ETV Bharat / state

ಕ್ಯಾಪ್ಟನ್​ ಅಭಿಮನ್ಯುಗೆ ಮರಳು ಮೂಟೆ ಹೊರಿಸಿ ತಾಲೀಮು..

author img

By

Published : Sep 20, 2021, 9:43 PM IST

ಜನಗಳ ಮಧ್ಯೆ ಅಂಬಾರಿ ಹೊತ್ತು ಸಾಗಬೇಕಿರುವ ಕಾರಣ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆಯ ಹೊರಗೆ ರಾಜ ಬೀದಿಯಲ್ಲಿ ತಾಲೀಮು ನಡೆಸಲು ಅವಕಾಶವನ್ನ ಕೇಳಿದ್ದಾರೆ. ಕಾರ್ಯಕಾರಿಣಿ ಸಮಿತಿ ಅನುಮತಿ ಪಡೆದು ಹೊರಗೆ ತಾಲೀಮು ನಡೆಸುತ್ತೇವೆ. ಕೋವಿಡ್ ಹಿನ್ನೆಲೆ ಸದ್ಯಕ್ಕೆ ಅನುಮತಿ ಸಿಕ್ಕಿಲ್ಲ..

dussera-jumbos-start-training-with-sand-bags-in-mysore
ಕ್ಯಾಪ್ಟನ್​ ಅಭಿಮನ್ಯುಗೆ ಮರಳು ಮೂಟೆ ಹೊರಿಸಿ ತಾಲೀಮು

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಕಾಡಿನಿಂದ ನಾಡಿಗೆ ಬಂದ ಗಜ ಪಡೆಗಳಿಗೆ ದಸರಾ ಜಂಬೂ ಸವಾರಿ ತಾಲೀಮು ಆರಂಭವಾಗಿದೆ. ಈ ಬಾರಿಯ ಅಂಬಾರಿ ಆನೆ ಕೂಂಬಿಂಗ್​ ಸ್ಪೆಷಲಿಸ್ಟ್ ಅಭಿಮನ್ಯುಗೆ ಇವತ್ತು ಮರಳು ಮೂಟೆ ಹೊರಿಸಿ ಭರ್ಜರಿ ತಾಲೀಮು ನಡೆಸಲಾಯಿತು. ತಾಲೀಮಿನಲ್ಲಿ ಅಭಿಮನ್ಯು ಗತ್ತು ಹಾಗೂ ಕ್ಯಾಪ್ಟನ್​ಗೆ ಗಜಪಡೆ ಸೇನೆ ಸಾಥ್ ಕೊಟ್ಟಿರುವ ವಿವರ ಇಲ್ಲಿದೆ.

ಕ್ಯಾಪ್ಟನ್​ ಅಭಿಮನ್ಯುಗೆ ಮರಳು ಮೂಟೆ ಹೊರಿಸಿ ತಾಲೀಮು..

ಎರಡನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ಸಜ್ಜಾಗಿದ್ದಾನೆ. ಈಗಾಗಲೇ ಕಾಡಿನಿಂದ ನಾಡಿಗೆ ಬಂದು ಅರಮನೆ ಅಂಗಳದಲ್ಲಿ ವಾಸ್ತವ್ಯ ಹೂಡಿರುವ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂಗೆ ಅರಣ್ಯ ಇಲಾಖೆಯಿಂದ ವಿಶೇಷ ಆಹಾರ ನೀಡಿ ಆರೈಕೆ ಮಾಡಲಾಗುತ್ತಿದೆ.

ದಸರಾಗೆ ದಿನಗಣನೆ ಹಿನ್ನೆಲೆ ಇವತ್ತು ಸುಮಾರು 600 ಕೆಜಿ ಭಾರ ಇರುವ ನಮ್ದ, ಗಾದಿ ಜೊತೆಗೆ ಮರಳು ಮೂಟೆಯನ್ನ ಕ್ಯಾಪ್ಟನ್ ಅಭಿಮನ್ಯುಗೆ ಹೊರಿಸಿ ಅರಮನೆ ಅಂಗಳದಲ್ಲಿ ತಾಲೀಮು ನಡೆಸಲಾಯಿತು. ಅಭಿಮನ್ಯುಗೆ ಆನೆಗಳಾದ ಚೈತ್ರ, ಕಾವೇರಿ, ಲಕ್ಷ್ಮಿ, ಧನಂಜಯ,ಅಶ್ವತ್ಥಾಮ, ಗೋಪಾಲಸ್ವಾಮಿ, ವಿಕ್ರಮ ಸಾಥ್ ನೀಡಿದವು.

ಇಂದು (ಸೋಮವಾರ) ಮಧ್ಯಾಹ್ನ 12:30ರ ವೇಳೆ ಅರಮನೆ ಪುರೋಹಿತರು ಆನೆಗಳಿಗೆ ಬೆಲ್ಲ ಹಾಗೂ ಕಬ್ಬು ನೀಡಿ ಪೂಜೆ ಸಲ್ಲಿಸಿದರು. ಪ್ರತಿ ವರ್ಷವೂ ಮೈಸೂರಿನ ಪ್ರಮುಖ ಬೀದಿಗಳಲ್ಲಿ ಗಜಪಡೆಯ ಗಜಗಾಂಭೀರ್ಯ ನಡಿಗೆ ಜೋರಾಗಿ ನಡೆಯುತ್ತಿತ್ತು.

ಎಲ್ಲರೂ ಬೆಳಗ್ಗೆ, ಸಂಜೆ ದಸರಾ ಆನೆಗಳ ಬೊಂಬಾಟ್ ನಡಿಗೆಯನ್ನ ಕಣ್ತುಂಬಿಕೊಳ್ಳುತ್ತಿದ್ದರು. ಅರಮನೆಯಿಂದ ಹೊರಟ ಗಜಪಡೆ ಕೆ ಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಬಂಬೂ ಬಜಾರ್ ಮೂಲಕ ಸಾಗಿ ಬನ್ನಿಮಂಟಪ ತಲುಪುತಿತ್ತು. ಅಲ್ಲಿಂದ ಅರಮನೆಗೆ ಆನೆಗಳು ವಾಪಸಾಗುತ್ತಿದ್ದವು.

ಆದರೆ, ಕೊರೊನಾ 3ನೇ ಅಲೆಯ ಭೀತಿಯಿಂದಲೇ ಈ ಬಾರಿಯ ದಸರಾ ಜಂಬೂಸವಾರಿ ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ, ತಾಲೀಮು ಸಹ ಅರಮನೆಯೊಳಗೆ ನಡೆಯುತ್ತಿದೆ.

ಜನಗಳ ಮಧ್ಯೆ ಅಂಬಾರಿ ಹೊತ್ತು ಸಾಗಬೇಕಿರುವ ಕಾರಣ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆಯ ಹೊರಗೆ ರಾಜ ಬೀದಿಯಲ್ಲಿ ತಾಲೀಮು ನಡೆಸಲು ಅವಕಾಶವನ್ನ ಕೇಳಿದ್ದಾರೆ. ಕಾರ್ಯಕಾರಿಣಿ ಸಮಿತಿ ಅನುಮತಿ ಪಡೆದು ಹೊರಗೆ ತಾಲೀಮು ನಡೆಸುತ್ತೇವೆ. ಕೋವಿಡ್ ಹಿನ್ನೆಲೆ ಸದ್ಯಕ್ಕೆ ಅನುಮತಿ ಸಿಕ್ಕಿಲ್ಲ ಅಂತಾ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: ಸರಪಳಿ ಕಿತ್ತು ರಂಪಾಟ ಮಾಡಿದ ಅರಮನೆ ಆನೆ ; ವಿಡಿಯೋ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಕಾಡಿನಿಂದ ನಾಡಿಗೆ ಬಂದ ಗಜ ಪಡೆಗಳಿಗೆ ದಸರಾ ಜಂಬೂ ಸವಾರಿ ತಾಲೀಮು ಆರಂಭವಾಗಿದೆ. ಈ ಬಾರಿಯ ಅಂಬಾರಿ ಆನೆ ಕೂಂಬಿಂಗ್​ ಸ್ಪೆಷಲಿಸ್ಟ್ ಅಭಿಮನ್ಯುಗೆ ಇವತ್ತು ಮರಳು ಮೂಟೆ ಹೊರಿಸಿ ಭರ್ಜರಿ ತಾಲೀಮು ನಡೆಸಲಾಯಿತು. ತಾಲೀಮಿನಲ್ಲಿ ಅಭಿಮನ್ಯು ಗತ್ತು ಹಾಗೂ ಕ್ಯಾಪ್ಟನ್​ಗೆ ಗಜಪಡೆ ಸೇನೆ ಸಾಥ್ ಕೊಟ್ಟಿರುವ ವಿವರ ಇಲ್ಲಿದೆ.

ಕ್ಯಾಪ್ಟನ್​ ಅಭಿಮನ್ಯುಗೆ ಮರಳು ಮೂಟೆ ಹೊರಿಸಿ ತಾಲೀಮು..

ಎರಡನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ಸಜ್ಜಾಗಿದ್ದಾನೆ. ಈಗಾಗಲೇ ಕಾಡಿನಿಂದ ನಾಡಿಗೆ ಬಂದು ಅರಮನೆ ಅಂಗಳದಲ್ಲಿ ವಾಸ್ತವ್ಯ ಹೂಡಿರುವ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂಗೆ ಅರಣ್ಯ ಇಲಾಖೆಯಿಂದ ವಿಶೇಷ ಆಹಾರ ನೀಡಿ ಆರೈಕೆ ಮಾಡಲಾಗುತ್ತಿದೆ.

ದಸರಾಗೆ ದಿನಗಣನೆ ಹಿನ್ನೆಲೆ ಇವತ್ತು ಸುಮಾರು 600 ಕೆಜಿ ಭಾರ ಇರುವ ನಮ್ದ, ಗಾದಿ ಜೊತೆಗೆ ಮರಳು ಮೂಟೆಯನ್ನ ಕ್ಯಾಪ್ಟನ್ ಅಭಿಮನ್ಯುಗೆ ಹೊರಿಸಿ ಅರಮನೆ ಅಂಗಳದಲ್ಲಿ ತಾಲೀಮು ನಡೆಸಲಾಯಿತು. ಅಭಿಮನ್ಯುಗೆ ಆನೆಗಳಾದ ಚೈತ್ರ, ಕಾವೇರಿ, ಲಕ್ಷ್ಮಿ, ಧನಂಜಯ,ಅಶ್ವತ್ಥಾಮ, ಗೋಪಾಲಸ್ವಾಮಿ, ವಿಕ್ರಮ ಸಾಥ್ ನೀಡಿದವು.

ಇಂದು (ಸೋಮವಾರ) ಮಧ್ಯಾಹ್ನ 12:30ರ ವೇಳೆ ಅರಮನೆ ಪುರೋಹಿತರು ಆನೆಗಳಿಗೆ ಬೆಲ್ಲ ಹಾಗೂ ಕಬ್ಬು ನೀಡಿ ಪೂಜೆ ಸಲ್ಲಿಸಿದರು. ಪ್ರತಿ ವರ್ಷವೂ ಮೈಸೂರಿನ ಪ್ರಮುಖ ಬೀದಿಗಳಲ್ಲಿ ಗಜಪಡೆಯ ಗಜಗಾಂಭೀರ್ಯ ನಡಿಗೆ ಜೋರಾಗಿ ನಡೆಯುತ್ತಿತ್ತು.

ಎಲ್ಲರೂ ಬೆಳಗ್ಗೆ, ಸಂಜೆ ದಸರಾ ಆನೆಗಳ ಬೊಂಬಾಟ್ ನಡಿಗೆಯನ್ನ ಕಣ್ತುಂಬಿಕೊಳ್ಳುತ್ತಿದ್ದರು. ಅರಮನೆಯಿಂದ ಹೊರಟ ಗಜಪಡೆ ಕೆ ಆರ್ ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಬಂಬೂ ಬಜಾರ್ ಮೂಲಕ ಸಾಗಿ ಬನ್ನಿಮಂಟಪ ತಲುಪುತಿತ್ತು. ಅಲ್ಲಿಂದ ಅರಮನೆಗೆ ಆನೆಗಳು ವಾಪಸಾಗುತ್ತಿದ್ದವು.

ಆದರೆ, ಕೊರೊನಾ 3ನೇ ಅಲೆಯ ಭೀತಿಯಿಂದಲೇ ಈ ಬಾರಿಯ ದಸರಾ ಜಂಬೂಸವಾರಿ ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಿದೆ. ಹೀಗಾಗಿ, ತಾಲೀಮು ಸಹ ಅರಮನೆಯೊಳಗೆ ನಡೆಯುತ್ತಿದೆ.

ಜನಗಳ ಮಧ್ಯೆ ಅಂಬಾರಿ ಹೊತ್ತು ಸಾಗಬೇಕಿರುವ ಕಾರಣ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆಯ ಹೊರಗೆ ರಾಜ ಬೀದಿಯಲ್ಲಿ ತಾಲೀಮು ನಡೆಸಲು ಅವಕಾಶವನ್ನ ಕೇಳಿದ್ದಾರೆ. ಕಾರ್ಯಕಾರಿಣಿ ಸಮಿತಿ ಅನುಮತಿ ಪಡೆದು ಹೊರಗೆ ತಾಲೀಮು ನಡೆಸುತ್ತೇವೆ. ಕೋವಿಡ್ ಹಿನ್ನೆಲೆ ಸದ್ಯಕ್ಕೆ ಅನುಮತಿ ಸಿಕ್ಕಿಲ್ಲ ಅಂತಾ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಓದಿ: ಸರಪಳಿ ಕಿತ್ತು ರಂಪಾಟ ಮಾಡಿದ ಅರಮನೆ ಆನೆ ; ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.