ETV Bharat / state

ನಾಳೆಯಿಂದ ಆಪ್ತಮಿತ್ರ ಸಹಾಯವಾಣಿ ಆರಂಭ: ಯಾರೆಲ್ಲಾ ಯಾವ ಮಾಹಿತಿ ಪಡೆದುಕೊಳ್ಳಬಹುದು? - ಸಾರ್ವಜನಿಕರು ಆರೋಗ್ಯದ ಬಗ್ಗೆ ಮಾಹಿತಿ

ರಾಜ್ಯದಲ್ಲಿ ನಾಳೆಯಿಂದ 'ಆಪ್ತಮಿತ್ರ' (14410) ಎಂಬ ಸಹಾಯವಾಣಿ ಆರಂಭವಾಗುತ್ತಿದೆ. ಸಿಎಂ ಬಿಎಸ್​ವೈ ಈ ಸಹಾಯವಾಣಿಯನ್ನು ನಾಳೆ ಲೋಕಾರ್ಪಣೆಗೊಳಿಸಲಿದ್ದು, ಯಾರೆಲ್ಲಾ ಇದರ ಲಾಭ ಪಡೆದುಕೊಳ್ಳಲಿದ್ದಾರೆ ಗೊತ್ತಾ?

Green signal to Apthamitra helpline from tomorrow
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸುದ್ದಿಗೋಷ್ಠಿ
author img

By

Published : Apr 21, 2020, 6:06 PM IST

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ 'ಆಪ್ತಮಿತ್ರ' ಎಂಬ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಲಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಇನ್ಫೋಸಿಸ್​ನೊಂದಿಗೆ ಒಡಂಬಡಿಕೆ ಮಾಡಿಕೊಂಡು ಆಪ್ತಮಿತ್ತ ಎಂಬ ಸಹಾಯವಾಣಿಯನ್ನು ಆರಂಭಿಸುತ್ತಿದೆ. ಈ ಕೇಂದ್ರದಲ್ಲಿ ವೈದ್ಯಕೀಯ ಕ್ಷೇತ್ರದ ಪರಿಣಿತರು, ವೈದ್ಯರು, ನರ್ಸ್​ಗಳು ಸೇರಿದಂತೆ 2 ಸಾವಿರ ಮಂದಿ ಕೆಲಸ ಮಾಡುತ್ತಾರೆ. 14410 ಈ ಸಹಾಯವಾಣಿಗೆ ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸುದ್ದಿಗೋಷ್ಠಿ

ಇನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ. 54,396 ಆಸ್ಪತ್ರೆಗಳನ್ನು ಕೋವಿಡ್-19ಗಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದರು.

ಕೋವಿಡ್-19 ವಿರುದ್ಧ ಸೇನಾನಿಗಳಂತೆ ಹೋರಾಟ ಮಾಡುತ್ತಿರುವ ವೈದ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ಸದ್ಯಕ್ಕೆ ಏನೂ ಕೊಡಲು ಸಾಧ್ಯವಿಲ್ಲ. ರಾಜ್ಯ ಹಾಗೂ ದೇಶ ಆರ್ಥಿಕ ಸಂಕಷ್ಟದಲ್ಲಿದೆ‌. ಮುಂದಿನ ದಿನಗಳಲ್ಲಿ ನೋಡೋಣ ಎಂದರು.

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ 'ಆಪ್ತಮಿತ್ರ' ಎಂಬ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಲಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಪಡೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಇನ್ಫೋಸಿಸ್​ನೊಂದಿಗೆ ಒಡಂಬಡಿಕೆ ಮಾಡಿಕೊಂಡು ಆಪ್ತಮಿತ್ತ ಎಂಬ ಸಹಾಯವಾಣಿಯನ್ನು ಆರಂಭಿಸುತ್ತಿದೆ. ಈ ಕೇಂದ್ರದಲ್ಲಿ ವೈದ್ಯಕೀಯ ಕ್ಷೇತ್ರದ ಪರಿಣಿತರು, ವೈದ್ಯರು, ನರ್ಸ್​ಗಳು ಸೇರಿದಂತೆ 2 ಸಾವಿರ ಮಂದಿ ಕೆಲಸ ಮಾಡುತ್ತಾರೆ. 14410 ಈ ಸಹಾಯವಾಣಿಗೆ ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸುದ್ದಿಗೋಷ್ಠಿ

ಇನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲಾಗಿದೆ. 54,396 ಆಸ್ಪತ್ರೆಗಳನ್ನು ಕೋವಿಡ್-19ಗಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದರು.

ಕೋವಿಡ್-19 ವಿರುದ್ಧ ಸೇನಾನಿಗಳಂತೆ ಹೋರಾಟ ಮಾಡುತ್ತಿರುವ ವೈದ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ಸದ್ಯಕ್ಕೆ ಏನೂ ಕೊಡಲು ಸಾಧ್ಯವಿಲ್ಲ. ರಾಜ್ಯ ಹಾಗೂ ದೇಶ ಆರ್ಥಿಕ ಸಂಕಷ್ಟದಲ್ಲಿದೆ‌. ಮುಂದಿನ ದಿನಗಳಲ್ಲಿ ನೋಡೋಣ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.