ETV Bharat / state

ನಂಜನಗೂಡು: ಕಿರು ಅರಣ್ಯ ಪ್ರದೇಶದ ಬೆಟ್ಟದಲ್ಲಿ ಬೆಂಕಿ

author img

By

Published : Jan 28, 2021, 7:26 PM IST

Updated : Jan 28, 2021, 9:20 PM IST

ಇಲ್ಲಿನ ಕೃಷ್ಣರಾಜಪುರ ಗ್ರಾಮದ ಬಳಿ ಕಾಣಿಸಿಕೊಂಡ ಬೆಂಕಿ ಅರಣ್ಯ ಪ್ರದೇಶಕ್ಕೂ ಆವರಿಸಿದೆ. ಬೆಟ್ಟದಲ್ಲಿದ್ದ ಮರ, ಗಿಡ, ಸಸಿಗಳು ಭಸ್ಮವಾಗಿವೆ.

Fire in the forest area at Nanjanagudu
ಕಿರು ಅರಣ್ಯ ಪ್ರದೇಶದ ಕುರುಚಲು ಬೆಟ್ಟದಲ್ಲಿ ಬೆಂಕಿ ಅವಘಡ

ಮೈಸೂರು: ನಂಜನಗೂಡು ತಾಲೂಕಿನ‌ ಕೋಣನೂರು ಮತ್ತು ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಕುರುಚಲು ಅರಣ್ಯ ಪ್ರದೇಶದ ಬೆಟ್ಟಕ್ಕೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗ್ತಿದೆ.

ಇಲ್ಲಿನ ಕೃಷ್ಣರಾಜಪುರ ಗ್ರಾಮದ ಬಳಿ ಕಾಣಿಸಿಕೊಂಡ ಬೆಂಕಿ ಅರಣ್ಯ ಪ್ರದೇಶಕ್ಕೂ ಆವರಿಸಿದೆ. ಬೆಟ್ಟದಲ್ಲಿದ್ದ ಮರ, ಗಿಡ, ಸಸಿಗಳು ಭಸ್ಮವಾಗಿವೆ. ಈ ಭಾಗದಲ್ಲಿ ಜಿಂಕೆ, ನವಿಲು, ಚಿರತೆ, ಮೊಲ, ಕಾಡು ಹಂದಿ, ಕಿರುಬ ಹೀಗೆ ಪ್ರಾಣಿ-ಪಕ್ಷಿಗಳು ಹೆಚ್ಚಾಗಿ ಕಂಡುಬರುತ್ತವೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿವೆ.

ಕಿರು ಅರಣ್ಯ ಪ್ರದೇಶದ ಬೆಟ್ಟದಲ್ಲಿ ಬೆಂಕಿ

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದು, ಬೇಸಿಗೆ ಮುನ್ನವೇ ಬೆಂಕಿ ಕಾಣಿಸಿಕೊಂಡಿರುವುದು ಅರಣ್ಯ ಇಲಾಖೆಗೆ ಎಚ್ಚರಿಕೆಯ ಗಂಟೆಯಾಗಿದೆ.

ಇದನ್ನೂ ಓದಿ: ಎರಡು ತಿಂಗಳಲ್ಲಿ ಹೆಚ್ಚಿನ ತೆರಿಗೆ ವಸೂಲಿಗೆ ಕ್ರಮ: ಮೈಸೂರು ಪಾಲಿಕೆ ಆಯುಕ್ತ

ಮೈಸೂರು: ನಂಜನಗೂಡು ತಾಲೂಕಿನ‌ ಕೋಣನೂರು ಮತ್ತು ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಕುರುಚಲು ಅರಣ್ಯ ಪ್ರದೇಶದ ಬೆಟ್ಟಕ್ಕೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗ್ತಿದೆ.

ಇಲ್ಲಿನ ಕೃಷ್ಣರಾಜಪುರ ಗ್ರಾಮದ ಬಳಿ ಕಾಣಿಸಿಕೊಂಡ ಬೆಂಕಿ ಅರಣ್ಯ ಪ್ರದೇಶಕ್ಕೂ ಆವರಿಸಿದೆ. ಬೆಟ್ಟದಲ್ಲಿದ್ದ ಮರ, ಗಿಡ, ಸಸಿಗಳು ಭಸ್ಮವಾಗಿವೆ. ಈ ಭಾಗದಲ್ಲಿ ಜಿಂಕೆ, ನವಿಲು, ಚಿರತೆ, ಮೊಲ, ಕಾಡು ಹಂದಿ, ಕಿರುಬ ಹೀಗೆ ಪ್ರಾಣಿ-ಪಕ್ಷಿಗಳು ಹೆಚ್ಚಾಗಿ ಕಂಡುಬರುತ್ತವೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿವೆ.

ಕಿರು ಅರಣ್ಯ ಪ್ರದೇಶದ ಬೆಟ್ಟದಲ್ಲಿ ಬೆಂಕಿ

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದು, ಬೇಸಿಗೆ ಮುನ್ನವೇ ಬೆಂಕಿ ಕಾಣಿಸಿಕೊಂಡಿರುವುದು ಅರಣ್ಯ ಇಲಾಖೆಗೆ ಎಚ್ಚರಿಕೆಯ ಗಂಟೆಯಾಗಿದೆ.

ಇದನ್ನೂ ಓದಿ: ಎರಡು ತಿಂಗಳಲ್ಲಿ ಹೆಚ್ಚಿನ ತೆರಿಗೆ ವಸೂಲಿಗೆ ಕ್ರಮ: ಮೈಸೂರು ಪಾಲಿಕೆ ಆಯುಕ್ತ

Last Updated : Jan 28, 2021, 9:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.