ಮೈಸೂರು: ಕೋವಿಡ್-19 ಕರ್ತವ್ಯದ ವೇಳೆ ಅಶಿಸ್ತು ಹಾಗೂ ನಿರ್ಲಕ್ಷ್ಯ ತೋರಿದ ಇಬ್ಬರು ಹಿರಿಯ ಕಾರ್ಮಿಕ ನಿರೀಕ್ಷಕರನ್ನು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
![Discipline on duty: Mysore DC suspended two officers](https://etvbharatimages.akamaized.net/etvbharat/prod-images/kn-mys-05-officer-suspend-vis-ka10003_03062020220025_0306f_1591201825_110.jpg)
ಮೈಸೂರು 1ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಆರ್.ರವಿ, ಹಾಗೂ 2ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ನಿಖಿಲ್ ಚಂದ್ರ ಅಮಾನತುಗೊಂಡ ಅಧಿಕಾರಿಗಳು ಎಂದು ತಿಳಿದು ಬಂದಿದೆ.
![Discipline on duty: Mysore DC suspended two officers](https://etvbharatimages.akamaized.net/etvbharat/prod-images/kn-mys-05-officer-suspend-vis-ka10003_03062020220025_0306f_1591201825_165.jpg)
ವಲಸೆ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸುವ ಜವಾಬ್ದಾರಿಯನ್ನು ಈ ಇಬ್ಬರು ಅಧಿಕಾರಿಗಳಿಗೆ ನೀಡಲಾಗಿತ್ತು. ಆದರೆ, ಇಬ್ಬರು ಕರ್ತವ್ಯದ ವೇಳೆ ಅಶಿಸ್ತು ಹಾಗೂ ನಿರ್ಲಕ್ಷ್ಯ ತೋರಿದ್ದರಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.