ETV Bharat / state

ಪ್ರವಾಹದಿಂದ ಬೆಳೆ ನಷ್ಟ : ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆ

author img

By

Published : Aug 24, 2020, 6:49 PM IST

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಬೆಳೆ ನಷ್ಟ ಉಂಟಾದ ಪರಿಣಾಮ ಸಾಲಕ್ಕೆ ಹೆದರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Farmer committed suicide
Farmer committed suicide

ಮೈಸೂರು: ಪ್ರವಾಹದಿಂದ ಬೆಳೆ ನಷ್ಟ ಉಂಟಾದ ಪರಿಣಾಮ ಸಾಲಕ್ಕೆ ಹೆದರಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹೆಗ್ಗಂದೂರಿ ಗ್ರಾಮದ ಸ್ವಾಮಿಗೌಡ ನೇಣಿಗೆ ಶರಣಾದ‌ ರೈತ. ಇವರು ಹುಣಸೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸುಮಾರು ಎಂಟು ಲಕ್ಷ ಸಾಲ ಮಾಡಿದ್ದರು ಎನ್ನಲಾಗುತ್ತಿದೆ.

ಅಷ್ಟೇ ಅಲ್ಲದೆ ಕಳೆದೆರಡು ವರ್ಷಗಳಿಂದ ಅತಿವೃಷ್ಟಿ, ಲಕ್ಷ್ಮಣತೀರ್ಥ ನದಿ ಪ್ರವಾಹದಿಂದ ಬೆಳೆದ ಬೆಳೆ ನಾಶವಾಗಿತ್ತು. ಪರಿಣಾಮ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.

ಇದರಿಂದ ಮನನೊಂದ‌ ಸ್ವಾಮಿಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಪ್ರವಾಹದಿಂದ ಬೆಳೆ ನಷ್ಟ ಉಂಟಾದ ಪರಿಣಾಮ ಸಾಲಕ್ಕೆ ಹೆದರಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹೆಗ್ಗಂದೂರಿ ಗ್ರಾಮದ ಸ್ವಾಮಿಗೌಡ ನೇಣಿಗೆ ಶರಣಾದ‌ ರೈತ. ಇವರು ಹುಣಸೂರಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸುಮಾರು ಎಂಟು ಲಕ್ಷ ಸಾಲ ಮಾಡಿದ್ದರು ಎನ್ನಲಾಗುತ್ತಿದೆ.

ಅಷ್ಟೇ ಅಲ್ಲದೆ ಕಳೆದೆರಡು ವರ್ಷಗಳಿಂದ ಅತಿವೃಷ್ಟಿ, ಲಕ್ಷ್ಮಣತೀರ್ಥ ನದಿ ಪ್ರವಾಹದಿಂದ ಬೆಳೆದ ಬೆಳೆ ನಾಶವಾಗಿತ್ತು. ಪರಿಣಾಮ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ.

ಇದರಿಂದ ಮನನೊಂದ‌ ಸ್ವಾಮಿಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.