ETV Bharat / state

ಶಾಸಕ ಜಿ. ಟಿ. ದೇವೇಗೌಡ ಜೆಡಿಎಸ್​ನಲ್ಲೇ ಇದ್ದಾರೆ : ನಿಖಿಲ್ ಕುಮಾರಸ್ವಾಮಿ - ಶಾಸಕ ಜಿ. ಟಿ. ದೇವೇಗೌಡ ಜಿಡಿಎಸ್

ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ವಿರೋಧ ಪಕ್ಷಗಳು. ಅವರ ಜೊತೆ ಕೈ ಜೋಡಿಸುವ ಅನಿವಾರ್ಯತೆ ನಮಗಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Nikhil Kumaraswamy
Nikhil Kumaraswamy
author img

By

Published : Jan 21, 2021, 12:59 AM IST

Updated : Jan 21, 2021, 6:55 AM IST

ಮೈಸೂರು: ಶಾಸಕ ಜಿ.ಟಿ. ದೇವೇಗೌಡ ಜೆಡಿಎಸ್​ನಲ್ಲೆ ಇದ್ದಾರೆ. ಸಧ್ಯದಲ್ಲೇ ಎಲ್ಲ ಗೊಂದಲಗಳಿಗೂ ತೆರೆ ಬೀಳಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

Nikhil Kumaraswamy
ಆಂಜನೇಯ ಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭ

ಕೆಆರ್ ನಗರ ತಾಲ್ಲೂಕಿನ ಮೂಲೇಪೆಟ್ಲು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಸ್ಥಳೀಯ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ವಿರೋಧ ಪಕ್ಷಗಳು. ಅವರ ಜೊತೆ ಕೈ ಜೋಡಿಸುವ ಅನಿವಾರ್ಯತೆ ನಮಗಿಲ್ಲ ಎಂದರು.

ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ

ಪಕ್ಷದಲ್ಲಿ ನಿಷ್ಠಾವಂತ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ನಾವೆಲ್ಲ ಮುಂದಿನ ಬಾರಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸೋಣ, ಕುಮಾರಣ್ಣನ ಸಾಲ ಮನ್ನಾ ಯೋಜನೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯವಾಗುತ್ತದೆ. ಒಳ್ಳೆಯ ಕೆಲಸಗಳು ಜನರನ್ನು ನೆನಪಿಸುವ ಕಾಲ ಬರುತ್ತದೆ. ನಾವು ಹೋರಾಟ ಮಾಡೋಣ ಎಂದ ನಿಖಿಲ್ ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್​ಗೆ ಹೋಗುತ್ತೇನೆ. ಬಿಜೆಪಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಅವರು ಜೆಡಿಎಸ್​ನಲ್ಲಿದ್ದಾರೆ.

ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು, ಸಣ್ಣ ಪುಟ್ಟ ಬಿನ್ನಾಭಿಪ್ರಾಯಗಳು ಇರುತ್ತವೆ, ಅವೆಲ್ಲವನ್ನು ಸರಿ ಪಡಿಸಿಕೊಂಡು ಹೋಗುತ್ತೇವೆ. ಜಿ. ಟಿ.ದೇವೇಗೌಡ ಈ ಭಾಗದ ಜನಪ್ರಿಯ ನಾಯಕರು. ಅವರ ಮಗ ಜಿ.ಟಿ.ಹರೀಶ್ ಗೌಡ ಜೊತೆ ನಾನಯ ಒಳ್ಳೆಯ ಸಂಬಂಧ ಹೊಂದಿದ್ದೇನೆ. ಸಧ್ಯದಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದರು.

ಮೈಸೂರು: ಶಾಸಕ ಜಿ.ಟಿ. ದೇವೇಗೌಡ ಜೆಡಿಎಸ್​ನಲ್ಲೆ ಇದ್ದಾರೆ. ಸಧ್ಯದಲ್ಲೇ ಎಲ್ಲ ಗೊಂದಲಗಳಿಗೂ ತೆರೆ ಬೀಳಲಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

Nikhil Kumaraswamy
ಆಂಜನೇಯ ಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭ

ಕೆಆರ್ ನಗರ ತಾಲ್ಲೂಕಿನ ಮೂಲೇಪೆಟ್ಲು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಸ್ಥಳೀಯ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ವಿರೋಧ ಪಕ್ಷಗಳು. ಅವರ ಜೊತೆ ಕೈ ಜೋಡಿಸುವ ಅನಿವಾರ್ಯತೆ ನಮಗಿಲ್ಲ ಎಂದರು.

ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ

ಪಕ್ಷದಲ್ಲಿ ನಿಷ್ಠಾವಂತ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ನಾವೆಲ್ಲ ಮುಂದಿನ ಬಾರಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸೋಣ, ಕುಮಾರಣ್ಣನ ಸಾಲ ಮನ್ನಾ ಯೋಜನೆ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಸಹಾಯವಾಗುತ್ತದೆ. ಒಳ್ಳೆಯ ಕೆಲಸಗಳು ಜನರನ್ನು ನೆನಪಿಸುವ ಕಾಲ ಬರುತ್ತದೆ. ನಾವು ಹೋರಾಟ ಮಾಡೋಣ ಎಂದ ನಿಖಿಲ್ ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್​ಗೆ ಹೋಗುತ್ತೇನೆ. ಬಿಜೆಪಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಅವರು ಜೆಡಿಎಸ್​ನಲ್ಲಿದ್ದಾರೆ.

ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು, ಸಣ್ಣ ಪುಟ್ಟ ಬಿನ್ನಾಭಿಪ್ರಾಯಗಳು ಇರುತ್ತವೆ, ಅವೆಲ್ಲವನ್ನು ಸರಿ ಪಡಿಸಿಕೊಂಡು ಹೋಗುತ್ತೇವೆ. ಜಿ. ಟಿ.ದೇವೇಗೌಡ ಈ ಭಾಗದ ಜನಪ್ರಿಯ ನಾಯಕರು. ಅವರ ಮಗ ಜಿ.ಟಿ.ಹರೀಶ್ ಗೌಡ ಜೊತೆ ನಾನಯ ಒಳ್ಳೆಯ ಸಂಬಂಧ ಹೊಂದಿದ್ದೇನೆ. ಸಧ್ಯದಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದರು.

Last Updated : Jan 21, 2021, 6:55 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.