ಮೈಸೂರು: ಇಲ್ಲಿನ ವಿಜಯನಗರ ಮೂರನೇ ಹಂತದಲ್ಲಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಅವರ ಸಹೋದರನ ಮಗನ ಮನೆ ಮೇಲೂ ಐಟಿ ದಾಳಿ ನಡೆದಿದೆ.
ಸುಮಾರು 4 ಕಾರುಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದು, ಸಿಆರ್ಪಿಎಫ್ ಸಿಬ್ಬಂದಿ ಭದ್ರತೆಯಲ್ಲಿ ಈ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಪುಟ್ಟರಾಜು ಅಣ್ಣನ ಮಗ ಕುಮಾರ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.