ETV Bharat / state

ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಸದಾ ಪೂಜೆ, ಜ್ಯೋತಿಷ್ಯ ಹೇಳುವುದರಲ್ಲಿ ಕಾಲ ಕಳೆಯುತ್ತಿದ್ದ ಪುರೋಹಿತರು ಹಾಗೂ ಜೋತಿಷಿಗಳಿಗೆ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿತ್ತು. ಇದಕ್ಕೆ ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಚಾಲನೆ ನೀಡಿ ಶುಭ ಕೋರಿದರು.

author img

By

Published : Jul 27, 2019, 7:30 PM IST

International cricketer javagal srinath, ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಮೈಸೂರು: ಕರ್ನಾಟಕ ರಾಜ್ಯ ಪುರೋಹಿತರು ಹಾಗೂ ಜ್ಯೋತಿಷಿಗಳಿಗೆ ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಚಾಲನೆ ನೀಡಿದರು.

ನಗರದ ರೈಲ್ವೆ ವರ್ಕ್ ಶಾಪ್ ಮೈದಾನದಲ್ಲಿ ರಾಜ್ಯ ಮಟ್ಟದ ಕರ್ನಾಟಕ ಪುರೋಹಿತ ಹಾಗೂ ಜ್ಯೋತಿಷಿಗಳಿಗೆ ಎರಡು ದಿನಗಳ ಕಾಲ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಅವರು ಬ್ಯಾಟ್ ಮಾಡುವ ಮೂಲಕ ಚಾಲನೆ ನೀಡಿದರು.

ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಚಾಲನೆ ನೀಡಿದ್ರು.

ಜಾವಗಲ್ ಶ್ರೀನಾಥ್ ಮಾತನಾಡಿ, ಪುರೋಹಿತ ಹಾಗೂ ಜ್ಯೋತಿಷಿಗಳು ಪ್ರತಿನಿತ್ಯ ಪೂಜೆ-ಪುನಸ್ಕಾರಗಳನ್ನು ಮಾಡುವ ಮೂಲಕ ಜನರಿಗೆ ದಾರಿ ತೋರಿಸುವಂತಹ ಕೆಲಸ ಮಾಡುವವರು. ನೀವು ಕ್ರಿಕೆಟ್​ ಆಡುವಾಗ ಅಷ್ಟೇ ಶ್ರದ್ಧೆಯಿಂದ, ಭಯವಿಲ್ಲದಂತೆ ಆಟ ಆಡಿ. ಇದು ಎಲ್ಲರನ್ನೂ ಒಗ್ಗೂಡಿಸುವ ಜೊತೆಗೆ ನಿಮ್ಮಲ್ಲೂ ಆತ್ಮವಿಶ್ವಾಸವನ್ನು ಉಂಟು ಮಾಡುತ್ತದೆ ಎಂದು ಹುರಿದುಂಬಿಸಿದರು.

ಇಂದು ಮತ್ತು ನಾಳೆ ಪಂದ್ಯಾವಳಿ ನಡೆಯಲಿದೆ. ಈ ಟೂರ್ನಿಯಲ್ಲಿ ಸುಮಾರು 16 ತಂಡಗಳು ಭಾಗವಹಿಸಲಿವೆ.

ಮೈಸೂರು: ಕರ್ನಾಟಕ ರಾಜ್ಯ ಪುರೋಹಿತರು ಹಾಗೂ ಜ್ಯೋತಿಷಿಗಳಿಗೆ ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಚಾಲನೆ ನೀಡಿದರು.

ನಗರದ ರೈಲ್ವೆ ವರ್ಕ್ ಶಾಪ್ ಮೈದಾನದಲ್ಲಿ ರಾಜ್ಯ ಮಟ್ಟದ ಕರ್ನಾಟಕ ಪುರೋಹಿತ ಹಾಗೂ ಜ್ಯೋತಿಷಿಗಳಿಗೆ ಎರಡು ದಿನಗಳ ಕಾಲ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಏರ್ಪಡಿಸಲಾಗಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಅವರು ಬ್ಯಾಟ್ ಮಾಡುವ ಮೂಲಕ ಚಾಲನೆ ನೀಡಿದರು.

ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಚಾಲನೆ ನೀಡಿದ್ರು.

ಜಾವಗಲ್ ಶ್ರೀನಾಥ್ ಮಾತನಾಡಿ, ಪುರೋಹಿತ ಹಾಗೂ ಜ್ಯೋತಿಷಿಗಳು ಪ್ರತಿನಿತ್ಯ ಪೂಜೆ-ಪುನಸ್ಕಾರಗಳನ್ನು ಮಾಡುವ ಮೂಲಕ ಜನರಿಗೆ ದಾರಿ ತೋರಿಸುವಂತಹ ಕೆಲಸ ಮಾಡುವವರು. ನೀವು ಕ್ರಿಕೆಟ್​ ಆಡುವಾಗ ಅಷ್ಟೇ ಶ್ರದ್ಧೆಯಿಂದ, ಭಯವಿಲ್ಲದಂತೆ ಆಟ ಆಡಿ. ಇದು ಎಲ್ಲರನ್ನೂ ಒಗ್ಗೂಡಿಸುವ ಜೊತೆಗೆ ನಿಮ್ಮಲ್ಲೂ ಆತ್ಮವಿಶ್ವಾಸವನ್ನು ಉಂಟು ಮಾಡುತ್ತದೆ ಎಂದು ಹುರಿದುಂಬಿಸಿದರು.

ಇಂದು ಮತ್ತು ನಾಳೆ ಪಂದ್ಯಾವಳಿ ನಡೆಯಲಿದೆ. ಈ ಟೂರ್ನಿಯಲ್ಲಿ ಸುಮಾರು 16 ತಂಡಗಳು ಭಾಗವಹಿಸಲಿವೆ.

Intro:ಮೈಸೂರು: ಕರ್ನಾಟಕ ರಾಜ್ಯ ಪುರೋಹಿತ ಹಾಗೂ ಜೋತಿಷ್ಯಿಗಳ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ಖ್ಯಾತ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಚಾಲನೆ ನೀಡಿದರು.Body:ಸದಾ ದೇವರ ಪೂಜೆ, ಭವಿಷ್ಯ ಹೇಳುವುದರಲ್ಲೇ ಬಿಜ಼ಿ ಇರುತ್ತಿದ್ದ ಜೋತಿಷ್ಯಗಳು ಹಾಗೂ ಪುರೋಹಿತರು ಇಂದು ಕ್ರಿಕೆಟ್ ಬ್ಯಾಟ್ ಹಿಡಿಯುವ ಮೂಲಕ ನಾವೇನೂ ಇತರರಿಗೆ ಕಮ್ಮಿ ಇಲ್ಲ ಎಂದು ತೋರಿಸಿದರು.
ಹೌದು ಇಂದು ನಗರದ ರೈಲ್ವೆ ವರ್ಕ್ ಶಾಪ್ ಮೈದಾನದಲ್ಲಿ ರಾಜ್ಯ ಮಟ್ಟದ ಕರ್ನಾಟಕ ಪುರೋಹಿತ ಹಾಗೂ ಜೋತಿಷ್ಯಿಗಳ ಎರಡು ದಿನಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಬ್ಯಾಟ್ ಮಾಡುವ ಮೂಲಕ ಚಾಲನೆ ನೀಡಿದರು.
ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ೧೬ ತಂಡಗಳು ಭಾಗವಹಿಸಿದ್ದವು ಈ ಕ್ರೀಡಾ ಕೂಟ ಇಂದು ಮತ್ತು ನಾಳೆ ನಡೆಯಲಿದೆ.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.