ETV Bharat / state

ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಗೇಡು : ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್

author img

By

Published : Jul 8, 2023, 2:26 PM IST

ಮೈಸೂರು ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮಾತನಾಡಿದ್ದು, ಬಿಜೆಪಿ ಬಗ್ಗೆ ವ್ಯಂಗ್ಯವಾಗಿ ಟೀಕಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್
ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್

ಮೈಸೂರು: ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಯ ಸಂಗತಿ. ಇದು ಬಿಜೆಪಿಯಲ್ಲಿ ಅರಾಜಕತೆ ಇದೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಗ್ಯಾರಂಟಿಗಳನ್ನು ಟೀಕೆ ಮಾಡುವ ಬಿಜೆಪಿ ನಾಯಕರಿಗೆ, ಸ್ವತಃ ಬಿಜೆಪಿಯಿಂದ ನಾಮ ನಿರ್ದೇಶನಗೊಂಡ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಬಿಜೆಪಿ ವಿರುದ್ಧ ವ್ಯಂಗ್ಯ ರೀತಿಯಲ್ಲಿ ಟೀಕೆ ಮಾಡಿದರು.

ಇಂದು ಮೈಸೂರು ಪತ್ರಕರ್ತರ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಅವರು, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ. ಇದು ಬಿಜೆಪಿಯಲ್ಲಿ ಅರಾಜಕತೆ ಇದೇ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಟೀಕೆ ಮಾಡುವ ಬಿಜೆಪಿಗೆ ಈ ರೀತಿ ಆಗಿರುವುದು ನಾಚಿಕೆಗೇಡು. ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಎಂದರೆ ಕುಮಾರಸ್ವಾಮಿ, ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ಟೀಕಿಸಿದರು.

ಒಳ್ಳೆಯ ಬಜೆಟ್ ನೀಡಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24 ನೇ ಸಾಲಿನ ಬಜೆಟ್ ಉತ್ತಮವಾಗಿದ್ದು. ಅಕ್ಷರ, ಅನ್ನ, ಆರೋಗ್ಯಕ್ಕೆ ಒತ್ತು ನೀಡಿದ್ದು, ಮೂರು ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಎಲ್ಲಾ ವರ್ಗದ ಜನತೆಗೆ ಉತ್ತಮ ಬಜೆಟ್ ನೀಡಿದ್ದಾರೆ. ಶಿಕ್ಷಣಕ್ಕೆ, ಸಮಾಜ ಕಲ್ಯಾಣಕ್ಕೆ, ಕನ್ನಡ ಪುಸ್ತಕ ಖರೀದಿಗೆ ಹೆಚ್ಚಿನ ಹಣ ನೀಡಿದ್ದರು. ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ದೇಶದಲ್ಲಿ ಎಲ್ಲೂ ನೀಡಿರಲಿಲ್ಲ. ಯಾವ ಜಾತಿ, ಧರ್ಮ ನೋಡದೇ ಎಲ್ಲರಿಗೂ ಗ್ಯಾರಂಟಿ ಯೋಜನೆ ನೀಡಿರುವುದು ದೇಶದಲ್ಲೇ ಮಾದರಿ ಎಂದು ಸಿದ್ದರಾಮಯ್ಯ ಬಜೆಟ್ ಬಗ್ಗೆ ಮೆಚ್ಚುಗೆ ನೀಡಿದರು. ಹಾಗೂ ಗ್ಯಾರಂಟಿ ಯೋಜನೆಗಳನ್ನು ಸವಾಲುಗಳ ನಡುವೆಯೂ ಜಾರಿಗೆ ತರಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಪ್ರತಿಕ್ರಿಯೆ : ಇದು ಬಹಳ ದೊಡ್ಡ ವಿಷಯ, ಅದನ್ನು ಮಾಡಬೇಕೆಂದು ಬಹಳ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದಾರೆ. ವೈವಿಧ್ಯತೆಯಲ್ಲಿ ಏಕತೆ, ಏಕತೆಯಲ್ಲಿ ವೈವಿಧ್ಯತೆ. ಇದನ್ನು ಎಲ್ಲಾ ರಾಜ್ಯಗಳು ಒಪ್ಪಬೇಕು. ಮುಂದಿನ ಲೋಕಸಭಾ ಚುನಾವಣೆಗೆ ವೋಟ್ ಬ್ಯಾಂಕ್​ಗಾಗಿ ಇದನ್ನು ಇಟ್ಟಿದ್ದಾರೆ ಅಷ್ಟೇ, ಇದು ಜಾರಿಯಾಗುವುದು ಕಷ್ಟ ಎಂದು ಪರಿಷತ್ ಸದಸ್ಯ ವಿಶ್ವನಾಥ್ ಅಭಿಪ್ರಾಯಪಟ್ಟರು.

ಮೈಸೂರು ಭಾಗಕ್ಕೆ ಈ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಾಧಿಕಾರ ಮಾಡಿದ್ದಾರೆ. ಟೂರಿಸಂಗೆ ಒತ್ತು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ಆದ್ಯತೆ ನೀಡಬೇಕೆಂದು ವಿಶ್ವನಾಥ್ ಹೇಳಿದರು. ಇದರ ಜೊತೆಗೆ ಮಾಜಿ ಸಚಿವ ಈಶ್ವರಪ್ಪ 17 ಜನರಿಂದ ಬಿಜೆಪಿ ಪಕ್ಷ ಹಾಳಾಯಿತು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮಿಂದಲೇ ಅಧಿಕಾರ ಪಡೆದು ಸುಖಪಟ್ಟವರು ಈಶ್ವರಪ್ಪ. ಕೊನೆಗೆ ಲೂಟಿ ಮಾಡಿ ಅಧಿಕಾರ ಕಳೆದುಕೊಂಡರು ಎಂದು ಪತ್ರಕರ್ತರ ಪ್ರಶ್ನೆಗೆ ವಿಶ್ವನಾಥ್ ಉತ್ತರಿಸಿದರು.

ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು : ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು ಹಾಗೂ ಮಾಜಿ ಪ್ರಧಾನಿಗಳ ಮಗ, ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪೆನ್ ಡ್ರೈವ್​ಅನ್ನು ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು, ಇದು ಒಂತರ ಬ್ಲಾಕ್ ಮೇಲ್. ಇದ್ದರೆ ತೋರಿಸಲಿ, ಅದನ್ನು ಬಿಟ್ಟು ಮಿಮಿಕ್ರಿ ತರ ಕುಮಾರಸ್ವಾಮಿ ಮಾಡಬಾರದು ಎಂದರು.

ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾರಾ ಎಂಬ ಪ್ರಶ್ನೆಗೆ ವಿಶ್ವನಾಥ್, ಈಗಾಗಲೇ ಕುಮಾರಸ್ವಾಮಿಗೆ ಯಡಿಯೂರಪ್ಪ ಶಹಬ್ಬಾಷ್ ಗಿರಿ ಹೇಳಾಗಿದೆ. ಎರಡು ಪಕ್ಷಗಳು ಒಟ್ಟಾಗಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸುವುದರಲ್ಲಿ ಯಾವುದೇ ಸಂಶಯ ಇಲ್ಲ, ಎಂದು ಹೇಳುವ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಆಗುತ್ತದೆ ಎಂದು ಪರೋಕ್ಷವಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗ್ತಾರೆ.. ಕಾದು ನೋಡಿ ಎಂದ ಮಾಜಿ ಸಚಿವ ನಿರಾಣಿ

ಮೈಸೂರು: ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿರುವುದು ನಾಚಿಕೆಯ ಸಂಗತಿ. ಇದು ಬಿಜೆಪಿಯಲ್ಲಿ ಅರಾಜಕತೆ ಇದೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಗ್ಯಾರಂಟಿಗಳನ್ನು ಟೀಕೆ ಮಾಡುವ ಬಿಜೆಪಿ ನಾಯಕರಿಗೆ, ಸ್ವತಃ ಬಿಜೆಪಿಯಿಂದ ನಾಮ ನಿರ್ದೇಶನಗೊಂಡ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಬಿಜೆಪಿ ವಿರುದ್ಧ ವ್ಯಂಗ್ಯ ರೀತಿಯಲ್ಲಿ ಟೀಕೆ ಮಾಡಿದರು.

ಇಂದು ಮೈಸೂರು ಪತ್ರಕರ್ತರ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಅವರು, ರಾಜ್ಯದ ರಾಜಕೀಯ ಇತಿಹಾಸದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ. ಇದು ಬಿಜೆಪಿಯಲ್ಲಿ ಅರಾಜಕತೆ ಇದೇ ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಟೀಕೆ ಮಾಡುವ ಬಿಜೆಪಿಗೆ ಈ ರೀತಿ ಆಗಿರುವುದು ನಾಚಿಕೆಗೇಡು. ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಎಂದರೆ ಕುಮಾರಸ್ವಾಮಿ, ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ಟೀಕಿಸಿದರು.

ಒಳ್ಳೆಯ ಬಜೆಟ್ ನೀಡಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24 ನೇ ಸಾಲಿನ ಬಜೆಟ್ ಉತ್ತಮವಾಗಿದ್ದು. ಅಕ್ಷರ, ಅನ್ನ, ಆರೋಗ್ಯಕ್ಕೆ ಒತ್ತು ನೀಡಿದ್ದು, ಮೂರು ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಎಲ್ಲಾ ವರ್ಗದ ಜನತೆಗೆ ಉತ್ತಮ ಬಜೆಟ್ ನೀಡಿದ್ದಾರೆ. ಶಿಕ್ಷಣಕ್ಕೆ, ಸಮಾಜ ಕಲ್ಯಾಣಕ್ಕೆ, ಕನ್ನಡ ಪುಸ್ತಕ ಖರೀದಿಗೆ ಹೆಚ್ಚಿನ ಹಣ ನೀಡಿದ್ದರು. ಪ್ರಮುಖವಾಗಿ ಐದು ಗ್ಯಾರಂಟಿಗಳನ್ನು ದೇಶದಲ್ಲಿ ಎಲ್ಲೂ ನೀಡಿರಲಿಲ್ಲ. ಯಾವ ಜಾತಿ, ಧರ್ಮ ನೋಡದೇ ಎಲ್ಲರಿಗೂ ಗ್ಯಾರಂಟಿ ಯೋಜನೆ ನೀಡಿರುವುದು ದೇಶದಲ್ಲೇ ಮಾದರಿ ಎಂದು ಸಿದ್ದರಾಮಯ್ಯ ಬಜೆಟ್ ಬಗ್ಗೆ ಮೆಚ್ಚುಗೆ ನೀಡಿದರು. ಹಾಗೂ ಗ್ಯಾರಂಟಿ ಯೋಜನೆಗಳನ್ನು ಸವಾಲುಗಳ ನಡುವೆಯೂ ಜಾರಿಗೆ ತರಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಪ್ರತಿಕ್ರಿಯೆ : ಇದು ಬಹಳ ದೊಡ್ಡ ವಿಷಯ, ಅದನ್ನು ಮಾಡಬೇಕೆಂದು ಬಹಳ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದಾರೆ. ವೈವಿಧ್ಯತೆಯಲ್ಲಿ ಏಕತೆ, ಏಕತೆಯಲ್ಲಿ ವೈವಿಧ್ಯತೆ. ಇದನ್ನು ಎಲ್ಲಾ ರಾಜ್ಯಗಳು ಒಪ್ಪಬೇಕು. ಮುಂದಿನ ಲೋಕಸಭಾ ಚುನಾವಣೆಗೆ ವೋಟ್ ಬ್ಯಾಂಕ್​ಗಾಗಿ ಇದನ್ನು ಇಟ್ಟಿದ್ದಾರೆ ಅಷ್ಟೇ, ಇದು ಜಾರಿಯಾಗುವುದು ಕಷ್ಟ ಎಂದು ಪರಿಷತ್ ಸದಸ್ಯ ವಿಶ್ವನಾಥ್ ಅಭಿಪ್ರಾಯಪಟ್ಟರು.

ಮೈಸೂರು ಭಾಗಕ್ಕೆ ಈ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಾಧಿಕಾರ ಮಾಡಿದ್ದಾರೆ. ಟೂರಿಸಂಗೆ ಒತ್ತು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಿಗೂ ಆದ್ಯತೆ ನೀಡಬೇಕೆಂದು ವಿಶ್ವನಾಥ್ ಹೇಳಿದರು. ಇದರ ಜೊತೆಗೆ ಮಾಜಿ ಸಚಿವ ಈಶ್ವರಪ್ಪ 17 ಜನರಿಂದ ಬಿಜೆಪಿ ಪಕ್ಷ ಹಾಳಾಯಿತು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮಿಂದಲೇ ಅಧಿಕಾರ ಪಡೆದು ಸುಖಪಟ್ಟವರು ಈಶ್ವರಪ್ಪ. ಕೊನೆಗೆ ಲೂಟಿ ಮಾಡಿ ಅಧಿಕಾರ ಕಳೆದುಕೊಂಡರು ಎಂದು ಪತ್ರಕರ್ತರ ಪ್ರಶ್ನೆಗೆ ವಿಶ್ವನಾಥ್ ಉತ್ತರಿಸಿದರು.

ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು : ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು ಹಾಗೂ ಮಾಜಿ ಪ್ರಧಾನಿಗಳ ಮಗ, ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪೆನ್ ಡ್ರೈವ್​ಅನ್ನು ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು, ಇದು ಒಂತರ ಬ್ಲಾಕ್ ಮೇಲ್. ಇದ್ದರೆ ತೋರಿಸಲಿ, ಅದನ್ನು ಬಿಟ್ಟು ಮಿಮಿಕ್ರಿ ತರ ಕುಮಾರಸ್ವಾಮಿ ಮಾಡಬಾರದು ಎಂದರು.

ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾರಾ ಎಂಬ ಪ್ರಶ್ನೆಗೆ ವಿಶ್ವನಾಥ್, ಈಗಾಗಲೇ ಕುಮಾರಸ್ವಾಮಿಗೆ ಯಡಿಯೂರಪ್ಪ ಶಹಬ್ಬಾಷ್ ಗಿರಿ ಹೇಳಾಗಿದೆ. ಎರಡು ಪಕ್ಷಗಳು ಒಟ್ಟಾಗಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸುವುದರಲ್ಲಿ ಯಾವುದೇ ಸಂಶಯ ಇಲ್ಲ, ಎಂದು ಹೇಳುವ ಮೂಲಕ ಮುಂದಿನ ಲೋಕಸಭಾ ಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಆಗುತ್ತದೆ ಎಂದು ಪರೋಕ್ಷವಾಗಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗ್ತಾರೆ.. ಕಾದು ನೋಡಿ ಎಂದ ಮಾಜಿ ಸಚಿವ ನಿರಾಣಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.