ETV Bharat / state

ಸಿದ್ದರಾಮಯ್ಯರಿಗೆ ಕಾಂಗ್ರೆಸ್ ಮುಳುಗಿಸುವ ಹುನ್ನಾರವಿದೆ: ಹೆಚ್​‌.ವಿಶ್ವನಾಥ್

ಸಿದ್ದರಾಮಯ್ಯ ಅವರ ಹೇಳಿಕೆಗಳಲ್ಲಿ ಕಾಂಗ್ರೆಸ್ ಮುಗಿಸುವ ಹುನ್ನಾರ ಇದೆ. ಇದನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ಪರಿಗಣಿಸಬೇಕು ಎಂದು ಹೆಚ್​.ವಿಶ್ವನಾಥ್​ ಎಚ್ಚರಿಕೆ ನೀಡಿದ್ದಾರೆ.

author img

By

Published : Dec 24, 2020, 12:04 PM IST

Updated : Dec 24, 2020, 12:57 PM IST

siddaramaiah
ಹೆಚ್​‌.ವಿಶ್ವನಾಥ್

ಮೈಸೂರು: ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸುತ್ತಿದ್ದರೆ ಅವರಿಗೆ ಕಾಂಗ್ರೆಸ್ ಪಕ್ಷವನ್ನು ಮುಳುಗಿಸುವ ಹುನ್ನಾರವಿದೆ ಎನಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಂದು ಹೇಳಿದರು.

ವಿಧಾನ ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಕಡೆ ಬಲಗೈ ದಲಿತರು ಮತ ಹಾಕಿಲ್ಲ ಎಂದು ಹೇಳಿ, ಇದರಿಂದ ಅವರ ಮತ ಬ್ಯಾಂಕ್ ಹಾಳಾಗಿದೆ‌. ನಿಮಗೆ ನಾನು(ಸಿದ್ದರಾಮಯ್ಯ) ಸಿಎಂ ಆದ ಮೇಲೆ ಬೇರೆ ಯಾರು ಸಿಎಂ ಆಗಬಾರದು ಅನ್ನೋ ಮನೋಭಾವವಿದೆ. ಇದನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

140 ಸ್ಥಾನ ಗೆಲ್ಲುವ ಕಾಂಗ್ರೆಸ್‌ ಪಕ್ಷ 20 ಸ್ಥಾನ ಗೆಲ್ಲುವುದಿಲ್ಲವೇ ಅನ್ನೋ ಚರ್ಚೆ ಆರಂಭವಾಗಿದೆ. ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ದುರಂಹಕಾರದ ಮಾತನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಕೊಡಗಿನವರು ಹಸು ಮಾಂಸ ತಿನ್ನುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೊಡವರು ಹಸುವನ್ನು ಪೂಜೆ ಮಾಡುತ್ತಾರೆ. ಇದು ಕೊಡವರಿಗೆ ಮಾಡಿದ ಅವಮಾನ. ನಿಮ್ಮ ಹೇಳಿಕೆಗೆ ನೀವೇ ಕೊಡವರ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ನೈಟ್ ಕರ್ಪ್ಯೂ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರದ ಪರವಾಗಿ ನಾನು ನಿರ್ಧಾರ ಸರಿಯಿದೆ ಅಂತಾ ಹೇಳಬಹುದು. ಆದರೆ ನಾಡಿನ ಜನರು ಇದನ್ನು ಜೋಕ್ ರೀತಿ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಪುನರ್ ವಿಮರ್ಶೆ ಮಾಡಬೇಕಿದೆ ಎಂದರು.

ಹೊಸವರ್ಷ ಆಚರಣೆಗೆ ಜನ ಸೇರುತ್ತಾರೆ. ಡಿಸೆಂಬರ್ 30-31ಕ್ಕೆ ನೈಟ್ ಕರ್ಪ್ಯೂ ಮಾಡಿ‌ ಈಗಲೇ ಏಕೆ?, ಈ ನಿಯಮದಿಂದ ಯಾವುದೇ ಪ್ರಯೋಜನವಿಲ್ಲ. ಈ ಬಗ್ಗೆ ಪುನರ್ ವಿಮರ್ಶೆ ಮಾಡಿದರೆ ಒಳ್ಳೆಯದು ಎಂದರು.

ಸಚಿವ ಸುರೇಶ್ ಕುಮಾರ್ ಅವರಿಗೆ ಮಾತು ವಾಪಸ್ ಪಡೆಯುವ ಖಾಯಿಲೆ ಇದ್ದಂತೆ ಇದೆ. ಆದೇಶ ಮಾಡುತ್ತಾರೆ, ವಾಪಸ್ ಪಡೆಯುತ್ತಾರೆ. ಸದ್ಯ ಕೊರೊನಾ ಎರಡನೇ ಅಲೆ ಜೋರಾಗಿದೆ. ಇಂತಹ ಸಮಯದಲ್ಲಿ ಜೀವದ ಜೊತೆ ಚೆಲ್ಲಾಟ ಸರಿಯಲ್ಲ ಎಂದು ವಿಶ್ವನಾಥ್‌ ವಾಗ್ದಾಳಿ ನಡೆಸಿದರು.

ಓದಿ: ನಟಿ ರಾಗಿಣಿಗೆ ಆರೋಗ್ಯ ಸಮಸ್ಯೆ...ಜೈಲಿನಿಂದ ಖಾಸಗಿ ಆಸ್ಪತ್ರೆಗೆ ದಾಖಲು

ಮೈಸೂರು: ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಹೇಳಿಕೆಗಳನ್ನು ಗಮನಿಸುತ್ತಿದ್ದರೆ ಅವರಿಗೆ ಕಾಂಗ್ರೆಸ್ ಪಕ್ಷವನ್ನು ಮುಳುಗಿಸುವ ಹುನ್ನಾರವಿದೆ ಎನಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಎಂದು ಹೇಳಿದರು.

ವಿಧಾನ ಪರಿಷತ್​ ಸದಸ್ಯ ಹೆಚ್​.ವಿಶ್ವನಾಥ್​

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ಕಡೆ ಬಲಗೈ ದಲಿತರು ಮತ ಹಾಕಿಲ್ಲ ಎಂದು ಹೇಳಿ, ಇದರಿಂದ ಅವರ ಮತ ಬ್ಯಾಂಕ್ ಹಾಳಾಗಿದೆ‌. ನಿಮಗೆ ನಾನು(ಸಿದ್ದರಾಮಯ್ಯ) ಸಿಎಂ ಆದ ಮೇಲೆ ಬೇರೆ ಯಾರು ಸಿಎಂ ಆಗಬಾರದು ಅನ್ನೋ ಮನೋಭಾವವಿದೆ. ಇದನ್ನು ಕಾಂಗ್ರೆಸ್ ನಾಯಕರು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

140 ಸ್ಥಾನ ಗೆಲ್ಲುವ ಕಾಂಗ್ರೆಸ್‌ ಪಕ್ಷ 20 ಸ್ಥಾನ ಗೆಲ್ಲುವುದಿಲ್ಲವೇ ಅನ್ನೋ ಚರ್ಚೆ ಆರಂಭವಾಗಿದೆ. ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ದುರಂಹಕಾರದ ಮಾತನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಕೊಡಗಿನವರು ಹಸು ಮಾಂಸ ತಿನ್ನುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೊಡವರು ಹಸುವನ್ನು ಪೂಜೆ ಮಾಡುತ್ತಾರೆ. ಇದು ಕೊಡವರಿಗೆ ಮಾಡಿದ ಅವಮಾನ. ನಿಮ್ಮ ಹೇಳಿಕೆಗೆ ನೀವೇ ಕೊಡವರ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ನೈಟ್ ಕರ್ಪ್ಯೂ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರದ ಪರವಾಗಿ ನಾನು ನಿರ್ಧಾರ ಸರಿಯಿದೆ ಅಂತಾ ಹೇಳಬಹುದು. ಆದರೆ ನಾಡಿನ ಜನರು ಇದನ್ನು ಜೋಕ್ ರೀತಿ ತೆಗೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಪುನರ್ ವಿಮರ್ಶೆ ಮಾಡಬೇಕಿದೆ ಎಂದರು.

ಹೊಸವರ್ಷ ಆಚರಣೆಗೆ ಜನ ಸೇರುತ್ತಾರೆ. ಡಿಸೆಂಬರ್ 30-31ಕ್ಕೆ ನೈಟ್ ಕರ್ಪ್ಯೂ ಮಾಡಿ‌ ಈಗಲೇ ಏಕೆ?, ಈ ನಿಯಮದಿಂದ ಯಾವುದೇ ಪ್ರಯೋಜನವಿಲ್ಲ. ಈ ಬಗ್ಗೆ ಪುನರ್ ವಿಮರ್ಶೆ ಮಾಡಿದರೆ ಒಳ್ಳೆಯದು ಎಂದರು.

ಸಚಿವ ಸುರೇಶ್ ಕುಮಾರ್ ಅವರಿಗೆ ಮಾತು ವಾಪಸ್ ಪಡೆಯುವ ಖಾಯಿಲೆ ಇದ್ದಂತೆ ಇದೆ. ಆದೇಶ ಮಾಡುತ್ತಾರೆ, ವಾಪಸ್ ಪಡೆಯುತ್ತಾರೆ. ಸದ್ಯ ಕೊರೊನಾ ಎರಡನೇ ಅಲೆ ಜೋರಾಗಿದೆ. ಇಂತಹ ಸಮಯದಲ್ಲಿ ಜೀವದ ಜೊತೆ ಚೆಲ್ಲಾಟ ಸರಿಯಲ್ಲ ಎಂದು ವಿಶ್ವನಾಥ್‌ ವಾಗ್ದಾಳಿ ನಡೆಸಿದರು.

ಓದಿ: ನಟಿ ರಾಗಿಣಿಗೆ ಆರೋಗ್ಯ ಸಮಸ್ಯೆ...ಜೈಲಿನಿಂದ ಖಾಸಗಿ ಆಸ್ಪತ್ರೆಗೆ ದಾಖಲು

Last Updated : Dec 24, 2020, 12:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.