ETV Bharat / state

ಕೊಳೆತ ಹಣ್ಣುಗಳ ಜೊತೆ ಒಳ್ಳೆಯವೂ ಸೇರಿ ಕೆಡಬಹುದೇ? ಸುರೇಶ್​ ಕುಮಾರ್​ಗೆ ದೇವನೂರು ಪತ್ರ - ಹಿರಿಯ ಸಾಹಿತಿ ದೇವನೂರ ಮಹಾದೇವ

ಹಿರಿಯ ಸಾಹಿತಿ ದೇವನೂರು ಮಹಾದೇವ ಅವರು ರಾಜಕಾರಣಿಗಳನ್ನು ಕೊಳೆತ ಹಣ್ಣಿಗೆ ಹೋಲಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

long letter to the education minister
ಸುದೀರ್ಘ ಪತ್ರ ಬರೆದ ದೇವನೂರು ಮಹಾದೇವ
author img

By

Published : Mar 2, 2020, 3:13 PM IST

ಮೈಸೂರು: ರಾಜಕಾರಣಿಗಳನ್ನು ಕೊಳೆತ ಹಣ್ಣಿಗೆ ಹೋಲಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ‌, ಹಿರಿಯ ಸಾಹಿತಿ ದೇವನೂರು ಮಹಾದೇವ ಪತ್ರ ಬರೆದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಬಗ್ಗೆ ಸುರೇಶ್ ಕುಮಾರ್ ಹೇಳಿಕೆ ವಿಚಾರ ಪತ್ರದಲ್ಲಿ ಪ್ರಸ್ತಾಪ ಮಾಡಿ, ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದ ಸಚಿವ ಸುರೇಶ್ ಕುಮಾರ್ ಅವರ ಹೇಳಿಕೆ ನೋಡಿ ನನಗೆ ಶಾಕ್ ಆಯಿತು ಎಂದು ಪತ್ರದಲ್ಲಿ ಬರೆದಿದ್ದಾರೆ.

long letter to the education minister
ಸುದೀರ್ಘ ಪತ್ರ ಬರೆದ ದೇವನೂರು ಮಹಾದೇವ

ದೊರೆಸ್ವಾಮಿಯವರನ್ನ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕ್ ಏಜೆಂಟ್ ಎಂದಿರುವ ರಾಜಕಾರಣಿಗಳ ವಿರುದ್ಧ ದೇವನೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಹುತೇಕ ರಾಜಕಾರಣಿಗಳಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಲ್ಕಾರು ನಾಲಿಗೆಗಳು ಇವೆ. ಒಂದೊಂದು ಕಡೆ ಹೋದಾಗ, ಒಂದೊಂದು ನಾಲಿಗೆ ಬಳಸ್ತಾರೆ ಎಂದು ಟೀಕಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ಹಾಗೂ ಕೈಗಾರಿಕಾ ಪ್ರದೇಶಗಳನ್ನ ಅಭಿವೃದ್ಧಿ ಮಾಡದ ಸಚಿವ ಯತ್ನಾಳ್​​ಗೂ ದೇವನೂರು ಮಹಾದೇವ ಚಾರ್ಜ್ ಮಾಡಿದ್ದಾರೆ. ಜನಪ್ರತಿನಿಧಿಗಳು ಹೊಣೆಗೇಡಿಗಳಾಗಿದ್ದಾರೆಂದು ಬೇಸರ ವ್ಯಕ್ತಪಡಿಸಿರುವ ದೇವನೂರು ಮಹದೇವ, ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿ ಹಾಳಾಗಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ಸುಳಿದಾಡಿತು ಎಂದು ಪತ್ರದಲ್ಲಿ ಬರೆದಿದ್ದಾರೆ.

ಮೈಸೂರು: ರಾಜಕಾರಣಿಗಳನ್ನು ಕೊಳೆತ ಹಣ್ಣಿಗೆ ಹೋಲಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ‌, ಹಿರಿಯ ಸಾಹಿತಿ ದೇವನೂರು ಮಹಾದೇವ ಪತ್ರ ಬರೆದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಬಗ್ಗೆ ಸುರೇಶ್ ಕುಮಾರ್ ಹೇಳಿಕೆ ವಿಚಾರ ಪತ್ರದಲ್ಲಿ ಪ್ರಸ್ತಾಪ ಮಾಡಿ, ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದ ಸಚಿವ ಸುರೇಶ್ ಕುಮಾರ್ ಅವರ ಹೇಳಿಕೆ ನೋಡಿ ನನಗೆ ಶಾಕ್ ಆಯಿತು ಎಂದು ಪತ್ರದಲ್ಲಿ ಬರೆದಿದ್ದಾರೆ.

long letter to the education minister
ಸುದೀರ್ಘ ಪತ್ರ ಬರೆದ ದೇವನೂರು ಮಹಾದೇವ

ದೊರೆಸ್ವಾಮಿಯವರನ್ನ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕ್ ಏಜೆಂಟ್ ಎಂದಿರುವ ರಾಜಕಾರಣಿಗಳ ವಿರುದ್ಧ ದೇವನೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಹುತೇಕ ರಾಜಕಾರಣಿಗಳಿಗೆ ನಾಲಿಗೆ ಇಲ್ಲ. ಇನ್ನೂ ಕೆಲವರಿಗೆ ನಾಲ್ಕಾರು ನಾಲಿಗೆಗಳು ಇವೆ. ಒಂದೊಂದು ಕಡೆ ಹೋದಾಗ, ಒಂದೊಂದು ನಾಲಿಗೆ ಬಳಸ್ತಾರೆ ಎಂದು ಟೀಕಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ನಿರುದ್ಯೋಗ ಹಾಗೂ ಕೈಗಾರಿಕಾ ಪ್ರದೇಶಗಳನ್ನ ಅಭಿವೃದ್ಧಿ ಮಾಡದ ಸಚಿವ ಯತ್ನಾಳ್​​ಗೂ ದೇವನೂರು ಮಹಾದೇವ ಚಾರ್ಜ್ ಮಾಡಿದ್ದಾರೆ. ಜನಪ್ರತಿನಿಧಿಗಳು ಹೊಣೆಗೇಡಿಗಳಾಗಿದ್ದಾರೆಂದು ಬೇಸರ ವ್ಯಕ್ತಪಡಿಸಿರುವ ದೇವನೂರು ಮಹದೇವ, ಕೊಳೆತ ಹಣ್ಣುಗಳ ಜೊತೆ ಒಳ್ಳೆಯ ಹಣ್ಣುಗಳು ಸೇರಿ ಹಾಳಾಗಬಹುದೇ? ನಿಮ್ಮ ಹೇಳಿಕೆ ನೋಡಿದಾಗ ಈ ಪ್ರಶ್ನೆ ಸುಳಿದಾಡಿತು ಎಂದು ಪತ್ರದಲ್ಲಿ ಬರೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.