ETV Bharat / state

ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಅಭಿನಯ ಚಕ್ರವರ್ತಿ

author img

By

Published : Sep 3, 2021, 10:08 AM IST

Updated : Sep 3, 2021, 2:25 PM IST

ಕಿಚ್ಚ ಸುದೀಪ್​​​ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ, ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.

kichcha-sudeep-visit-to-mysuru-chamundeshwari-temple
ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಅಭಿನಯ ಚಕ್ರವರ್ತಿ

ಮೈಸೂರು: ನಿನ್ನೆ 50ನೇ ಹುಟ್ಟುಹಬ್ಬ ಆಚರಿಸಿಕೊಂಡ ನಟ, ಕಿಚ್ಚ ಸುದೀಪ್​​​ ಇಂದು ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

kichcha-sudeep-visit-to-mysuru-chamundeshwari-temple
ಕಿಚ್ಚ ಸುದೀಪ್

ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ‌ ನೀಡಿದ್ದ ಸುದೀಪ್, ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ಹೀರೋ ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು‌. ಈ ವೇಳೆ, ಅಭಿನಯ ಚಕ್ರವರ್ತಿ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು‌. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಅಭಿನಯ ಚಕ್ರವರ್ತಿ

ಸುದೀಪ್​​​ ನಿನ್ನೆ ತಮ್ಮ 50ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕೇವಲ ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ಮಾತ್ರ ಬರ್ತ್‌ಡೇಯಲ್ಲಿ ಭಾಗಿಯಾಗಿದ್ದರು. ನೆಚ್ಚಿನ ನಟನ ಹುಟ್ಟುಹಬ್ಬಕ್ಕಾಗಿ ಕೆಲವು ಜಿಲ್ಲೆಗಳಲ್ಲಿ ಕಿಚ್ಚನ ಅಭಿಮಾನಿಗಳು ದೊಡ್ಡ ದೊಡ್ಡ ಕಟೌಟ್​ ಮಾಡಿಸಿ ಹಾಲಿನ ಅಭಿಷೇಕ, ಕೇಕ್​ ಕಟ್ಟಿಂಗ್​ ಸೇರಿದಂತೆ ರಕ್ತದಾನ ಹಾಗೂ ಅನ್ನದಾನ ಮಾಡುವ ಮೂಲಕ ಆಚರಿಸಿದ್ದಾರೆ‌.

ಇದನ್ನೂ ಓದಿ: ಅಭಿಮಾನದ ಹೆಸರಲ್ಲಿ ಪ್ರಾಣಿ ಹಿಂಸೆ ಸರಿಯಲ್ಲ, ನನಗೆ ನಿಮ್ಮ ಪ್ರೀತಿ ಮಾತ್ರ ಸಾಕು: ಸುದೀಪ್

ಮೈಸೂರು: ನಿನ್ನೆ 50ನೇ ಹುಟ್ಟುಹಬ್ಬ ಆಚರಿಸಿಕೊಂಡ ನಟ, ಕಿಚ್ಚ ಸುದೀಪ್​​​ ಇಂದು ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

kichcha-sudeep-visit-to-mysuru-chamundeshwari-temple
ಕಿಚ್ಚ ಸುದೀಪ್

ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ‌ ನೀಡಿದ್ದ ಸುದೀಪ್, ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ಹೀರೋ ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು‌. ಈ ವೇಳೆ, ಅಭಿನಯ ಚಕ್ರವರ್ತಿ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು‌. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಅಭಿನಯ ಚಕ್ರವರ್ತಿ

ಸುದೀಪ್​​​ ನಿನ್ನೆ ತಮ್ಮ 50ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕೇವಲ ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ಮಾತ್ರ ಬರ್ತ್‌ಡೇಯಲ್ಲಿ ಭಾಗಿಯಾಗಿದ್ದರು. ನೆಚ್ಚಿನ ನಟನ ಹುಟ್ಟುಹಬ್ಬಕ್ಕಾಗಿ ಕೆಲವು ಜಿಲ್ಲೆಗಳಲ್ಲಿ ಕಿಚ್ಚನ ಅಭಿಮಾನಿಗಳು ದೊಡ್ಡ ದೊಡ್ಡ ಕಟೌಟ್​ ಮಾಡಿಸಿ ಹಾಲಿನ ಅಭಿಷೇಕ, ಕೇಕ್​ ಕಟ್ಟಿಂಗ್​ ಸೇರಿದಂತೆ ರಕ್ತದಾನ ಹಾಗೂ ಅನ್ನದಾನ ಮಾಡುವ ಮೂಲಕ ಆಚರಿಸಿದ್ದಾರೆ‌.

ಇದನ್ನೂ ಓದಿ: ಅಭಿಮಾನದ ಹೆಸರಲ್ಲಿ ಪ್ರಾಣಿ ಹಿಂಸೆ ಸರಿಯಲ್ಲ, ನನಗೆ ನಿಮ್ಮ ಪ್ರೀತಿ ಮಾತ್ರ ಸಾಕು: ಸುದೀಪ್

Last Updated : Sep 3, 2021, 2:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.