ETV Bharat / state

ಕುರುಬ ಸಮಾಜದಿಂದ ಸಿದ್ದರಾಮಯ್ಯ ಅವರನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ರು ಹೆಚ್ ವಿಶ್ವನಾಥ್

ಕುರುಬ ಸಮಾಜವನ್ನು ಎಸ್​ಟಿ ಗೆ ಸೇರಿಸುವ ವಿಚಾರದಲ್ಲಿ ಸಮುದಾಯದ ಸ್ವಾಮೀಜಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇದಕ್ಕೆ ಆರ್.ಎಸ್.ಎಸ್ ಹಣ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಕೂಡಲೇ ಸ್ವಾಮೀಜಿ ಹಾಗೂ ಸಮುದಾಯದ ಕ್ಷಮೆ ಕೇಳಬೇಕು. ಅಲ್ಲದೆ, ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆಯೆಂದು ಎಂಎಲ್​ಸಿ ಹೆಚ್​​​ ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

author img

By

Published : Jan 20, 2021, 1:00 PM IST

Updated : Jan 20, 2021, 1:18 PM IST

h vishwanath outrage against siddaramaih statement
ಕುರುಬ ಸಮಾಜದಿಂದ ಸಿದ್ದರಾಮಯ್ಯ ಅವರನ್ನು ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಹೆಚ್ ವಿಶ್ವನಾಥ್

ಮೈಸೂರು: ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಲಘುವಾಗಿ ಮಾತನಾಡಿರುವುದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ ಸಿದ್ದರಾಮಯ್ಯನವರೇ ಎಂದು ವಿಧಾನ ಪರಿಷತ್​ ಸದಸ್ಯ ಹೆಚ್​​​ ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಂಎಲ್​ಸಿ ಹೆಚ್ ವಿಶ್ವನಾಥ್

ಇಂದು ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕುರುಬ ಸಮಾಜವನ್ನು ಎಸ್​ಟಿ ಗೆ ಸೇರಿಸುವ ವಿಚಾರದಲ್ಲಿ ಸಮುದಾಯದ ಸ್ವಾಮೀಜಿ (ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀನಿರಂಜನಾನಂದ ಪುರಿ ಶ್ರೀಗಳು) ಪಾದಯಾತ್ರೆ ನಡೆಸುತ್ತಿದ್ದಾರೆ. ಇದಕ್ಕೆ ಆರ್.ಎಸ್.ಎಸ್ ಹಣ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಕೂಡಲೇ ಸ್ವಾಮೀಜಿ ಹಾಗೂ ಸಮುದಾಯದ ಕ್ಷಮೆಯನ್ನು ಕೇಳಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ. ನೀವು ಒಬ್ಬರೇ ಬುದ್ಧಿವಂತರಲ್ಲ. ನೀವು ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಮಾಜ, ಸ್ವಾಮೀಜಿಯವರ ಪಾತ್ರವೂ ಇದೆ. ಅದನ್ನು ನೀವು ಮರೆಯಬಾರದು ಮಿಸ್ಟರ್ ಸಿದ್ದರಾಮಯ್ಯ. ನೀವು ಸಮಾಜಕ್ಕಿಂತ ಬಹಳ ಚಿಕ್ಕವರು ಎಂದು ವಿಶ್ವನಾಥ್​ ಗುಡುಗಿದರು.

ಈ ಸುದ್ದಿಯನ್ನೂ ಓದಿ: ನಮ್ಮ ಮಠ ಕಿಂಗ್ ಮೇಕರ್ ಆಗುತ್ತದೆಯೇ ಹೊರತು ಕಿಂಗ್ ಆಗಲ್ಲ: ಕಾಗಿನೆಲೆ ನಿರಂಜನಾನಂದಪುರಿ ಶ್ರೀ

ಜೆಡಿಎಸ್​ನಲ್ಲಿ ಕಡೆಗಣನೆಗೆ ಒಳಗಾಗಿರುವ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್​ಗೆ ಹೋಗಿ ಏಟು ತಿನ್ನುವ ಬದಲು ಬಿಜೆಪಿಗೆ ಬಂದರೆ ಒಳ್ಳೆಯದು. ಈ ಬಗ್ಗೆ ಅವರೊಂದಿಗೆ ಮಾತನಾಡುತ್ತೇನೆ. ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರ ಇಲ್ಲ. ಅದು ಸಿಎಂ ಪರಮಾಧಿಕಾರ, ಆದ್ರೆ ಯಡಿಯೂರಪ್ಪ ಸುಮ್ಮನೆ ಹೈಕಮಾಂಡ್ ಕಡೆ ಬೆರಳು ತೋರಿಸುತ್ತಾರೆ. ಅವರಿಗೆ ರಾಜ್ಯದ ವಿಚಾರ ಏನು ಗೊತ್ತಿಲ್ಲ ಎಂದು ಎಂಎಲ್​ಸಿ ವಿಶ್ವನಾಥ್ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ದಾವಣಗೆರೆ ತಲುಪಿದ ಕುರುಬ ಸಮುದಾಯದ ಪಾದಯಾತ್ರೆ

ನೂತನ ಮಂತ್ರಿಯಾಗಿರುವ ಯೋಗೇಶ್ವರ್ ಮೈಸೂರು ಉಸ್ತುವಾರಿ ಸಚಿವರಾಗುತ್ತಾರೆ ಎಂಬ ಹೇಳಿಕೆಗೆ ಉಗ್ರವಾಗಿ ಪ್ರತಿಕ್ರಿಯಿಸಿದ್ದು, ಯೋಗೇಶ್ವರ್ ಮೈಸೂರಿಗೆ ಏಕೆ? ರಾಜ್ಯಕ್ಕೆ ಉಸ್ತುವಾರಿ ಆಗಲಿ. ಮೈಸೂರಿಗೆ ಬಂದು ಇಲ್ಲೊಂದು ಮೆಗಾ ಸಿಟಿ ಹಗರಣ ಮಾಡಲಿ, ಮೈಸೂರಿನ ಜನಕ್ಕೂ ಟೋಪಿ ಹಾಕಲಿ ಎಂದು ಸಿ.ಪಿ. ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.

ಮೈಸೂರು: ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಕುರುಬ ಸಮುದಾಯದ ಸ್ವಾಮೀಜಿ ಬಗ್ಗೆ ಲಘುವಾಗಿ ಮಾತನಾಡಿರುವುದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ ಸಿದ್ದರಾಮಯ್ಯನವರೇ ಎಂದು ವಿಧಾನ ಪರಿಷತ್​ ಸದಸ್ಯ ಹೆಚ್​​​ ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಂಎಲ್​ಸಿ ಹೆಚ್ ವಿಶ್ವನಾಥ್

ಇಂದು ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕುರುಬ ಸಮಾಜವನ್ನು ಎಸ್​ಟಿ ಗೆ ಸೇರಿಸುವ ವಿಚಾರದಲ್ಲಿ ಸಮುದಾಯದ ಸ್ವಾಮೀಜಿ (ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀನಿರಂಜನಾನಂದ ಪುರಿ ಶ್ರೀಗಳು) ಪಾದಯಾತ್ರೆ ನಡೆಸುತ್ತಿದ್ದಾರೆ. ಇದಕ್ಕೆ ಆರ್.ಎಸ್.ಎಸ್ ಹಣ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಕೂಡಲೇ ಸ್ವಾಮೀಜಿ ಹಾಗೂ ಸಮುದಾಯದ ಕ್ಷಮೆಯನ್ನು ಕೇಳಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸಮಾಜದಿಂದ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ. ನೀವು ಒಬ್ಬರೇ ಬುದ್ಧಿವಂತರಲ್ಲ. ನೀವು ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಮಾಜ, ಸ್ವಾಮೀಜಿಯವರ ಪಾತ್ರವೂ ಇದೆ. ಅದನ್ನು ನೀವು ಮರೆಯಬಾರದು ಮಿಸ್ಟರ್ ಸಿದ್ದರಾಮಯ್ಯ. ನೀವು ಸಮಾಜಕ್ಕಿಂತ ಬಹಳ ಚಿಕ್ಕವರು ಎಂದು ವಿಶ್ವನಾಥ್​ ಗುಡುಗಿದರು.

ಈ ಸುದ್ದಿಯನ್ನೂ ಓದಿ: ನಮ್ಮ ಮಠ ಕಿಂಗ್ ಮೇಕರ್ ಆಗುತ್ತದೆಯೇ ಹೊರತು ಕಿಂಗ್ ಆಗಲ್ಲ: ಕಾಗಿನೆಲೆ ನಿರಂಜನಾನಂದಪುರಿ ಶ್ರೀ

ಜೆಡಿಎಸ್​ನಲ್ಲಿ ಕಡೆಗಣನೆಗೆ ಒಳಗಾಗಿರುವ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್​ಗೆ ಹೋಗಿ ಏಟು ತಿನ್ನುವ ಬದಲು ಬಿಜೆಪಿಗೆ ಬಂದರೆ ಒಳ್ಳೆಯದು. ಈ ಬಗ್ಗೆ ಅವರೊಂದಿಗೆ ಮಾತನಾಡುತ್ತೇನೆ. ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ಪಾತ್ರ ಇಲ್ಲ. ಅದು ಸಿಎಂ ಪರಮಾಧಿಕಾರ, ಆದ್ರೆ ಯಡಿಯೂರಪ್ಪ ಸುಮ್ಮನೆ ಹೈಕಮಾಂಡ್ ಕಡೆ ಬೆರಳು ತೋರಿಸುತ್ತಾರೆ. ಅವರಿಗೆ ರಾಜ್ಯದ ವಿಚಾರ ಏನು ಗೊತ್ತಿಲ್ಲ ಎಂದು ಎಂಎಲ್​ಸಿ ವಿಶ್ವನಾಥ್ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ದಾವಣಗೆರೆ ತಲುಪಿದ ಕುರುಬ ಸಮುದಾಯದ ಪಾದಯಾತ್ರೆ

ನೂತನ ಮಂತ್ರಿಯಾಗಿರುವ ಯೋಗೇಶ್ವರ್ ಮೈಸೂರು ಉಸ್ತುವಾರಿ ಸಚಿವರಾಗುತ್ತಾರೆ ಎಂಬ ಹೇಳಿಕೆಗೆ ಉಗ್ರವಾಗಿ ಪ್ರತಿಕ್ರಿಯಿಸಿದ್ದು, ಯೋಗೇಶ್ವರ್ ಮೈಸೂರಿಗೆ ಏಕೆ? ರಾಜ್ಯಕ್ಕೆ ಉಸ್ತುವಾರಿ ಆಗಲಿ. ಮೈಸೂರಿಗೆ ಬಂದು ಇಲ್ಲೊಂದು ಮೆಗಾ ಸಿಟಿ ಹಗರಣ ಮಾಡಲಿ, ಮೈಸೂರಿನ ಜನಕ್ಕೂ ಟೋಪಿ ಹಾಕಲಿ ಎಂದು ಸಿ.ಪಿ. ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.

Last Updated : Jan 20, 2021, 1:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.