ETV Bharat / state

ಪಾಸಿಟಿವ್ ಬಂದವರು ಮೊಬೈಲ್​ ಸ್ವಿಚ್ ಆಫ್ ಮಾಡಿದರೆ ಎಫ್​ಐಆರ್: ಸಚಿವ ಸೋಮಶೇಖರ್

author img

By

Published : May 6, 2021, 2:35 PM IST

ಕೋವಿಡ್​ ಪರೀಕ್ಷೆಗೆ ಬಂದ ವ್ಯಕ್ತಿಗಳು ಪರೀಕ್ಷಾ ಸಮಯದಲ್ಲಿ ಮೊಬೈಲ್ ನಂಬರ್ ನೀಡಿದ್ದು, ಪರೀಕ್ಷಾ ವರದಿ ಪಾಸಿಟಿವ್ ಬಂದ ತಕ್ಷಣ ಶೇ. 10 ಮಂದಿ ತಮ್ಮ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸೋಂಕಿತರನ್ನು ಹುಡುಕುವುದು ಕಷ್ಟವಾಗಿದ್ದು, ಅವರ ವಿರುದ್ಧ ಎಫ್​ಐಆರ್ (FIR) ಹಾಕಿ ಎಂದು ಪೊಲೀಸರಿಗೆ ಹೇಳಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

Minister ST Somashekar
ಸಚಿವ ಸೋಮಶೇಖರ್

ಮೈಸೂರು: ಕೋವಿಡ್ ಪರೀಕ್ಷೆಗೆ ಒಳಗಾದವರು ಪಾಸಿಟಿವ್ ವರದಿ ಬಂದ ತಕ್ಷಣ ತಮ್ಮ ಮೊಬೈಲ್ ಫೋನ್​ ಸ್ವಿಚ್ ಮಾಡಿಕೊಳ್ಳುತ್ತಿದ್ದು, ಇದರಿಂದ ಸೋಂಕಿತರನ್ನು ಹುಡುಕುವುದು ಕಷ್ಟವಾಗಿದೆ. ಆದ್ದರಿಂದ ಇನ್ನು ಮುಂದೆ ಈ ರೀತಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡರೆ ಎಫ್​ಐಆರ್​ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಸಚಿವ ಎಸ್.ಟಿ.ಸೋಮಶೇಖರ್

ಇಂದು ಕೆಆರ್ ಕ್ಷೇತ್ರದ ಕೋವಿಡ್ ನಿಯಂತ್ರಣದ ಕುರಿತು ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಹೆಚ್ಚು ಹೆಚ್ಚು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಈ ಮಧ್ಯೆ ಜನರು ಸಹ ಕೋವಿಡ್ ಪರೀಕ್ಷೆಗೆ ಸ್ವಯಂ ಪ್ರೇರಿತರಾಗಿ ಹಾಜರಾಗುತ್ತಿಲ್ಲ. ಅಲ್ಲದೇ ಪರೀಕ್ಷೆಗೆ ಬಂದ ವ್ಯಕ್ತಿಗಳು ಪರೀಕ್ಷಾ ಸಮಯದಲ್ಲಿ ಮೊಬೈಲ್ ನಂಬರ್ ನೀಡಿದ್ದು, ಪರೀಕ್ಷಾ ವರದಿ ಪಾಸಿಟಿವ್ ಬಂದ ತಕ್ಷಣ ಶೇ. 10 ಮಂದಿ ತಮ್ಮ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸೋಂಕಿತರನ್ನು ಹುಡುಕುವುದು ಕಷ್ಟವಾಗಿದ್ದು, ಪೊಲೀಸರಿಗೆ ಇವರ ಮೊಬೈಲ್‌ ಲೋಕೇಷನ್ ಹುಡುಕಿ, ಅರಿವು ಮೂಡಿಸಲು ತಿಳಿಸಲಾಗಿದೆ. ಅದಕ್ಕೆ ಒಪ್ಪದೆ ಇದ್ದಾಗ ಅವರ ವಿರುದ್ಧ ಎಫ್​ಐಆರ್ (FIR) ಹಾಕಿ ಎಂದು ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ಜನತಾ ಕರ್ಫ್ಯೂ ಶೇ. 100ರಷ್ಟು ಯಶಸ್ವಿಯಾಗಿದೆ. ಆದರೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ದಿನ‌ನಿತ್ಯದ ಪದಾರ್ಥಗಳನ್ನು ತರಲು ಜನ ಮುಗಿಬೀಳುತ್ತಿದ್ದು, ಇದ್ದರಿಂದ ಸೋಂಕು ಹೆಚ್ಚಾಗುತ್ತಿದೆ. ಜನತಾ ಕರ್ಫ್ಯೂ ನಂತರ‌ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಮೈಸೂರಿನ ಚಿತ್ರಣವನ್ನು ಸಿಎಂಗೆ ತಿಳಿಸುತ್ತೇನೆ. ಮುಂದಿನ ತೀರ್ಮಾನ ಸಿಎಂ ಮಾಡುತ್ತಾರೆ ಎಂದರು.

ಓದಿ: ಸಿಎಂ ತವರು ಜಿಲ್ಲೆಯಲ್ಲೇ ಆಕ್ಸಿಜನ್​, ಬೆಡ್​ಗಳ ಕೊರತೆ: ಕೇಳೋರ್ಯಾರು ರೋಗಿಗಳ ಗೋಳು?

ಮೈಸೂರು: ಕೋವಿಡ್ ಪರೀಕ್ಷೆಗೆ ಒಳಗಾದವರು ಪಾಸಿಟಿವ್ ವರದಿ ಬಂದ ತಕ್ಷಣ ತಮ್ಮ ಮೊಬೈಲ್ ಫೋನ್​ ಸ್ವಿಚ್ ಮಾಡಿಕೊಳ್ಳುತ್ತಿದ್ದು, ಇದರಿಂದ ಸೋಂಕಿತರನ್ನು ಹುಡುಕುವುದು ಕಷ್ಟವಾಗಿದೆ. ಆದ್ದರಿಂದ ಇನ್ನು ಮುಂದೆ ಈ ರೀತಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡರೆ ಎಫ್​ಐಆರ್​ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಸಚಿವ ಎಸ್.ಟಿ.ಸೋಮಶೇಖರ್

ಇಂದು ಕೆಆರ್ ಕ್ಷೇತ್ರದ ಕೋವಿಡ್ ನಿಯಂತ್ರಣದ ಕುರಿತು ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಹೆಚ್ಚು ಹೆಚ್ಚು ಪರೀಕ್ಷೆ ಮಾಡಲು ನಿರ್ಧರಿಸಲಾಗಿದೆ. ಈ ಮಧ್ಯೆ ಜನರು ಸಹ ಕೋವಿಡ್ ಪರೀಕ್ಷೆಗೆ ಸ್ವಯಂ ಪ್ರೇರಿತರಾಗಿ ಹಾಜರಾಗುತ್ತಿಲ್ಲ. ಅಲ್ಲದೇ ಪರೀಕ್ಷೆಗೆ ಬಂದ ವ್ಯಕ್ತಿಗಳು ಪರೀಕ್ಷಾ ಸಮಯದಲ್ಲಿ ಮೊಬೈಲ್ ನಂಬರ್ ನೀಡಿದ್ದು, ಪರೀಕ್ಷಾ ವರದಿ ಪಾಸಿಟಿವ್ ಬಂದ ತಕ್ಷಣ ಶೇ. 10 ಮಂದಿ ತಮ್ಮ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸೋಂಕಿತರನ್ನು ಹುಡುಕುವುದು ಕಷ್ಟವಾಗಿದ್ದು, ಪೊಲೀಸರಿಗೆ ಇವರ ಮೊಬೈಲ್‌ ಲೋಕೇಷನ್ ಹುಡುಕಿ, ಅರಿವು ಮೂಡಿಸಲು ತಿಳಿಸಲಾಗಿದೆ. ಅದಕ್ಕೆ ಒಪ್ಪದೆ ಇದ್ದಾಗ ಅವರ ವಿರುದ್ಧ ಎಫ್​ಐಆರ್ (FIR) ಹಾಕಿ ಎಂದು ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ಜನತಾ ಕರ್ಫ್ಯೂ ಶೇ. 100ರಷ್ಟು ಯಶಸ್ವಿಯಾಗಿದೆ. ಆದರೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ದಿನ‌ನಿತ್ಯದ ಪದಾರ್ಥಗಳನ್ನು ತರಲು ಜನ ಮುಗಿಬೀಳುತ್ತಿದ್ದು, ಇದ್ದರಿಂದ ಸೋಂಕು ಹೆಚ್ಚಾಗುತ್ತಿದೆ. ಜನತಾ ಕರ್ಫ್ಯೂ ನಂತರ‌ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಮೈಸೂರಿನ ಚಿತ್ರಣವನ್ನು ಸಿಎಂಗೆ ತಿಳಿಸುತ್ತೇನೆ. ಮುಂದಿನ ತೀರ್ಮಾನ ಸಿಎಂ ಮಾಡುತ್ತಾರೆ ಎಂದರು.

ಓದಿ: ಸಿಎಂ ತವರು ಜಿಲ್ಲೆಯಲ್ಲೇ ಆಕ್ಸಿಜನ್​, ಬೆಡ್​ಗಳ ಕೊರತೆ: ಕೇಳೋರ್ಯಾರು ರೋಗಿಗಳ ಗೋಳು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.