ETV Bharat / state

ಉಗ್ರರ ಕರಿನೆರಳು... ಮೈಸೂರಲ್ಲೂ ಹೈ ಅಲರ್ಟ್!

370 ನೇ ವಿಧಿ ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಉಗ್ರರು ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸುವ ಸಾಧ್ಯತೆಯ ಹಿನ್ನೆಲೆ ಪೊಲೀಸರು ವ್ಯಾಪಕ ತಪಾಸಣೆ ಹಾಗೂ ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ

author img

By

Published : Aug 17, 2019, 1:05 PM IST

ಮೈಸೂರುನಲ್ಲಿ ಹೈ ಅಲರ್ಟ್

ಮೈಸೂರು: ‌ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ನಗರದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.

370 ನೇ ವಿಧಿ ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಉಗ್ರರು ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸುವ ಸಾಧ್ಯತೆಯ ಹಿನ್ನೆಲೆ ಪೋಲಿಸರು ವ್ಯಾಪಕ ತಪಾಸಣೆ ಹಾಗೂ ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.

ಮೈಸೂರಲ್ಲಿ ಹೈ ಅಲರ್ಟ್

ನಗರದ ಅರಮನೆ, ಚಾಮರಾಜೇಂದ್ರ ಮೃಗಾಲಯ, ಚಾಮುಂಡಿ ಬೆಟ್ಟ, ಸೆಂಟ್ ಫಿಲೋಮಿನಾ ಚರ್ಚ್, ಸಿಎಫ್​ಟಿಆರ್​ಐ, ಡಿಎಫ್​ಆರ್​ಎಲ್, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳು‌ ಸೇರಿದಂತೆ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಿಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಶಸ್ತ್ರಾಸ್ತ್ರ ಮೀಸಲು ಪಡೆಯನ್ನು ಸಹ ನೇಮಿಸಲಾಗಿದೆ.

ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. ಇದೇ ರೀತಿ ಕಟ್ಟೆಚ್ಚರವನ್ನು ಮುಂದುವರೆಸಲಾಗುವುದು ಎಂದು ಎಸಿಪಿ ಮುತ್ತುರಾಜು ತಿಳಿಸಿದರು.

ಮೈಸೂರು: ‌ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ನಗರದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.

370 ನೇ ವಿಧಿ ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಉಗ್ರರು ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸುವ ಸಾಧ್ಯತೆಯ ಹಿನ್ನೆಲೆ ಪೋಲಿಸರು ವ್ಯಾಪಕ ತಪಾಸಣೆ ಹಾಗೂ ಬಿಗಿ ಬಂದೋಬಸ್ತ್ ನಿಯೋಜಿಸಿದ್ದಾರೆ.

ಮೈಸೂರಲ್ಲಿ ಹೈ ಅಲರ್ಟ್

ನಗರದ ಅರಮನೆ, ಚಾಮರಾಜೇಂದ್ರ ಮೃಗಾಲಯ, ಚಾಮುಂಡಿ ಬೆಟ್ಟ, ಸೆಂಟ್ ಫಿಲೋಮಿನಾ ಚರ್ಚ್, ಸಿಎಫ್​ಟಿಆರ್​ಐ, ಡಿಎಫ್​ಆರ್​ಎಲ್, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳು‌ ಸೇರಿದಂತೆ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಿಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಶಸ್ತ್ರಾಸ್ತ್ರ ಮೀಸಲು ಪಡೆಯನ್ನು ಸಹ ನೇಮಿಸಲಾಗಿದೆ.

ತಪಾಸಣೆ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. ಇದೇ ರೀತಿ ಕಟ್ಟೆಚ್ಚರವನ್ನು ಮುಂದುವರೆಸಲಾಗುವುದು ಎಂದು ಎಸಿಪಿ ಮುತ್ತುರಾಜು ತಿಳಿಸಿದರು.

Intro:ಮೈಸೂರು: ‌ಜಮ್ಮು ಕಾಶ್ಮೀರದ ವಿಶೇಷ ಅಧಿಕಾರವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಉಗ್ರ ದಾಳಿ ನಡೆಯುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.


Body:ಜಮ್ಮು ಮತ್ತು ಕಾಶ್ಮೀರದಲ್ಲಿ ೩೭೦ ರ ಅನ್ವಯ ಇದ್ದ ವಿಶೇಷ ಅಧಿಕಾರವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಉಗ್ರರ ದಾಳಿಕೋರರು ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸುವ ಸಾಧ್ಯತೆಯ ಹಿನ್ನಲೆಯಲ್ಲಿ ಕೇಂದ್ರ ಗುಪ್ತವರ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ನಗರ ಪೋಲಿಸರು ವ್ಯಾಪಕ ತಪಾಸಣೆ ಹಾಗೂ ಬಂದೋಬಸ್ತ್ ಏರ್ಪಡಿಸಿದ್ದಾರೆ.
ನಗರದ ಅರಮನೆ, ಚಾಮರಾಜೇಂದ್ರ ಮೃಗಾಲಯ ಚಾಮುಂಡಿ ಬೆಟ್ಟ, ಸೆಂಟ್ ಪೀಲೋಮಿನಾ ಚರ್ಚ್ , ಸಿ.ಎಫ್.ಟಿ.ಆರ್.ಐ, ಡಿ.ಎಫ್.ಆರ್.ಎಲ್, ಬಸ್ ನಿಲ್ದಾಣ, ವಿಮಾನ ನಿಲ್ದಾಣಗಳು‌ ಸೇರಿದಂತೆ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೋಲಿಸ್ ಬಂದೋಬಸ್ತ್ ಹಾಕಲಾಗಿದ್ದು ತೀವ್ರ ತಪಾಸಣೆಯನ್ನು ನಡೆಸಲಾಗುತ್ತಿದೆ. ನಗರದ ಈ ಎಲ್ಲಾ ಪ್ರದೇಶಗಳಲ್ಲೂ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಶಸ್ತ್ರಾಸ್ತ್ರ ಮೀಸಲು ಪಡೆಯ ದಸ್ತನ್ನು ಹೆಚ್ಚಿಸಲಾಗಿದೆ. ತಪಾಸಣೆ ವೇಳೆ ಯಾವುದೇ ಅನುಮಾನಸ್ಪದ ವಸ್ತುಗಳು ಸಿಕ್ಕಿಲ್ಲ ಇದೇರೀತಿ ಕಟ್ಟೆಚ್ಚರವನ್ನು ಮುಂದುವರೆಸಲಾಗುವುದು ಎಂದು ಎಸಿಪಿ ಮುತ್ತುರಾಜು ತಿಳಿಸಿದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.