ETV Bharat / state

ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಹದಗೆಟ್ಟ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಮೈಸೂರಿನ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ.

author img

By

Published : May 13, 2019, 6:15 PM IST

ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಮೈಸೂರು: ಹದಗೆಟ್ಟ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಮೈಸೂರಿನ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ.

ಕೆ.ಆರ್.ಸಾಗರಕಟ್ಟೆ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆಯವರೆಗೆ ಇರುವ ಟರ್ಕಿ ಟ್ರಾವೆಲ್ಸ್ ರೋಡ್​ವರೆಗೆ ರಸ್ತೆ ಹಾಳಾಗಿರುವುದರಿಂದ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಈ ಬಗ್ಗೆ ಈಗಾಗಲೇ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಪ್ರತಿಭಟನೆ ನಡೆಸಿದೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರ ಪ್ರತಿಭಟನೆ


ನಗರದ ತಾಲೂಕು ಕಚೇರಿ ಮುಂಭಾಗವಿರುವ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು, ತಿಂಗಳೊಳಗೆ ರಸ್ತೆ ದುರಸ್ತಿ ಕಾರ್ಯ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರು: ಹದಗೆಟ್ಟ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಮೈಸೂರಿನ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿದ್ದಾರೆ.

ಕೆ.ಆರ್.ಸಾಗರಕಟ್ಟೆ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆಯವರೆಗೆ ಇರುವ ಟರ್ಕಿ ಟ್ರಾವೆಲ್ಸ್ ರೋಡ್​ವರೆಗೆ ರಸ್ತೆ ಹಾಳಾಗಿರುವುದರಿಂದ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಈ ಬಗ್ಗೆ ಈಗಾಗಲೇ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ಪ್ರತಿಭಟನೆ ನಡೆಸಿದೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ರೈತರ ಪ್ರತಿಭಟನೆ


ನಗರದ ತಾಲೂಕು ಕಚೇರಿ ಮುಂಭಾಗವಿರುವ ರಾಷ್ಟ್ರೀಯ ಹೆದ್ದಾರಿ ಉಪ ಕಚೇರಿ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು, ತಿಂಗಳೊಳಗೆ ರಸ್ತೆ ದುರಸ್ತಿ ಕಾರ್ಯ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Intro:ರೈತರ ಪ್ರತಿಭಟನೆ


Body:ರೈತರ ಪ್ರತಿಭಟನೆ


Conclusion:ಹದಗೆಟ್ಟ ರಸ್ತೆ ಸರಿಪಡಿಸಿ , ರಾಷ್ಟ್ರೀಯ ಹೆದ್ದಾರಿ ಉಪಕಚೇರಿ ಮುಂದೆ ರೈತರ ಆಕ್ರೋಶ
ಮೈಸೂರು: ಹದಗೆಟ್ಟ ರಸ್ತೆಯಿಂದ ವಾಹನ ಸವಾರರಿಗೆ ಸಂಚಾರ ಮಾಡಲು ಕಷ್ಟವಾಗುತ್ತಿದೆ.ಈಗಾಗಲೇ ಮನವಿ ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲವೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿದೆ.
ನಗರದ ತಾಲ್ಲೂಕು ಕಚೇರಿ ಮುಂಭಾಗವಿರುವ ರಾಷ್ಟ್ರೀಯ ಹೆದ್ದಾರಿ ಉಪಕಚೇರಿ ಮುಂದೆ ಜಮಾಯಿಸಿದ ರೈತರು, ಕೆ.ಆರ್.ಸಾಗರ ಕಟ್ಟೆ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆಯವರೆಗೆ ಇರುವ ಟರ್ಕಿ ಟ್ರಾವೆಲ್ಸ್ ರೋಡ್ ವರೆಗೆ ರಸ್ತೆ ತುಂಬ ಹದಗೆಟ್ಟಿದ್ದು, ವಾಹನ ಸವಾರರು ಹೋಗುವುದೇ ಕಷ್ಟವಾಗಿದೆ .ಇದರ ಬಗ್ಗೆ ಕೆಲ ತಿಂಗಳ ಹಿಂದೆ ಪ್ರತಿಭಟನೆ ಮಾಡಿ ಅಧಿಕಾರಿಗಳಿಗೆ ಮನವಿ ನೀಡಲಾಗಿತ್ತು.ಆದರೆ ಅಧಿಕಾರಿಗಳು ಮಾತ್ರ ಯಾವ ಕ್ರಮ ಕೈಗೊಂಡಿಲ್ಲವೆಂದು ಕಿಡಿಕಾರಿದರು.
ತಿಂಗಳೊಳಗೆ ರಸ್ತೆ ದುರಸ್ತಿ ಪಡಿಸದಿದ್ದರೆ, ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.