾಗಲು ಯತ್ನಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡು ಪೊಲೀಸರು ಬೈಕ್ ಚೇಸ್ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.