ETV Bharat / state

ಕೌಟುಂಬಿಕ ಕಲಹ : ಕ್ರಿಮಿನಾಶಕ ಸೇವಿಸಿ ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ - ಹುಣಸೂರಿಲ್ಲಿ ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ

ಐದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಸಾರಿಗೆ ಸಂಸ್ಥೆಯ ಚಾಲಕನೋರ್ವ ಕೌಟುಂಬಿಕ ಕಲಹದಿಂದ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.

KSRTC Driver suicide in Hunasuru
ಹುಣಸೂರಿಲ್ಲಿ ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆ
author img

By

Published : May 13, 2020, 11:55 AM IST

ಮೈಸೂರು: ಕೌಟುಂಬಿಕ ಕಲಹದಿಂದ 5 ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಸಾರಿಗೆ ಸಂಸ್ಥೆಯ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಲರಾಜು (30) ಮೃತ ಚಾಲಕ. ಮಂಗಳೂರು ವಿಭಾಗದ ಪುತ್ತೂರು ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಲರಾಜು, ಕಳೆದ 5 ತಿಂಗಳ ಹಿಂದೆ ಕೊಡಗಿನ ಕುಶಾಲನಗರದ ಜೀವಿತಾ ಎಂಬಾಕೆಯನ್ನು ವಿವಾಹವಾಗಿದ್ದರು. ಮದುವೆ ಆದ ದಿನದಿಂದಲೂ ಗಂಡ ಹೆಂಡತಿ ನಡುವೆ ವೈಮನಸ್ಸು ಇತ್ತು ಎನ್ನಲಾಗಿದ್ದು, ಮೇ 4 ರಂದು ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಜೀವಿತ ತವರು ಮನೆಗೆ ಹೋಗಿದ್ದರು, ಇದರಿಂದ ನೊಂದ ಬಾಲರಾಜ್ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಬಾಲರಾಜುವನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಪತ್ನಿ ಜೀವಿತಾ ಹುಣಸೂರು ಗ್ರಾಮಾಂತ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಮೈಸೂರು: ಕೌಟುಂಬಿಕ ಕಲಹದಿಂದ 5 ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಸಾರಿಗೆ ಸಂಸ್ಥೆಯ ಚಾಲಕ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಣಸೂರು ತಾಲೂಕಿನ ಪೆಂಜಳ್ಳಿ ಗ್ರಾಮದಲ್ಲಿ ನಡೆದಿದೆ.

ಬಾಲರಾಜು (30) ಮೃತ ಚಾಲಕ. ಮಂಗಳೂರು ವಿಭಾಗದ ಪುತ್ತೂರು ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಲರಾಜು, ಕಳೆದ 5 ತಿಂಗಳ ಹಿಂದೆ ಕೊಡಗಿನ ಕುಶಾಲನಗರದ ಜೀವಿತಾ ಎಂಬಾಕೆಯನ್ನು ವಿವಾಹವಾಗಿದ್ದರು. ಮದುವೆ ಆದ ದಿನದಿಂದಲೂ ಗಂಡ ಹೆಂಡತಿ ನಡುವೆ ವೈಮನಸ್ಸು ಇತ್ತು ಎನ್ನಲಾಗಿದ್ದು, ಮೇ 4 ರಂದು ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಜೀವಿತ ತವರು ಮನೆಗೆ ಹೋಗಿದ್ದರು, ಇದರಿಂದ ನೊಂದ ಬಾಲರಾಜ್ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಬಾಲರಾಜುವನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ಪತ್ನಿ ಜೀವಿತಾ ಹುಣಸೂರು ಗ್ರಾಮಾಂತ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.