ETV Bharat / state

ಕಾಲೇಜು ಕ್ಯಾಂಪಸ್‌ನಲ್ಲಿಯೂ ಸಹ ಹೆಲ್ಮೆಟ್ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ

author img

By

Published : Jul 25, 2023, 8:47 PM IST

ಕಾಲೇಜು ಆಡಳಿತ ವರ್ಗವು ಕಡ್ಡಾಯ ಹೆಲ್ಮೆಟ್ ನೀತಿ ಅನುಸರಿಸುವಂತೆ ನಿಯಮಾವಳಿಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾಲೇಜು ಕ್ಯಾಂಪಸ್‌ನಲ್ಲಿಯೂ ಸಹ ಹೆಲ್ಮೆಟ್ ಕಡ್ಡಾಯ
ಕಾಲೇಜು ಕ್ಯಾಂಪಸ್‌ನಲ್ಲಿಯೂ ಸಹ ಹೆಲ್ಮೆಟ್ ಕಡ್ಡಾಯ

ಮೈಸೂರು : ಜಿಲ್ಲೆಯಲ್ಲಿನ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಾಲೇಜು ಕ್ಯಾಂಪಸ್‌ಗಳಲ್ಲಿ ಕೂಡ ದ್ವಿಚಕ್ರ ವಾಹನ ಬಳಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದಲ್ಲಿ ಕಾಲೇಜಿನ ಆವರಣದೊಳಗೆ ಪ್ರವೇಶ ನಿರ್ಬಂಧಿಸಿ ಆಡಳಿತ ವರ್ಗವು ಕಾನೂನು ಬದ್ದವಾಗಿ ಕ್ರಮ ಕೈಗೊಂಡು ಕಡ್ಡಾಯ ಹೆಲ್ಮೆಟ್ ನೀತಿಯನ್ನು ಅನುಸರಿವಂತೆ ನಿಯಮಾವಳಿಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಸೂಚಿಸಿದರು.

ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಕಾಲೇಜುಗಳಲ್ಲಿ ಸಂಚಾರಿ ನಿಯಮಗಳನ್ನು ಅನುಸರಿಸದೇ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿರುವುದು ಹೆಚ್ಚುತ್ತಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ವಾಹನ ಚಲಿಸುವ ಪ್ರತಿಯೊಬ್ಬ ಸವಾರರು ಕೂಡ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಧರಿಸುವಂತೆ ಹಾಗೂ ಪ್ರತಿಯೊಬ್ಬ ವಾಹನ ಸವಾರರು ಕೂಡ ಎರಡು ಹೆಲ್ಮೆಟ್‌ಗಳನ್ನು ತಮ್ಮ ಜೊತೆ ಇರಿಸಿಕೊಳ್ಳುವಂತೆ ಸೂಚನೆಯನ್ನು ನೀಡಬೇಕು ಎಂದರು.

ರಾತ್ರಿ ಸಂಚರಿಸುವ ವಾಹನಗಳು ನಿಯಮ ಪಾಲಿನೆ : ಇತ್ತೀಚೆಗೆ ಟಿ. ನರಸೀಪುರದ ಬಳಿ ನಡೆದ ಭೀಕರ ರಸ್ತೆ ಅಪಘಾತದ ವಿಚಾರವಾಗಿ ಮಾತನಾಡಿ ರಾಜೇಂದ್ರ ಅವರು, ಸಂಬಂಧಪಟ್ಟವರ ಮೇಲೆ ಕೇಸ್ ದಾಖಲಿಸಿ ಸರಿಯಾದ ಕ್ರಮ ಕೈಗೊಳ್ಳಬೇಕು. ರಸ್ತೆ ಅಪಘಾತಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಬೇಕೆಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನಂದಿನಿ ಅವರಿಗೆ ತಿಳಿಸಿದರು. ಅಲ್ಲದೇ ಟೂರ್ ಟ್ಯಾಕ್ಸಿ ಚಾಲಕರು, ಲಾರಿ ಚಾಲಕರು ಮತ್ತು ಲಾರಿ ಮಾಲೀಕರ ಸಂಘದ ಅಧ್ಯಕ್ಷರುಗಳನ್ನು ಕರೆಸಿ ಸಭೆ ನಡೆಸಿ ರಾತ್ರಿ ವೇಳೆಯಲ್ಲಿ ಸಂಚರಿಸುವ ವಾಹನಗಳು ನಿಯಮಗಳನ್ನು ಪಾಲಿಸುವಂತೆ ಸೂಚಿಸಬೇಕು. ರಾತ್ರಿ ವೇಳೆಯಲ್ಲಿ ಚಲಿಸುವ ವಾಹನಗಳಲ್ಲಿ ತಲಾ ಇಬ್ಬರು ಡ್ರೈವರ್‌ಗಳನ್ನು ಒಳಗೊಂಡಂತೆ ಕಾರ್ಯನಿರ್ವಹಿಸಲು ಸೂಚನೆ ಕೊಟ್ಟರು.

ಇದನ್ನೂ ಓದಿ : ಮೈಸೂರಿನ ಲಲಿತ್ ಮಹಲ್ ಪುನಶ್ಚೇತನ ಮಾಡಲು ಚಿಂತನೆ: ಸಚಿವ ಎಚ್ ಕೆ ಪಾಟೀಲ್

ನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ : ಇದೇ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಮಳೆಯಿಂದಾಗಿ ರಸ್ತೆಗಳಲ್ಲಿ ಹೆಚ್ಚಿನ ಅಪಘಾತಗಳು ಉಂಟಾಗುವುದರಿಂದ ರಸ್ತೆಗಳಲ್ಲಿನ ರಸ್ತೆ ಉಬ್ಬುಗಳ ನಿರ್ವಹಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ರಸ್ತೆಗಳಲ್ಲಿ ಸುರಕ್ಷತಾ ನಿಯಮಾವಳಿಗಳನ್ನು ಅಳವಡಿಸಬೇಕು. ಕೆಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ವತಿಯಿಂದ ಆದಷ್ಟು ಬೇಗ ಟೆಂಡರ್‌ಗಳನ್ನು ಕರೆದು ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ನಗರಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಗಳು ನಡೆಯುತ್ತಿರುವ ರಸ್ತೆಗಳಲ್ಲಿ ಮಲ್ಟಿಪಲ್ ಸೈನ್ ಬೋರ್ಡ್​ಗಳನ್ನು ಅಳವಡಿಸುವಂತೆ ಮತ್ತು ಕಾಮಗಾರಿ ಸಂದರ್ಭದಲ್ಲಿ ಆಗುವ ಅಪಾಯಕಾರಿ ಘಟನೆಗಳ ಕುರಿತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಮೈಸೂರಿನಲ್ಲಿ ಆಗಸ್ಟ್ 1ರಿಂದ 4ರ ವರೆಗೆ ಸೇನಾ ರ‍್ಯಾಲಿಗೆ ಸಕಲ ಸಿದ್ದತೆ; ಜಿಲ್ಲಾಧಿಕಾರಿ

ಮೈಸೂರು : ಜಿಲ್ಲೆಯಲ್ಲಿನ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಾಲೇಜು ಕ್ಯಾಂಪಸ್‌ಗಳಲ್ಲಿ ಕೂಡ ದ್ವಿಚಕ್ರ ವಾಹನ ಬಳಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದಲ್ಲಿ ಕಾಲೇಜಿನ ಆವರಣದೊಳಗೆ ಪ್ರವೇಶ ನಿರ್ಬಂಧಿಸಿ ಆಡಳಿತ ವರ್ಗವು ಕಾನೂನು ಬದ್ದವಾಗಿ ಕ್ರಮ ಕೈಗೊಂಡು ಕಡ್ಡಾಯ ಹೆಲ್ಮೆಟ್ ನೀತಿಯನ್ನು ಅನುಸರಿವಂತೆ ನಿಯಮಾವಳಿಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಸೂಚಿಸಿದರು.

ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಕಾಲೇಜುಗಳಲ್ಲಿ ಸಂಚಾರಿ ನಿಯಮಗಳನ್ನು ಅನುಸರಿಸದೇ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿರುವುದು ಹೆಚ್ಚುತ್ತಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ವಾಹನ ಚಲಿಸುವ ಪ್ರತಿಯೊಬ್ಬ ಸವಾರರು ಕೂಡ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಧರಿಸುವಂತೆ ಹಾಗೂ ಪ್ರತಿಯೊಬ್ಬ ವಾಹನ ಸವಾರರು ಕೂಡ ಎರಡು ಹೆಲ್ಮೆಟ್‌ಗಳನ್ನು ತಮ್ಮ ಜೊತೆ ಇರಿಸಿಕೊಳ್ಳುವಂತೆ ಸೂಚನೆಯನ್ನು ನೀಡಬೇಕು ಎಂದರು.

ರಾತ್ರಿ ಸಂಚರಿಸುವ ವಾಹನಗಳು ನಿಯಮ ಪಾಲಿನೆ : ಇತ್ತೀಚೆಗೆ ಟಿ. ನರಸೀಪುರದ ಬಳಿ ನಡೆದ ಭೀಕರ ರಸ್ತೆ ಅಪಘಾತದ ವಿಚಾರವಾಗಿ ಮಾತನಾಡಿ ರಾಜೇಂದ್ರ ಅವರು, ಸಂಬಂಧಪಟ್ಟವರ ಮೇಲೆ ಕೇಸ್ ದಾಖಲಿಸಿ ಸರಿಯಾದ ಕ್ರಮ ಕೈಗೊಳ್ಳಬೇಕು. ರಸ್ತೆ ಅಪಘಾತಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಬೇಕೆಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನಂದಿನಿ ಅವರಿಗೆ ತಿಳಿಸಿದರು. ಅಲ್ಲದೇ ಟೂರ್ ಟ್ಯಾಕ್ಸಿ ಚಾಲಕರು, ಲಾರಿ ಚಾಲಕರು ಮತ್ತು ಲಾರಿ ಮಾಲೀಕರ ಸಂಘದ ಅಧ್ಯಕ್ಷರುಗಳನ್ನು ಕರೆಸಿ ಸಭೆ ನಡೆಸಿ ರಾತ್ರಿ ವೇಳೆಯಲ್ಲಿ ಸಂಚರಿಸುವ ವಾಹನಗಳು ನಿಯಮಗಳನ್ನು ಪಾಲಿಸುವಂತೆ ಸೂಚಿಸಬೇಕು. ರಾತ್ರಿ ವೇಳೆಯಲ್ಲಿ ಚಲಿಸುವ ವಾಹನಗಳಲ್ಲಿ ತಲಾ ಇಬ್ಬರು ಡ್ರೈವರ್‌ಗಳನ್ನು ಒಳಗೊಂಡಂತೆ ಕಾರ್ಯನಿರ್ವಹಿಸಲು ಸೂಚನೆ ಕೊಟ್ಟರು.

ಇದನ್ನೂ ಓದಿ : ಮೈಸೂರಿನ ಲಲಿತ್ ಮಹಲ್ ಪುನಶ್ಚೇತನ ಮಾಡಲು ಚಿಂತನೆ: ಸಚಿವ ಎಚ್ ಕೆ ಪಾಟೀಲ್

ನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ : ಇದೇ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಮಳೆಯಿಂದಾಗಿ ರಸ್ತೆಗಳಲ್ಲಿ ಹೆಚ್ಚಿನ ಅಪಘಾತಗಳು ಉಂಟಾಗುವುದರಿಂದ ರಸ್ತೆಗಳಲ್ಲಿನ ರಸ್ತೆ ಉಬ್ಬುಗಳ ನಿರ್ವಹಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ರಸ್ತೆಗಳಲ್ಲಿ ಸುರಕ್ಷತಾ ನಿಯಮಾವಳಿಗಳನ್ನು ಅಳವಡಿಸಬೇಕು. ಕೆಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ವತಿಯಿಂದ ಆದಷ್ಟು ಬೇಗ ಟೆಂಡರ್‌ಗಳನ್ನು ಕರೆದು ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ನಗರಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಗಳು ನಡೆಯುತ್ತಿರುವ ರಸ್ತೆಗಳಲ್ಲಿ ಮಲ್ಟಿಪಲ್ ಸೈನ್ ಬೋರ್ಡ್​ಗಳನ್ನು ಅಳವಡಿಸುವಂತೆ ಮತ್ತು ಕಾಮಗಾರಿ ಸಂದರ್ಭದಲ್ಲಿ ಆಗುವ ಅಪಾಯಕಾರಿ ಘಟನೆಗಳ ಕುರಿತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಮೈಸೂರಿನಲ್ಲಿ ಆಗಸ್ಟ್ 1ರಿಂದ 4ರ ವರೆಗೆ ಸೇನಾ ರ‍್ಯಾಲಿಗೆ ಸಕಲ ಸಿದ್ದತೆ; ಜಿಲ್ಲಾಧಿಕಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.