ಮೈಸೂರು: ನಿನ್ನೆ 50ನೇ ಹುಟ್ಟುಹಬ್ಬ ಆಚರಿಸಿಕೊಂಡ ನಟ, ಕಿಚ್ಚ ಸುದೀಪ್ ಇಂದು ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದ ಸುದೀಪ್, ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ಹೀರೋ ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ, ಅಭಿನಯ ಚಕ್ರವರ್ತಿ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಸುದೀಪ್ ನಿನ್ನೆ ತಮ್ಮ 50ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕೇವಲ ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ಮಾತ್ರ ಬರ್ತ್ಡೇಯಲ್ಲಿ ಭಾಗಿಯಾಗಿದ್ದರು. ನೆಚ್ಚಿನ ನಟನ ಹುಟ್ಟುಹಬ್ಬಕ್ಕಾಗಿ ಕೆಲವು ಜಿಲ್ಲೆಗಳಲ್ಲಿ ಕಿಚ್ಚನ ಅಭಿಮಾನಿಗಳು ದೊಡ್ಡ ದೊಡ್ಡ ಕಟೌಟ್ ಮಾಡಿಸಿ ಹಾಲಿನ ಅಭಿಷೇಕ, ಕೇಕ್ ಕಟ್ಟಿಂಗ್ ಸೇರಿದಂತೆ ರಕ್ತದಾನ ಹಾಗೂ ಅನ್ನದಾನ ಮಾಡುವ ಮೂಲಕ ಆಚರಿಸಿದ್ದಾರೆ.
ಇದನ್ನೂ ಓದಿ: ಅಭಿಮಾನದ ಹೆಸರಲ್ಲಿ ಪ್ರಾಣಿ ಹಿಂಸೆ ಸರಿಯಲ್ಲ, ನನಗೆ ನಿಮ್ಮ ಪ್ರೀತಿ ಮಾತ್ರ ಸಾಕು: ಸುದೀಪ್