ETV Bharat / state

ಮೈಸೂರು: ಕೊನೆಗೂ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಜನತೆ - ಮೈಸೂರು: ಬೋನಿಗೆ ಬಿದ್ದ ಚಿರತೆ

ಆಗಾಗ ಊರಿಗೆ ನುಗ್ಗಿ ನಾಯಿಗಳನ್ನು ಹೊತ್ತೊಯ್ದು ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.

leopard  Capture  in mysore
ಬೋನಿಗೆ ಬಿದ್ದ ಚಿರತೆ
author img

By

Published : Mar 4, 2020, 11:34 AM IST

ಮೈಸೂರು: ಆಗಾಗ ಊರಿಗೆ ನುಗ್ಗಿ ನಾಯಿಗಳನ್ನು ಹೊತ್ತೊಯ್ದು ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.

ತಿ.ನರಸೀಪುರ ತಾಲೂಕಿನ ತುಂಬಲ ಗ್ರಾಮದ ಸಮೀಪದ ಬಟ್ಟಳಿಗೆ ಹುಂಡಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

ತಿ.ನರಸೀಪುರ ತಾಲೂಕಿನ ತುಂಬಲ ಗ್ರಾಮದ ಸಮೀಪದ ಬಟ್ಟಳಿಗೆ ಹುಂಡಿ ಗ್ರಾಮದಲ್ಲಿ ಮಹದೇವ್ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 2 ವರ್ಷದ ಗಂಡು ಚಿರತೆ ಸೆರೆಯಾಗಿದೆ.

ನಿನ್ನೆಯಷ್ಟೆ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಇಂದು ಸುಮಾರು 2 ವರ್ಷದ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಬಟ್ಟಳಿಗೆ ಹುಂಡಿ ಗ್ರಾಮದ ಜನರಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು.

ಕೆಲ ತಿಂಗಳುಗಳಿಂದ ಬೋನಿಗೆ ಬಿದ್ದಿರುವ 6ನೇ ಚಿರತೆ ಇದಾಗಿದೆ. ಸ್ಥಳಕ್ಕೆ ಆಗಮಿಸಿದ ಡಿಎಫ್ ಆರ್ ಒ ಮಂಜುನಾಥ್ ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಚಿರತೆಯನ್ನ ಸ್ಥಳಾಂತರಿಸಿದ್ದಾರೆ.

ಮೈಸೂರು: ಆಗಾಗ ಊರಿಗೆ ನುಗ್ಗಿ ನಾಯಿಗಳನ್ನು ಹೊತ್ತೊಯ್ದು ಜನರಿಗೆ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.

ತಿ.ನರಸೀಪುರ ತಾಲೂಕಿನ ತುಂಬಲ ಗ್ರಾಮದ ಸಮೀಪದ ಬಟ್ಟಳಿಗೆ ಹುಂಡಿ ಗ್ರಾಮದಲ್ಲಿ ಬೋನಿಗೆ ಬಿದ್ದ ಚಿರತೆ

ತಿ.ನರಸೀಪುರ ತಾಲೂಕಿನ ತುಂಬಲ ಗ್ರಾಮದ ಸಮೀಪದ ಬಟ್ಟಳಿಗೆ ಹುಂಡಿ ಗ್ರಾಮದಲ್ಲಿ ಮಹದೇವ್ ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 2 ವರ್ಷದ ಗಂಡು ಚಿರತೆ ಸೆರೆಯಾಗಿದೆ.

ನಿನ್ನೆಯಷ್ಟೆ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದವು. ಇಂದು ಸುಮಾರು 2 ವರ್ಷದ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಬಟ್ಟಳಿಗೆ ಹುಂಡಿ ಗ್ರಾಮದ ಜನರಿಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು.

ಕೆಲ ತಿಂಗಳುಗಳಿಂದ ಬೋನಿಗೆ ಬಿದ್ದಿರುವ 6ನೇ ಚಿರತೆ ಇದಾಗಿದೆ. ಸ್ಥಳಕ್ಕೆ ಆಗಮಿಸಿದ ಡಿಎಫ್ ಆರ್ ಒ ಮಂಜುನಾಥ್ ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಚಿರತೆಯನ್ನ ಸ್ಥಳಾಂತರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.