ETV Bharat / state

ದ್ವಿ-ಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು ಸರಿ ಇದೆ: ಅಲೋಕ್ ಕುಮಾರ್

author img

By

Published : Jul 26, 2023, 6:04 PM IST

Updated : Jul 26, 2023, 8:59 PM IST

ಹೆದ್ದಾರಿ ಪ್ರಾಧಿಕಾರವು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಆಗಸ್ಟ್ 1ರಿಂದ ದ್ವಿ- ಚಕ್ರ ಹಾಗೂ ತ್ರಿ ಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು, ಸರಿ ಇದೆ. ಹೆದ್ದಾರಿಯಲ್ಲಿ ದರೋಡೆ ಪ್ರಕರಣ ನಡೆದಿಲ್ಲ. ಸರ್ವೀಸ್ ರಸ್ತೆಗಳಲ್ಲಿ ಎರಡು ದರೋಡೆ ಪ್ರಕರಣ ನಡೆದಿದ್ದು, ಕ್ರಮ ಕೈಗೊಂಡಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ADGP Alok Kumar addressed the press conference.
ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು: ಮೈಸೂರು - ಬೆಂಗಳೂರು ಎಕ್ಸ್​​​ಪ್ರೆಸ್ ಹೆದ್ದಾರಿಯಲ್ಲಿ ಆಗಸ್ಟ್ 1ರಿಂದ ದ್ವಿ ಚಕ್ರ ಹಾಗೂ ತ್ರಿ ಚಕ್ರ ವಾಹನ ನಿರ್ಬಂಧದ ಆದೇಶ ಹೊರಡಿಸಿರುವ ಹೆದ್ದಾರಿ ಪ್ರಾಧಿಕಾರದ ನಿರ್ಧಾರ ಸರಿ ಇದೆ. ಏಕೆಂದರೆ ಇಲ್ಲಿಯ ವರೆಗೆ ಹೆದ್ದಾರಿ ಅಪಘಾತದಲ್ಲಿ ಸಾವನ್ನಪ್ಪಿದ ಬಹುತೇಕ ಬೈಕ್ ಸವಾರರಾಗಿದ್ದು, ಕಡಿಮೆ ಸಿಸಿಯ ವಾಹನಗಳು ಹೆದ್ದಾರಿಯಲ್ಲಿ ವೇಗದಲ್ಲಿ ಹೋದರೆ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈ ನಿರ್ಬಂಧ ಸರಿಯಿದೆ ಎಂದು ಸಂಚಾರಿ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಇಂದು ಮೈಸೂರು ನಗರ ಪೋಲಿಸ್ ಕಮಿಷನರ್ ಕಚೇರಿಯಲ್ಲಿ ನಗರದ ಸಂಚಾರಿ ವಿಭಾಗದ ಅಧಿಕಾರಿಗಳು, ಆರ್ ಟಿ ಒ ಅಧಿಕಾರಿಗಳು ಹಾಗೂ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ 150 ಸಿಸಿ ವಾಹನಗಳು ಹೆಚ್ಚಿನ ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಅದರಲ್ಲಿ ಬೈಕ್ ಹಾಗೂ ತ್ರಿ ಚಕ್ರ ವಾಹನಗಳು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಈ ನಿರ್ಬಂಧ ಹೇರಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ದರೋಡೆ ಪ್ರಕರಣದ ಒಂದೇ ಒಂದು ದೂರು ದಾಖಲಾಗಿಲ್ಲ : ಬೆಂಗಳೂರು - ಮೈಸೂರು ಎಕ್ಸ್​​​ಪ್ರೆಸ್ ಹೆದ್ದಾರಿಯಲ್ಲಿ ತಡೆಗೋಡೆಗೆ ಅಳವಡಿಸಿರುವ ಕಬ್ಬಿಣ ಸೇರಿದಂತೆ ಇತರ ವಸ್ತುಗಳು ಕಳ್ಳತನ ಮಾಡಲಾಗುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ಕಳ್ಳತನ ಪ್ರಕರಣದ ಬಗ್ಗೆ ಇಲ್ಲಿಯವರೆಗೆ ಹೆದ್ದಾರಿ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ದೂರು ಕೊಟ್ಟರೆ ಕ್ರಮ ವಹಿಸುತ್ತೇವೆ. ಹೆದ್ದಾರಿಯಲ್ಲಿ ಇಲ್ಲಿಯವರೆಗೆ ಒಂದೇ ಒಂದು ದರೋಡೆ ಪ್ರಕರಣವೂ ನಡೆದಿಲ್ಲ. ಆದರೆ, ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗಳಲ್ಲಿ ಎರಡು ದರೋಡೆ ಪ್ರಕರಣ ನಡೆದಿದ್ದು. ಈ ಬಗ್ಗೆ ನಮ್ಮ ಪೊಲೀಸ್​ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

25 ಅಪಘಾತ ವಲಯ: ಬೆಂಗಳೂರು - ಮೈಸೂರು ಎಕ್ಸ್​​​ಪ್ರೆಸ್​ ಹೆದ್ದಾರಿಯ ಕಾಮಗಾರಿ ಇನ್ನೂ ಸಂಪೂರ್ಣ ಪೂರ್ಣವಾಗಿಲ್ಲ. ಹೆದ್ದಾರಿಯಲ್ಲಿ ಸುಮಾರು 25 ಅಪಘಾತ ವಲಯಗಳಿದ್ದು, ಎಲ್ಲ ಕಡೆ ನಾನೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.‌ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಕೆಲವು ಕಾಮಗಾರಿಗಳು ಬಾಕಿ ಇವೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಅಳವಡಿಕೆ ಬಾಕಿ ಇದೆ ಹಾಗೂ ಸೂಚನಾ ಫಲಕಗಳ ಅಳವಡಿಕೆ ಕೆಲವು ಕಡೆ ಬಾಕಿ ಇದ್ದು. ಆದರೆ ವೇಗದ ಮಿತಿ ಬಗ್ಗೆ ನಾಮ ಫಲಕಗಳನ್ನು ಅಳವಡಿಸಲಾಗಿದೆ.

ಈಗ ಬಾಕಿ ಇರುವ ಕಾಮಗಾರಿಗಳಿಗೆ ಹೆದ್ದಾರಿ ಅಧಿಕಾರಿಗಳು ಹೆಚ್ಚಿನ ಅನುದಾನ ತಂದು ಕೆಲಸ ಮಾಡಬೇಕಾಗಿದ್ದು. ಹೆದ್ದಾರಿಯ ಅಧಿಕಾರಿಗಳು ಪೋಲಿಸರನ್ನು ಕೇಳಿ ಕಾಮಗಾರಿ ಮಾಡಿಲ್ಲ. ಸಮಸ್ಯೆ ಆದಾಗ ಮಾತ್ರ ನಮ್ಮನ್ನು ಕರೆಯುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಉತ್ತರಿಸಿದರು.

ಪೊಲೀಸ್​ರಿಗೆ ಸಾವಿರ ಕಣ್ಣು : ಹಿಂದೆಲ್ಲ ಪೋಲಿಸರನ್ನು ಮೂರನೇ ಕಣ್ಣು ಎನ್ನುತ್ತಿದ್ದರು, ಈಗ ಪೋಲಿಸರಿಗೆ ಸಾವಿರ ಕಣ್ಣುಗಳಿವೆ. ಹುಡುಗರು ವೀಲಿಂಗ್ ಮಾಡಿದರೆ ಅಥವಾ ಇತರ ಟ್ರಾಫಿಕ್ ವಯೋಲೆನ್ಸ್ ಆದರೆ ವೀಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾರೆ. ಇದು ಒಂದು ರೀತಿ ಪೊಲೀಸರಿಗೆ ಒಳ್ಳೆಯದಾಗಿದೆ. ವಿಡಿಯೋ ನೋಡಿ ಕೇಸ್ ಹಾಕುತ್ತಾರೆ. ಸಾಮಾಜಿಕ ಜಾಲತಾಣಗಳಿಂದ ಈಗ ಪೊಲೀಸರಿಗೆ ಅನುಕೂಲವಾಗಿದ್ದು. ಪೋಲಿಸರಿಗೆ ಈಗ ಸಾಮಾಜಿಕ ಜಾಲತಾಣಗಳಿಂದ ಸಾವಿರ ಕಣ್ಣುಗಳು ಇವೆ. ಇವು ಅವರ ಕೆಲಸಕ್ಕೆ ಅನುಕೂಲ ಆಗುತ್ತವೆ. ದಂಡ ಹಾಕುವುದಕ್ಕಿಂತ ಜೀವ ರಕ್ಷಣೆ ಮಾಡುವುದು ನಮಗೆ ಮುಖ್ಯ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

100 ಕಿಮೀ ವೇಗ ಮಿತಿ ಮೀರಿದ್ರೆ ಟೋಲ್​ಗಳಲ್ಲಿ ದಂಡ ವಸೂಲಿ: ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು 2ನೇ ಬಾರಿಗೆ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಮಂಡ್ಯ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೂಡಿ ಪರಿಶೀಲನೆ ನಡೆಸಿದರು.

ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಹೆಚ್ಚಳದ ಹಿನ್ನೆಲೆ ಹಿಂದೆ ಭೇಟಿ ನೀಡಿದ್ದ ವೇಳೆ ಎಡಿಜಿಪಿ ಅಪಘಾತ ತಡೆಗೆ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಪೊಲೀಸ್ ಕಾರ್ಯಾಚರಣೆ ಹಿನ್ನೆಲೆ ಒಂದು ತಿಂಗಳೊಳಗೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿರುವುದು ಹಾಗೂ ಸಾವಿನ ಸಂಖ್ಯೆ ಒಂದಂಕಿಗೆ ಇಳಿದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಮದ್ರಾಸ್ ಹೈಕೋರ್ಟ್ ಸ್ಪೀಡ್ ಲಿಮಿಟ್ ಬಗ್ಗೆ ಸೂಚನೆ ನೀಡಿದೆ. ಎಕ್ಸ್ ಪ್ರೆಸ್ ಹೈವೆಯಲ್ಲಿ ಗರಿಷ್ಠ 100 ಕಿ ಮೀ ಸ್ಪೀಡ್​ ಅಷ್ಟೇ. ಕೆಲವರಲ್ಲಿ 120 ಗರಿಷ್ಠ ಸ್ಪೀಡ್ ಇದೆ. ಅನ್ನೋ ತಪ್ಪು ತಿಳಿವಳಿಕೆ ಇದೆ. 100 ಕಿ.ಮೀ ವೇಗ ಮೀರಿದರೆ ಅಂತಹ ವಾಹನಗಳಿಗೆ ದಂಡ ಹಾಕುವುದು ಫಿಕ್ಸ್ ಎಂದು ಎಚ್ಚರಿಕೆ ನೀಡಿದರು.

ಮಂಡ್ಯ ಹೊರ ವಲಯದಲ್ಲಿ ಈಗಾಗಲೇ ಆನ್​​​​ಲೈನ್ ವೇಗ ಪರೀಕ್ಷಾ ಯಂತ್ರವನ್ನು ಅಳವಡಿಸಲಾಗಿದೆ. 100 ಕಿ.ಮೀ ವೇಗ ಮಿತಿ ದಾಟಿದ ವಾಹನಗಳಿಗೆ ಟೋಲ್ ಗಳಲ್ಲೇ ದಂಡ ವಿಧಿಸಲಾಗುತ್ತದೆ ಎಂದರು.

ಇದನ್ನೂಓದಿ: ಟ್ರಾಫಿಕ್​ ಜಾಮ್​... ಹಂತ ಹಂತವಾಗಿ ಲಾಗೌಟ್​: ಐಟಿ ಕಂಪನಿಗಳಿಗೆ ಪೊಲೀಸರ ಸಲಹೆ

ಎಡಿಜಿಪಿ ಅಲೋಕ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು: ಮೈಸೂರು - ಬೆಂಗಳೂರು ಎಕ್ಸ್​​​ಪ್ರೆಸ್ ಹೆದ್ದಾರಿಯಲ್ಲಿ ಆಗಸ್ಟ್ 1ರಿಂದ ದ್ವಿ ಚಕ್ರ ಹಾಗೂ ತ್ರಿ ಚಕ್ರ ವಾಹನ ನಿರ್ಬಂಧದ ಆದೇಶ ಹೊರಡಿಸಿರುವ ಹೆದ್ದಾರಿ ಪ್ರಾಧಿಕಾರದ ನಿರ್ಧಾರ ಸರಿ ಇದೆ. ಏಕೆಂದರೆ ಇಲ್ಲಿಯ ವರೆಗೆ ಹೆದ್ದಾರಿ ಅಪಘಾತದಲ್ಲಿ ಸಾವನ್ನಪ್ಪಿದ ಬಹುತೇಕ ಬೈಕ್ ಸವಾರರಾಗಿದ್ದು, ಕಡಿಮೆ ಸಿಸಿಯ ವಾಹನಗಳು ಹೆದ್ದಾರಿಯಲ್ಲಿ ವೇಗದಲ್ಲಿ ಹೋದರೆ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈ ನಿರ್ಬಂಧ ಸರಿಯಿದೆ ಎಂದು ಸಂಚಾರಿ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಇಂದು ಮೈಸೂರು ನಗರ ಪೋಲಿಸ್ ಕಮಿಷನರ್ ಕಚೇರಿಯಲ್ಲಿ ನಗರದ ಸಂಚಾರಿ ವಿಭಾಗದ ಅಧಿಕಾರಿಗಳು, ಆರ್ ಟಿ ಒ ಅಧಿಕಾರಿಗಳು ಹಾಗೂ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ 150 ಸಿಸಿ ವಾಹನಗಳು ಹೆಚ್ಚಿನ ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಅದರಲ್ಲಿ ಬೈಕ್ ಹಾಗೂ ತ್ರಿ ಚಕ್ರ ವಾಹನಗಳು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆದ್ದರಿಂದ ಈ ನಿರ್ಬಂಧ ಹೇರಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ದರೋಡೆ ಪ್ರಕರಣದ ಒಂದೇ ಒಂದು ದೂರು ದಾಖಲಾಗಿಲ್ಲ : ಬೆಂಗಳೂರು - ಮೈಸೂರು ಎಕ್ಸ್​​​ಪ್ರೆಸ್ ಹೆದ್ದಾರಿಯಲ್ಲಿ ತಡೆಗೋಡೆಗೆ ಅಳವಡಿಸಿರುವ ಕಬ್ಬಿಣ ಸೇರಿದಂತೆ ಇತರ ವಸ್ತುಗಳು ಕಳ್ಳತನ ಮಾಡಲಾಗುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ಕಳ್ಳತನ ಪ್ರಕರಣದ ಬಗ್ಗೆ ಇಲ್ಲಿಯವರೆಗೆ ಹೆದ್ದಾರಿ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ದೂರು ಕೊಟ್ಟರೆ ಕ್ರಮ ವಹಿಸುತ್ತೇವೆ. ಹೆದ್ದಾರಿಯಲ್ಲಿ ಇಲ್ಲಿಯವರೆಗೆ ಒಂದೇ ಒಂದು ದರೋಡೆ ಪ್ರಕರಣವೂ ನಡೆದಿಲ್ಲ. ಆದರೆ, ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಗಳಲ್ಲಿ ಎರಡು ದರೋಡೆ ಪ್ರಕರಣ ನಡೆದಿದ್ದು. ಈ ಬಗ್ಗೆ ನಮ್ಮ ಪೊಲೀಸ್​ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

25 ಅಪಘಾತ ವಲಯ: ಬೆಂಗಳೂರು - ಮೈಸೂರು ಎಕ್ಸ್​​​ಪ್ರೆಸ್​ ಹೆದ್ದಾರಿಯ ಕಾಮಗಾರಿ ಇನ್ನೂ ಸಂಪೂರ್ಣ ಪೂರ್ಣವಾಗಿಲ್ಲ. ಹೆದ್ದಾರಿಯಲ್ಲಿ ಸುಮಾರು 25 ಅಪಘಾತ ವಲಯಗಳಿದ್ದು, ಎಲ್ಲ ಕಡೆ ನಾನೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.‌ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಕೆಲವು ಕಾಮಗಾರಿಗಳು ಬಾಕಿ ಇವೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಅಳವಡಿಕೆ ಬಾಕಿ ಇದೆ ಹಾಗೂ ಸೂಚನಾ ಫಲಕಗಳ ಅಳವಡಿಕೆ ಕೆಲವು ಕಡೆ ಬಾಕಿ ಇದ್ದು. ಆದರೆ ವೇಗದ ಮಿತಿ ಬಗ್ಗೆ ನಾಮ ಫಲಕಗಳನ್ನು ಅಳವಡಿಸಲಾಗಿದೆ.

ಈಗ ಬಾಕಿ ಇರುವ ಕಾಮಗಾರಿಗಳಿಗೆ ಹೆದ್ದಾರಿ ಅಧಿಕಾರಿಗಳು ಹೆಚ್ಚಿನ ಅನುದಾನ ತಂದು ಕೆಲಸ ಮಾಡಬೇಕಾಗಿದ್ದು. ಹೆದ್ದಾರಿಯ ಅಧಿಕಾರಿಗಳು ಪೋಲಿಸರನ್ನು ಕೇಳಿ ಕಾಮಗಾರಿ ಮಾಡಿಲ್ಲ. ಸಮಸ್ಯೆ ಆದಾಗ ಮಾತ್ರ ನಮ್ಮನ್ನು ಕರೆಯುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಉತ್ತರಿಸಿದರು.

ಪೊಲೀಸ್​ರಿಗೆ ಸಾವಿರ ಕಣ್ಣು : ಹಿಂದೆಲ್ಲ ಪೋಲಿಸರನ್ನು ಮೂರನೇ ಕಣ್ಣು ಎನ್ನುತ್ತಿದ್ದರು, ಈಗ ಪೋಲಿಸರಿಗೆ ಸಾವಿರ ಕಣ್ಣುಗಳಿವೆ. ಹುಡುಗರು ವೀಲಿಂಗ್ ಮಾಡಿದರೆ ಅಥವಾ ಇತರ ಟ್ರಾಫಿಕ್ ವಯೋಲೆನ್ಸ್ ಆದರೆ ವೀಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾರೆ. ಇದು ಒಂದು ರೀತಿ ಪೊಲೀಸರಿಗೆ ಒಳ್ಳೆಯದಾಗಿದೆ. ವಿಡಿಯೋ ನೋಡಿ ಕೇಸ್ ಹಾಕುತ್ತಾರೆ. ಸಾಮಾಜಿಕ ಜಾಲತಾಣಗಳಿಂದ ಈಗ ಪೊಲೀಸರಿಗೆ ಅನುಕೂಲವಾಗಿದ್ದು. ಪೋಲಿಸರಿಗೆ ಈಗ ಸಾಮಾಜಿಕ ಜಾಲತಾಣಗಳಿಂದ ಸಾವಿರ ಕಣ್ಣುಗಳು ಇವೆ. ಇವು ಅವರ ಕೆಲಸಕ್ಕೆ ಅನುಕೂಲ ಆಗುತ್ತವೆ. ದಂಡ ಹಾಕುವುದಕ್ಕಿಂತ ಜೀವ ರಕ್ಷಣೆ ಮಾಡುವುದು ನಮಗೆ ಮುಖ್ಯ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

100 ಕಿಮೀ ವೇಗ ಮಿತಿ ಮೀರಿದ್ರೆ ಟೋಲ್​ಗಳಲ್ಲಿ ದಂಡ ವಸೂಲಿ: ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು 2ನೇ ಬಾರಿಗೆ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಮಂಡ್ಯ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೂಡಿ ಪರಿಶೀಲನೆ ನಡೆಸಿದರು.

ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಹೆಚ್ಚಳದ ಹಿನ್ನೆಲೆ ಹಿಂದೆ ಭೇಟಿ ನೀಡಿದ್ದ ವೇಳೆ ಎಡಿಜಿಪಿ ಅಪಘಾತ ತಡೆಗೆ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಪೊಲೀಸ್ ಕಾರ್ಯಾಚರಣೆ ಹಿನ್ನೆಲೆ ಒಂದು ತಿಂಗಳೊಳಗೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿರುವುದು ಹಾಗೂ ಸಾವಿನ ಸಂಖ್ಯೆ ಒಂದಂಕಿಗೆ ಇಳಿದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಮದ್ರಾಸ್ ಹೈಕೋರ್ಟ್ ಸ್ಪೀಡ್ ಲಿಮಿಟ್ ಬಗ್ಗೆ ಸೂಚನೆ ನೀಡಿದೆ. ಎಕ್ಸ್ ಪ್ರೆಸ್ ಹೈವೆಯಲ್ಲಿ ಗರಿಷ್ಠ 100 ಕಿ ಮೀ ಸ್ಪೀಡ್​ ಅಷ್ಟೇ. ಕೆಲವರಲ್ಲಿ 120 ಗರಿಷ್ಠ ಸ್ಪೀಡ್ ಇದೆ. ಅನ್ನೋ ತಪ್ಪು ತಿಳಿವಳಿಕೆ ಇದೆ. 100 ಕಿ.ಮೀ ವೇಗ ಮೀರಿದರೆ ಅಂತಹ ವಾಹನಗಳಿಗೆ ದಂಡ ಹಾಕುವುದು ಫಿಕ್ಸ್ ಎಂದು ಎಚ್ಚರಿಕೆ ನೀಡಿದರು.

ಮಂಡ್ಯ ಹೊರ ವಲಯದಲ್ಲಿ ಈಗಾಗಲೇ ಆನ್​​​​ಲೈನ್ ವೇಗ ಪರೀಕ್ಷಾ ಯಂತ್ರವನ್ನು ಅಳವಡಿಸಲಾಗಿದೆ. 100 ಕಿ.ಮೀ ವೇಗ ಮಿತಿ ದಾಟಿದ ವಾಹನಗಳಿಗೆ ಟೋಲ್ ಗಳಲ್ಲೇ ದಂಡ ವಿಧಿಸಲಾಗುತ್ತದೆ ಎಂದರು.

ಇದನ್ನೂಓದಿ: ಟ್ರಾಫಿಕ್​ ಜಾಮ್​... ಹಂತ ಹಂತವಾಗಿ ಲಾಗೌಟ್​: ಐಟಿ ಕಂಪನಿಗಳಿಗೆ ಪೊಲೀಸರ ಸಲಹೆ

Last Updated : Jul 26, 2023, 8:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.