ETV Bharat / state

ಚುನಾವಣೆಯಲ್ಲಿ ವ್ಯಾಪಕ ಹಣ ಹಂಚಿಕೆಯಾಗಿದೆ, ನಾನು ರಾತ್ರಿ ಕಂಡ ಬಾವಿಗೆ ಹಗಲು ಬಿದ್ದೆ - ವಾಟಾಳ್ ನಾಗರಾಜ್

author img

By

Published : May 11, 2023, 5:18 PM IST

ಈ ಬಾರಿ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲಾಗಿದೆ ಎಂದು ವಾಟಾಳ್​ ನಾಗರಾಜ್​ ಆರೋಪಿಸಿದ್ದಾರೆ.

Watal Nagaraj
ವಾಟಾಳ್​ ನಾಗರಾಜ್​
ವ್ಯಾಪಕ ಹಣ ಹಂಚಿಕೆಯಾಗಿರುವ ಮತದಾನವನ್ನು ಅಸಿಂಧುಗೊಳಿಸಿ: ವಾಟಾಳ್ ನಾಗರಾಜ್

ಮೈಸೂರು: ಈ ಬಾರಿ ಚುನಾವಣೆಯಲ್ಲಿ ವ್ಯಾಪಕವಾಗಿ ಅಕ್ರಮ ನಡೆದಿದ್ದು, ಅಭ್ಯರ್ಥಿಗಳು ಮತದಾರರನ್ನು ನೋಟಿನಿಂದಲೇ ಖರೀದಿ ಮಾಡಿದ್ದಾರೆ. ಆದ್ದರಿಂದ ಈ ಬಾರಿಯ ಮತದಾನವನ್ನು ರದ್ದುಗೊಳಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ಮೂಲಕ ಆಗ್ರಹಿಸಿದ್ದಾರೆ.

ಇಂದು ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಅವರು, ಈ ಬಾರಿಯ ಮತದಾನದ ಸಂದರ್ಭದಲ್ಲಿ ವ್ಯಾಪಕವಾಗಿ ಅಭ್ಯರ್ಥಿಗಳು ಮತದಾರರಿಗೆ ಹಣ ಹಂಚಿದ್ದಾರೆ. ಹಣದ ಮೂಲಕವೇ ಮತದಾರರನ್ನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಚುನಾವಣಾ ಆಯೋಗ ಈ ಮತದಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಚಾಮರಾಜನಗರದಲ್ಲಿ ಪ್ರತಿ ವೋಟಿಗೆ ಎರಡು ಸಾವಿರದಿಂದ ಹತ್ತು ಸಾವಿರದವರೆಗೆ ಹಣ ನೀಡಲಾಗಿದೆ. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಲಕ್ಷ ಕೋಟಿಗಳಷ್ಟು ಹಣ ಖರ್ಚಾಗಿದೆ. ಹಣ ಹಂಚಿಕೆ ಮಾಡುತ್ತಿದ್ದರೂ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಯಾರನ್ನೂ ಅರೆಸ್ಟ್ ಮಾಡಿಲ್ಲ. ರಾಜ್ಯದಲ್ಲಿ ಚುನಾವಣಾ ಆಯೋಗ ಸತ್ತು ಹೋಗಿದೆ ಎಂದು ವಾಗ್ದಾಳಿ ನಡೆಸಿದರು.

ನಾನು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದುಕೊಂಡಿದ್ದೆ, ಆದರೂ ನಿಂತೆ. ಜನರು ಅಭಿವೃದ್ಧಿ ಮರೆತು ಹಣ ನೀಡಿದವರಿಗೆ ಮತ ಹಾಕಿದರು. ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಈ ಜನ್ಮದಲ್ಲಿ ಚಾಮರಾಜನಗರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಬಾರಿ ಸೋಮಣ್ಣ ಅವರನ್ನು ಡಿಸ್​ಕ್ವಾಲಿಫೈ ಮಾಡಬೇಕು. ಈ ಬಾರಿ ಅತಂತ್ರ ಫಲಿತಾಂಶ ಬಂದರೆ, ಜೆಡಿಎಸ್​ನವರು ಯಾರಿಗೂ ಬೆಂಬಲ ನೀಡಬಾರದು ಎಂದು ಆಗ್ರಹಿಸಿದರು. ನಾನು ಸ್ಪರ್ಧೆ ಮಾಡುತ್ತೇನೆ ಎಂದರೇ ಬಿಜೆಪಿ ಮತ್ತು ಕಾಂಗ್ರೆಸ್​ನವರು ಒಂದು ಸೀಟ್ ಬಿಟ್ಟುಕೊಡುತ್ತಿದ್ದರು. ಆದರೆ ಈಗ ನಾನೇ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ಗೆಲ್ಲಬೇಕು.‌ ಈ ಬಾರಿ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಈ ಮತದಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟಿಸಿದರು.

ಇದನ್ನೂ ಓದಿ: ಅಪ್ಪನಿಗೆ ಮಗಳೇ ಸ್ಟಾರ್ ಪ್ರಚಾರಕಿ: ವಾಟಾಳ್ ಪರ ರೋಡ್ ಶೋ ನಡೆಸಿದ ಅನುಪಮಾ

ವ್ಯಾಪಕ ಹಣ ಹಂಚಿಕೆಯಾಗಿರುವ ಮತದಾನವನ್ನು ಅಸಿಂಧುಗೊಳಿಸಿ: ವಾಟಾಳ್ ನಾಗರಾಜ್

ಮೈಸೂರು: ಈ ಬಾರಿ ಚುನಾವಣೆಯಲ್ಲಿ ವ್ಯಾಪಕವಾಗಿ ಅಕ್ರಮ ನಡೆದಿದ್ದು, ಅಭ್ಯರ್ಥಿಗಳು ಮತದಾರರನ್ನು ನೋಟಿನಿಂದಲೇ ಖರೀದಿ ಮಾಡಿದ್ದಾರೆ. ಆದ್ದರಿಂದ ಈ ಬಾರಿಯ ಮತದಾನವನ್ನು ರದ್ದುಗೊಳಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ಮೂಲಕ ಆಗ್ರಹಿಸಿದ್ದಾರೆ.

ಇಂದು ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಅವರು, ಈ ಬಾರಿಯ ಮತದಾನದ ಸಂದರ್ಭದಲ್ಲಿ ವ್ಯಾಪಕವಾಗಿ ಅಭ್ಯರ್ಥಿಗಳು ಮತದಾರರಿಗೆ ಹಣ ಹಂಚಿದ್ದಾರೆ. ಹಣದ ಮೂಲಕವೇ ಮತದಾರರನ್ನು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಚುನಾವಣಾ ಆಯೋಗ ಈ ಮತದಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಚಾಮರಾಜನಗರದಲ್ಲಿ ಪ್ರತಿ ವೋಟಿಗೆ ಎರಡು ಸಾವಿರದಿಂದ ಹತ್ತು ಸಾವಿರದವರೆಗೆ ಹಣ ನೀಡಲಾಗಿದೆ. ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಲಕ್ಷ ಕೋಟಿಗಳಷ್ಟು ಹಣ ಖರ್ಚಾಗಿದೆ. ಹಣ ಹಂಚಿಕೆ ಮಾಡುತ್ತಿದ್ದರೂ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಯಾರನ್ನೂ ಅರೆಸ್ಟ್ ಮಾಡಿಲ್ಲ. ರಾಜ್ಯದಲ್ಲಿ ಚುನಾವಣಾ ಆಯೋಗ ಸತ್ತು ಹೋಗಿದೆ ಎಂದು ವಾಗ್ದಾಳಿ ನಡೆಸಿದರು.

ನಾನು ಈ ಚುನಾವಣೆಯಲ್ಲಿ ನಿಲ್ಲಬಾರದು ಎಂದುಕೊಂಡಿದ್ದೆ, ಆದರೂ ನಿಂತೆ. ಜನರು ಅಭಿವೃದ್ಧಿ ಮರೆತು ಹಣ ನೀಡಿದವರಿಗೆ ಮತ ಹಾಕಿದರು. ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಈ ಜನ್ಮದಲ್ಲಿ ಚಾಮರಾಜನಗರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಬಾರಿ ಸೋಮಣ್ಣ ಅವರನ್ನು ಡಿಸ್​ಕ್ವಾಲಿಫೈ ಮಾಡಬೇಕು. ಈ ಬಾರಿ ಅತಂತ್ರ ಫಲಿತಾಂಶ ಬಂದರೆ, ಜೆಡಿಎಸ್​ನವರು ಯಾರಿಗೂ ಬೆಂಬಲ ನೀಡಬಾರದು ಎಂದು ಆಗ್ರಹಿಸಿದರು. ನಾನು ಸ್ಪರ್ಧೆ ಮಾಡುತ್ತೇನೆ ಎಂದರೇ ಬಿಜೆಪಿ ಮತ್ತು ಕಾಂಗ್ರೆಸ್​ನವರು ಒಂದು ಸೀಟ್ ಬಿಟ್ಟುಕೊಡುತ್ತಿದ್ದರು. ಆದರೆ ಈಗ ನಾನೇ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ಗೆಲ್ಲಬೇಕು.‌ ಈ ಬಾರಿ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಈ ಮತದಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ಪ್ರತಿಭಟಿಸಿದರು.

ಇದನ್ನೂ ಓದಿ: ಅಪ್ಪನಿಗೆ ಮಗಳೇ ಸ್ಟಾರ್ ಪ್ರಚಾರಕಿ: ವಾಟಾಳ್ ಪರ ರೋಡ್ ಶೋ ನಡೆಸಿದ ಅನುಪಮಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.