ETV Bharat / state

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಹೆಡ್ ಕಾನ್ಸ್​ಟೇಬಲ್​ ಅರೆಸ್ಟ್

author img

By

Published : Feb 26, 2022, 9:33 AM IST

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಹೆಡ್‌ ಕಾನ್ಸ್​ಟೇಬಲ್​ನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹೆಡ್ ಕಾನ್ಸ್​ಟೇಬಲ್​ ಅರೆಸ್ಟ್
ಹೆಡ್ ಕಾನ್ಸ್​ಟೇಬಲ್​ ಅರೆಸ್ಟ್

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಆರೋಪಿ ಹೆಡ್‌ ಕಾನ್ಸ್​ಟೇಬಲ್​ನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಕೃಷ್ಣ ಬಂಧಿತ ಆರೋಪಿ.

ಈತ ಮಹಿಳೆಯೋರ್ವರನ್ನ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಮಧ್ಯೆ ಸೊಸೈಟಿಯಲ್ಲಿ ಮಹಿಳೆಯ ಹೆಸರಿನಲ್ಲಿ 5 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ. ಅಷ್ಟೇ ಅಲ್ಲದೆ, ನ್ಯಾಯ ಕೇಳಲು ಬಂದ ಮಹಿಳೆಗೆ ಕಾನ್ಸ್​ಟೇಬಲ್ ಹಾಗೂ ಆತನ ಮಗ ಹಿಗ್ಗಾಮುಗ್ಗಾ ಥಳಿಸಿ ಪರಾರಿಯಾಗಿದ್ದರು ಎಂದು ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್‌ ಕಾನ್ಸ್​ಟೇಬಲ್ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಇದೀಗ ಸರ್ಕಲ್ ಇನ್ಸ್​ಪೆಕ್ಟರ್ ಲಕ್ಷ್ಮೀಕಾಂತ್​ ತಳವಾರ್ ಆರೋಪಿಯನ್ನ ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚಿಸಿದ ಆರೋಪಿ ಹೆಡ್‌ ಕಾನ್ಸ್​ಟೇಬಲ್​ನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್​ ಕಾನ್ಸ್​ಟೇಬಲ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಕೃಷ್ಣ ಬಂಧಿತ ಆರೋಪಿ.

ಈತ ಮಹಿಳೆಯೋರ್ವರನ್ನ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಮಧ್ಯೆ ಸೊಸೈಟಿಯಲ್ಲಿ ಮಹಿಳೆಯ ಹೆಸರಿನಲ್ಲಿ 5 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ. ಅಷ್ಟೇ ಅಲ್ಲದೆ, ನ್ಯಾಯ ಕೇಳಲು ಬಂದ ಮಹಿಳೆಗೆ ಕಾನ್ಸ್​ಟೇಬಲ್ ಹಾಗೂ ಆತನ ಮಗ ಹಿಗ್ಗಾಮುಗ್ಗಾ ಥಳಿಸಿ ಪರಾರಿಯಾಗಿದ್ದರು ಎಂದು ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್‌ ಕಾನ್ಸ್​ಟೇಬಲ್ ವಿರುದ್ಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಇದೀಗ ಸರ್ಕಲ್ ಇನ್ಸ್​ಪೆಕ್ಟರ್ ಲಕ್ಷ್ಮೀಕಾಂತ್​ ತಳವಾರ್ ಆರೋಪಿಯನ್ನ ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.