ETV Bharat / state

ಜಾತಿ ವೈಷಮ್ಯ: ಘರ್ಷಣೆಯಲ್ಲಿ ಆರು ಮಂದಿಗೆ ಗಾಯ - ಎಚ್.ಡಿ. ಕೋಟೆ ಪೊಲೀಸರು

ಜಾತಿ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ.

ಜಾತಿ ವೈಷ್ಯಮದ ಗಲಾಟೆ
author img

By

Published : Nov 5, 2019, 5:51 PM IST

ಮೈಸೂರು: ಜಾತಿ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಆರು ಮಂದಿ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎಚ್.ಡಿ. ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಸೋಮವಾರ ರಾತ್ರಿ ಜಾತಿ ವಿಚಾರವಾಗಿ ಘರ್ಷಣೆ ನಡೆದಿದೆ. ಎರಡು ಸಮುದಾಯದ ನಡುವೆ ಕೆಲವು ದಿನಗಳ ಹಿಂದೆಯೇ ಜಗಳ ನಡೆದಿತ್ತು. ಬಳಿಕ ಊರಿನ ಹಿರಿಯರು ಸೇರಿ ಎರಡೂ ಸಮುದಾಯದ ಮುಖಂಡರನ್ನು ಕರೆಸಿ ಒಟ್ಟಿಗೆ ಕೂರಿಸಿ ಪರಸ್ಪರ ಮಾತುಕತೆ ನಡೆಸಿ ಸಂಧಾನ ಮಾಡಿದ್ದರು. ಆದ್ರೆ ಸೋಮವಾರ ರಾತ್ರಿ ಒಂದು ಸಮುದಾಯಕ್ಕೆ ಸೇರಿದ ಸುರೇಶ್​ ಎಂಬುವರು ಅಂಗಡಿಯಿಂದ ಸಾಮಾನುಗಳನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮತ್ತೊಂದು ಸಮುದಾಯದ ಸುಮಾರು 20 ಜನರ ಗುಂಪು ಕಲ್ಲುಗಳಿಂದ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಅದೇ ಸಮುದಾಯಕ್ಕೆ ಸೇರಿದ ಮನೆಗಳೊಳಗೆ ಪ್ರವೇಶಿಸಿ ಕಲ್ಲು ತೂರಾಟ ನಡೆಸಿ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಈ ಘಟನೆಯಲ್ಲಿ ಸುರೇಶ, ಅಶೋಕ, ಮೂರ್ತಿ, ಶಿವರಾಜು, ನಿಂಗರಾಜು, ಅಪ್ಪಾಜಿ ಗಾಯಗೊಂಡಿದ್ದಾರೆ.

ಜಾತಿ ವೈಷಮ್ಯ, ಆರು ಮಂದಿಗೆ ಗಾಯ

ಘಟನೆಯಲ್ಲಿ ಒಟ್ಟು ಆರು ಮಂದಿ ಗಾಯಗೊಂಡಿದ್ದು ಮೂವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೆಚ್. ಡಿ. ಕೋಟೆಯ ಸಾರ್ವಜನಿಕ ಆಸ್ಪತ್ರೆ ಹಾಗು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಎಚ್.ಡಿ. ಕೋಟೆ ಪೊಲೀಸರು ರಾತ್ರಿ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

ಮೈಸೂರು: ಜಾತಿ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಆರು ಮಂದಿ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎಚ್.ಡಿ. ಕೋಟೆ ತಾಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ಸೋಮವಾರ ರಾತ್ರಿ ಜಾತಿ ವಿಚಾರವಾಗಿ ಘರ್ಷಣೆ ನಡೆದಿದೆ. ಎರಡು ಸಮುದಾಯದ ನಡುವೆ ಕೆಲವು ದಿನಗಳ ಹಿಂದೆಯೇ ಜಗಳ ನಡೆದಿತ್ತು. ಬಳಿಕ ಊರಿನ ಹಿರಿಯರು ಸೇರಿ ಎರಡೂ ಸಮುದಾಯದ ಮುಖಂಡರನ್ನು ಕರೆಸಿ ಒಟ್ಟಿಗೆ ಕೂರಿಸಿ ಪರಸ್ಪರ ಮಾತುಕತೆ ನಡೆಸಿ ಸಂಧಾನ ಮಾಡಿದ್ದರು. ಆದ್ರೆ ಸೋಮವಾರ ರಾತ್ರಿ ಒಂದು ಸಮುದಾಯಕ್ಕೆ ಸೇರಿದ ಸುರೇಶ್​ ಎಂಬುವರು ಅಂಗಡಿಯಿಂದ ಸಾಮಾನುಗಳನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಮತ್ತೊಂದು ಸಮುದಾಯದ ಸುಮಾರು 20 ಜನರ ಗುಂಪು ಕಲ್ಲುಗಳಿಂದ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಅದೇ ಸಮುದಾಯಕ್ಕೆ ಸೇರಿದ ಮನೆಗಳೊಳಗೆ ಪ್ರವೇಶಿಸಿ ಕಲ್ಲು ತೂರಾಟ ನಡೆಸಿ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಈ ಘಟನೆಯಲ್ಲಿ ಸುರೇಶ, ಅಶೋಕ, ಮೂರ್ತಿ, ಶಿವರಾಜು, ನಿಂಗರಾಜು, ಅಪ್ಪಾಜಿ ಗಾಯಗೊಂಡಿದ್ದಾರೆ.

ಜಾತಿ ವೈಷಮ್ಯ, ಆರು ಮಂದಿಗೆ ಗಾಯ

ಘಟನೆಯಲ್ಲಿ ಒಟ್ಟು ಆರು ಮಂದಿ ಗಾಯಗೊಂಡಿದ್ದು ಮೂವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೆಚ್. ಡಿ. ಕೋಟೆಯ ಸಾರ್ವಜನಿಕ ಆಸ್ಪತ್ರೆ ಹಾಗು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಎಚ್.ಡಿ. ಕೋಟೆ ಪೊಲೀಸರು ರಾತ್ರಿ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

Intro:ಜಾತಿ ಗಲಾಟೆBody:ಜಾತಿ ವೈಷ್ಯಮದ ಗಲಾಟೆ 6ಮಂದಿಗೆ ಗಾಯ
ಮೈಸೂರು: ಜಾತಿ ವೈಷ್ಯಮದ ಹಿನ್ನಲೆಯಲ್ಲಿ ಗುಂಪುಗಳ ಘರ್ಷಣೆಯುಂಟಾಗಿ ಆರು ಮಂದಿ ಕಲ್ಲಿನೇಟುನಿಂದ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ
ಹೆಬ್ಬಲಗುಪ್ಪೆ ಗ್ರಾಮದಲ್ಲಿ ಸೋಮವಾರ  ರಾತ್ರಿ ನಡೆದ ಘಟನೆಯಿಂದ ಆರು ಮಂದಿ ಗಾಯಗೊಂಡಿದ್ದು ಮೂವರು ಗಂಭೀರ ಗಾಯಗಳಾಗಿ ಹೆಚ್ ಡಿ ಕೋಟೆ ತಾಲೂಕು ಕೇಂದ್ರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.

ಹಲವು ದಿನಗಳ ಹಿಂದಿನಿಂದ ಘಟನೆಯಲ್ಲಿ ಹೆಬ್ಬಲಗುಪ್ಪೆ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸುರೇಶ, ಅಶೋಕ, ಮೂರ್ತಿ, ಶಿವರಾಜು, ನಿಂಗರಾಜು,ಅಪ್ಪಾಜಿ ಗಾಯಗೊಂಡಿದ್ದಾರೆ.

ಬಹುಸಂಖ್ಯೆಯಲ್ಲಿರುವ ಪರಿಶಿಷ್ಟ ಪಂಗಡದ ನಾಯಕ ಸಮುದಾಯ ಮತ್ತು ಅಲ್ಪಸಂಖ್ಯೆಯಲ್ಲಿ ಇರುವ ಪರಿಶಿಷ್ಟ ಜಾತಿಯವರ ನಡುವೆ ಜಾತಿ ವೈಷ್ಯಮದಿಂದ ಪರಸ್ಪರ ಮಾತುಕತೆ ನಡೆಸಿ ಸಂಧಾನದ ಮೂಲಕ ಜಾತಿ ವೈಷ್ಯಮ ಸಮಾನ ಗೊಳಿಸಲಾಗಿತ್ತು.

ಸೋಮವಾರ ರಾತ್ರಿ ಪರಿಶಿಷ್ಟ ಜಾತಿಗೆ ಸೇರಿದ ಸುರೇಶ ಎಂಬುವವರು, ಅಂಗಡಿಯೊಂದರಲ್ಲಿ ಪದಾರ್ಥಗಳನ್ನು ಖರೀದಿಸಿ ಮನೆಗೆ ಹಿಂದಿರುಗುತ್ತಿದ್ದಾಗ ನಾಯಕ ಸಮುದಾಯದ ಸುಮಾರು 20 ಜನರ ಗುಂಪೊಂದು ಕಲ್ಲುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ, ದಲಿತರಿಗೆ ಪ್ರವೇಶಿಸಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳು ಆರೋಪಿಸುತ್ತಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಎಚ್.ಡಿ.ಕೋಟೆ ಪೊಲೀಸರು ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.Conclusion:ಜಾತಿ ಗಲಾಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.