ETV Bharat / state

ಹುಡುಗಿಯನ್ನ ರೇಗಿಸಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಯುವತಿಯನ್ನು ರೇಗಿಸಿದ ಕಾರಣಕ್ಕಾಗಿ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

author img

By

Published : Jun 11, 2019, 4:33 PM IST

2 ಗುಂಪುಗಳ ನಡುವೆ ಮಾರಾಮಾರಿ

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ್ದು, ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಖಾಲಿ ಜಾಗದಲ್ಲಿ ಹುಡುಗರು ಕ್ರಿಕೆಟ್ ಆಡುವಾಗ ಕಾಲೇಜಿನಿಂದ ಬರುವ ಯುವತಿಯರ ಎದುರು ಅಸಭ್ಯವಾಗಿ ವರ್ತಿಸುತಿದ್ದರು ಎಂದು ಆರೋಪಿಸಲಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಈ ಗುಂಪಿನ ಹುಡುಗರು ಮತ್ತೊಂದು ಗುಂಪಿನ ಯುವಕರಿಗೆ ಅವಾಜ್ ಹಾಕಿ ಕಳುಹಿಸಿದ್ದಾರೆ. ನಂತರ ಕ್ರಿಕೆಟ್​ ಆಡುತ್ತಿದ್ದ ಗುಂಪಿನ ಹುಡುಗರು ನಿನ್ನೆ ರಾತ್ರಿ ಯುವತಿಯ ಮನೆಗೆ ನುಗ್ಗಿ ಮನೆಯಲ್ಲಿದ್ದರ ಮೇಲೆ ಬ್ಯಾಟ್ ಹಾಗೂ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮವಾಗಿ ಯುವತಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ಯುವಕರ ಮೇಲೆ ಪ್ರತಿ ಹಲ್ಲೆ ಮಾಡಲಾಗಿದೆ.

2 ಗುಂಪುಗಳ ನಡುವೆ ಮಾರಾಮಾರಿ

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಗ್ರಾಮಕ್ಕೆ ಬಂದು ಮನವೊಲಿಸಲು ಮುಂದಾಗಿದ್ದಾರೆ. ಆದರೆ ಯುವಕರು ತಡರಾತ್ರಿಯವರೆಗೆ ಪ್ರತಿಭಟನೆ ನಡೆಸಿದ ಪರಿಣಾಮ ಹಲ್ಲೆ ಮಾಡಿದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯುವತಿಯ ಕುಟುಂಬಸ್ಥರು ನಂಜನಗೂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ್ದು, ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಖಾಲಿ ಜಾಗದಲ್ಲಿ ಹುಡುಗರು ಕ್ರಿಕೆಟ್ ಆಡುವಾಗ ಕಾಲೇಜಿನಿಂದ ಬರುವ ಯುವತಿಯರ ಎದುರು ಅಸಭ್ಯವಾಗಿ ವರ್ತಿಸುತಿದ್ದರು ಎಂದು ಆರೋಪಿಸಲಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಈ ಗುಂಪಿನ ಹುಡುಗರು ಮತ್ತೊಂದು ಗುಂಪಿನ ಯುವಕರಿಗೆ ಅವಾಜ್ ಹಾಕಿ ಕಳುಹಿಸಿದ್ದಾರೆ. ನಂತರ ಕ್ರಿಕೆಟ್​ ಆಡುತ್ತಿದ್ದ ಗುಂಪಿನ ಹುಡುಗರು ನಿನ್ನೆ ರಾತ್ರಿ ಯುವತಿಯ ಮನೆಗೆ ನುಗ್ಗಿ ಮನೆಯಲ್ಲಿದ್ದರ ಮೇಲೆ ಬ್ಯಾಟ್ ಹಾಗೂ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮವಾಗಿ ಯುವತಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ಯುವಕರ ಮೇಲೆ ಪ್ರತಿ ಹಲ್ಲೆ ಮಾಡಲಾಗಿದೆ.

2 ಗುಂಪುಗಳ ನಡುವೆ ಮಾರಾಮಾರಿ

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಗ್ರಾಮಕ್ಕೆ ಬಂದು ಮನವೊಲಿಸಲು ಮುಂದಾಗಿದ್ದಾರೆ. ಆದರೆ ಯುವಕರು ತಡರಾತ್ರಿಯವರೆಗೆ ಪ್ರತಿಭಟನೆ ನಡೆಸಿದ ಪರಿಣಾಮ ಹಲ್ಲೆ ಮಾಡಿದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯುವತಿಯ ಕುಟುಂಬಸ್ಥರು ನಂಜನಗೂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಗಲಾಟೆBody:

ಮುಸ್ಲಿಂ-ದಲಿತರ ನಡುವೆ ಮಾರಾಮಾರಿ ನಗರ್ಲೆಯಲ್ಲಿ ಬಿಗುವಿನ ವಾತಾವರಣ
ಮೈಸೂರು:ಮುಸ್ಲಿಂ-ದಲಿತರ ನಡುವೆ ಮಾರಾಮಾರಿ ನಡೆದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಖಾಲಿ ಜಾಗದಲ್ಲಿ ಮುಸ್ಲಿಂ ಹುಡುಗರು ಕ್ರಿಕೆಟ್ ಆಡುವಾಗ ಕಾಲೇಜಿನಿಂದ ಬರುವ ಯುವತಿಗೆ ಅಸಭ್ಯವಾಗಿ ವರ್ತಿಸುತಿದ್ದರು.ಇದರ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ದಲಿತರ ಯುವಕರ ಮೇಲೆ ಮುಸ್ಲಿಂ ಯುವಕರ ಅವಾಜ್ ಹಾಕಿ ಕಳುಹಿಸಿದ್ದಾರೆ.
ಗ್ರಾಮದಲ್ಲಿ ಗಲಾಟೆ ನಡೆಯುವುದು ಬೇಡವೆಂದು ದಲಿತರು ಸುಮ್ಮನಿದ್ದರು.ಆದರೆ ನಿನ್ನೆ ರಾತ್ರಿ ಮುಸ್ಲಿಂ ಗುಂಪೊಂದು ಯುವತಿಯ ಮನೆಗೆ ನುಗ್ಗಿ ಮನೆಯಲ್ಲಿದ್ದರ ಮೇಲೆ ಬ್ಯಾಟ್ ಹಾಗೂ ದೊಣ್ಣೆಯಿಂದ ಹೊಡೆದು ಪರಾರಿಯಾಗಿದ್ದಾರೆ.
ದಲಿತ ಜನಾಂಗದವರು ಯುವತಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಗ್ರಾಮಕ್ಕೆ ಬಂದ ಮನವೊಲಿಸಲು ಮುಂದಾದರು.ಆದರೆ ದಲಿತ ಯುವಕರು ತಡರಾತ್ರಿಯವರೆಗೆ ಪ್ರತಿಭಟನೆ ನಡೆಸಿದ ಪರಿಣಾಮ, ಹಲ್ಲೆ ಮಾಡಿದ ಯುವಕರನ್ನು ಪೊಲೀಸರುಬಂಧಿಸಿದ್ದಾರೆ.
ಹಲ್ಲೆಗೊಳಗಾದ ಯುವತಿಯ ಕುಟುಂಬ ನಂಜನಗೂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಗಲಾಟೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.