ETV Bharat / state

'ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಮಾತನಾಡಲಿ'

author img

By

Published : Jul 11, 2020, 5:40 PM IST

ಕೊರೊನಾ ಅವ್ಯವಹಾರ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರಿಗೆ ಇಂದಿರಾ ಕ್ಯಾಂಟೀನ್​ನಲ್ಲಿ ಆದ ಕೋಟ್ಯಂತರ ರೂ.ಅವ್ಯವಹಾರಗಳ ಬಗ್ಗೆ ಮಾತನಾಡಲು ಹೇಳಿ. ಗದಗದಲ್ಲಿ ಈಶ್ವರ್ ಖಂಡ್ರೆ ಅವರ ನಿವೇಶನದ ಅಕ್ರಮದ ಬಗ್ಗೆ ಉಲ್ಲೇಖ ಮಾಡಲು ಹೇಳಿ ಎಂದು ನಳೀನ್ ಕುಮಾರ್ ಕಟೀಲ್​ ತಿರುಗೇಟು ನೀಡಿದ್ದಾರೆ.

Naleen Kumar
ನಳೀನ್ ಕುಮಾರ್ ಕಟೀಲ್​

ಮೈಸೂರು: ಕೊರೊನಾ ಚಿಕಿತ್ಸೆಯ ಹೆಸರಲ್ಲಿ ರಾಜ್ಯ ಸರ್ಕಾರ ಎರಡು ಸಾವಿರ ಕೋಟಿ ರೂ.ಲೂಟಿ ಮಾಡಿದೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಖರ್ಚುವೆಚ್ಚದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಕುಟುಕಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​

ಜಿಲ್ಲೆಗಳ ತಳಮಟ್ಟದಲ್ಲಿ ಪಕ್ಷ ಬಲವರ್ಧನೆ ಮಾಡುವ ದೃಷ್ಟಿಯಿಂದ ಪ್ರತಿ ಜಿಲ್ಲೆಗೂ ಭೇಟಿ ನೀಡಿ, ಪಕ್ಷದ ಮುಖಂಡರಿಂದ ಮಾಹಿತಿ ಪಡೆಯುತ್ತಿರುವೆ‌. ಈ ಮೂಲಕ ಕಾರ್ಯಕರ್ತರಲ್ಲೂ ಹುರುಪು ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದರು.

ಮೈಸೂರು: ಕೊರೊನಾ ಚಿಕಿತ್ಸೆಯ ಹೆಸರಲ್ಲಿ ರಾಜ್ಯ ಸರ್ಕಾರ ಎರಡು ಸಾವಿರ ಕೋಟಿ ರೂ.ಲೂಟಿ ಮಾಡಿದೆ ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಖರ್ಚುವೆಚ್ಚದ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಕುಟುಕಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​

ಜಿಲ್ಲೆಗಳ ತಳಮಟ್ಟದಲ್ಲಿ ಪಕ್ಷ ಬಲವರ್ಧನೆ ಮಾಡುವ ದೃಷ್ಟಿಯಿಂದ ಪ್ರತಿ ಜಿಲ್ಲೆಗೂ ಭೇಟಿ ನೀಡಿ, ಪಕ್ಷದ ಮುಖಂಡರಿಂದ ಮಾಹಿತಿ ಪಡೆಯುತ್ತಿರುವೆ‌. ಈ ಮೂಲಕ ಕಾರ್ಯಕರ್ತರಲ್ಲೂ ಹುರುಪು ತುಂಬುವ ಕೆಲಸ ಮಾಡುತ್ತಿದ್ದೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.