ETV Bharat / state

ಬಿಜೆಪಿ ಪಕ್ಷದಲ್ಲಿನ ಗೊಂದಲಗಳ ಕುರಿತು ಸಂಸದ ಶ್ರೀನಿವಾಸ್​ ಪ್ರಸಾದ್​​​​ ಹೇಳಿದ್ದೇನು?

author img

By

Published : Nov 14, 2019, 5:28 PM IST

ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ಪಡೆದುಕೊಂಡಿರುವ ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಎದ್ದಿರುವ ಗೊಂದಲಗಳ ಕುರಿತು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾತನಾಡಿದ್ದಾರೆ.

BJP MP Srinivasa Prasad,ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು: ಅನರ್ಹರ ಆಗಮನದಿಂದ ಆಡಳಿತಾರೂಢ ಬಿಜೆಪಿಯಲ್ಲಿ ಗೊಂದಲಗಳು ಸೃಷ್ಟಿಯಾಗಿದ್ದು ನಿಜ. ಆದರೆ, ಅವುಗಳನ್ನು ಖಂಡಿತ ಬಗೆಹರಿಸಿಕೊಳ್ಳುತ್ತೇವೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್​​ ಹೇಳಿದ್ದಾರೆ.

ನಗರದ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್​ ತೀರ್ಪಿನ ನಂತರ ಎಲ್ಲರೂ ಬಿಜೆಪಿ ಪಕ್ಷ ಸೇರಿದ್ದಾರೆ. ಉಪ ಚುನಾವಣೆಗೆ ನಾಮಪತ್ರವನ್ನು ಇನ್ನೆರಡು ದಿನಗಳಲ್ಲಿ ಸಲ್ಲಿಸಲಿದ್ದಾರೆ. ಉಪ ಚುನಾವಣೆ ಸಂಬಂಧ 3 ಪಕ್ಷಗಳಲ್ಲಿ ಗೊಂದಲಗಳಿರುವುದು ನಿಜ. ಬಿಜೆಪಿಯಲ್ಲಿ ಹೊಸಕೋಟೆ ಕ್ಷೇತ್ರದ ಬಗ್ಗೆ ಗೊಂದಲವಿದೆ. ಅದನ್ನು ಪಕ್ಷ ಸರಿ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಶರತ್​ ಬಚ್ಚೇಗೌಡ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಸೋಲುವುದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಅನ್ನುವುದನ್ನು ಇಲ್ಲಿ ಮರೆಯಬಾರದು. ಈ ತರಹದ ರಾಜಕೀಯ ಏನು ಎಂಬುದು ಗೊತ್ತಾಗುವುದಿಲ್ಲ. ಜನ ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದರು.

ಮಾಜಿ ಸಚಿವ ರೋಷನ್ ಬೇಗ್​​ ಹಾಗೂ ಅವರ ಮಗ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಮಾತುಕತೆ ಬಳಿಕ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ತೀರ್ಮಾನವಾಗುತ್ತದೆ ಎಂದರು.

ಮೈಸೂರು: ಅನರ್ಹರ ಆಗಮನದಿಂದ ಆಡಳಿತಾರೂಢ ಬಿಜೆಪಿಯಲ್ಲಿ ಗೊಂದಲಗಳು ಸೃಷ್ಟಿಯಾಗಿದ್ದು ನಿಜ. ಆದರೆ, ಅವುಗಳನ್ನು ಖಂಡಿತ ಬಗೆಹರಿಸಿಕೊಳ್ಳುತ್ತೇವೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್​​ ಹೇಳಿದ್ದಾರೆ.

ನಗರದ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್​ ತೀರ್ಪಿನ ನಂತರ ಎಲ್ಲರೂ ಬಿಜೆಪಿ ಪಕ್ಷ ಸೇರಿದ್ದಾರೆ. ಉಪ ಚುನಾವಣೆಗೆ ನಾಮಪತ್ರವನ್ನು ಇನ್ನೆರಡು ದಿನಗಳಲ್ಲಿ ಸಲ್ಲಿಸಲಿದ್ದಾರೆ. ಉಪ ಚುನಾವಣೆ ಸಂಬಂಧ 3 ಪಕ್ಷಗಳಲ್ಲಿ ಗೊಂದಲಗಳಿರುವುದು ನಿಜ. ಬಿಜೆಪಿಯಲ್ಲಿ ಹೊಸಕೋಟೆ ಕ್ಷೇತ್ರದ ಬಗ್ಗೆ ಗೊಂದಲವಿದೆ. ಅದನ್ನು ಪಕ್ಷ ಸರಿ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಶರತ್​ ಬಚ್ಚೇಗೌಡ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಸೋಲುವುದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಅನ್ನುವುದನ್ನು ಇಲ್ಲಿ ಮರೆಯಬಾರದು. ಈ ತರಹದ ರಾಜಕೀಯ ಏನು ಎಂಬುದು ಗೊತ್ತಾಗುವುದಿಲ್ಲ. ಜನ ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದರು.

ಮಾಜಿ ಸಚಿವ ರೋಷನ್ ಬೇಗ್​​ ಹಾಗೂ ಅವರ ಮಗ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಮಾತುಕತೆ ಬಳಿಕ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ತೀರ್ಮಾನವಾಗುತ್ತದೆ ಎಂದರು.

Intro:ಮೈಸೂರು: ಬಿಜೆಪಿಯಲ್ಲಿ ಗೊಂದಲಗಳಿವೆ ಅದನ್ನು ಖಂಡಿತ ಬಗೆಹರಿಸಿಕೊಳ್ಳುತ್ತೇವೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
Body:

ಇಂದು ನಗರದ ರೈಲ್ವೆ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಎಲ್ಲರೂ ಬಿಜೆಪಿ ಪಕ್ಷ ಸೇರಿದ್ದಾರೆ. ಉಪ ಚುನಾವಣೆಗೆ ನಾಮಪತ್ರವನ್ನು ಇನ್ನೆರಡು ದಿನಗಳಲ್ಲಿ ಸಲ್ಲಿಸಲಿದ್ದಾರೆ.
ಉಪ ಚುನಾವಣೆ ಸಂಬಂಧ ೩ ಪಕ್ಷಗಳಲ್ಲಿ ಗೊಂದಲ ಇರುವುದು ಸಹಜ. ಬಿಜೆಪಿಯಲ್ಲಿ ಹೊಸಕೋಟೆ ಕ್ಷೇತ್ರದ ಬಗ್ಗೆ ಗೊಂದಲ ಇದೆ. ಅದನ್ನು ಪಕ್ಷ ಸರಿ ಮಾಡುತ್ತದೆ.
ಇನ್ನೂ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಶರತ್ ಬಚ್ಚೇಗೌಡ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಸೋಲುವುದಕ್ಕೆ ಕುಮಾರಸ್ವಾಮಿ ಅವರೇ ಕಾರಣ ಈ ತರಹದ ರಾಜಕೀಯ ಏನು ಎಂಬುದು ಗೊತ್ತಾಗುವುದಿಲ್ಲ. ಜನ ಇದನೆಲ್ಲಾ ನೋಡುತ್ತಿದ್ದಾರೆ.

ಇನ್ನೂ ಅನರ್ಹರ ಬಿಜೆಪಿ ಸೇರ್ಪಡೆ ನಂತರ ಗೊಂದಲಗಳು ಕಾಣಿಸುತ್ತಿದ್ದು ಅದನೆಲ್ಲಾ, ಪರಿಹರಿಸಿಕೊಂಡು ಪಕ್ಷ ಮುಂದೆ ಹೋಗಬೇಕಾಗಿದೆ ‌ಎಂದು ವಿ.ಶ್ರೀನಿವಾಸ್ ಪ್ರಸಾದ್.
ರೋಷನ್ ಬೇಗ್ ಹಾಗೂ ಅವರ ಮಗ ಬಿಜೆಪಿ ಸೇರ್ಪಡೆ ಬಗ್ಗೆ ಮಾತುಕತೆ ನಡೆಯುತ್ತಿದ್ದು ಮಾತುಕತೆ ಆದ ಮೇಲೆ ಅವರಿಬ್ಬರು ಸೇರಿಕೊಳ್ಳುವ ಬಗ್ಗೆ ತಿರ್ಮಾನವಾಗುತ್ತದೆ ಇನ್ನೂ.
ಹುಣಸೂರು ಕ್ಷೇತ್ರದಿಂದ ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಅಥವಾ ವಿಶ್ವನಾಥ್ ಸ್ಪರ್ಧಿಸುತ್ತಾರೊ ಎಂಬ ಬಗ್ಗೆ ಸ್ವತಃ ವಿಶ್ವನಾಥ್ ಅವರೇ ತಿರ್ಮಾನ ಮಾಡುತ್ತಾರೆ.
ನಾನು ಹುಣಸೂರು ಚುನಾವಣೆ ಪ್ರಕಾರಕ್ಕೆ ಹೋಗುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.