ETV Bharat / state

ಸರ್ಕಾರದ ಯೋಜನೆಗಳು ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಲಿ : ಡಾ ಅಂಜು ಬಾಲಾ ಸಲಹೆ

author img

By

Published : Jun 17, 2023, 3:56 PM IST

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಸದಸ್ಯೆ ಡಾ ಅಂಜು ಬಾಲಾ ವಿವಿಧ ಮಾಹಿತಿ ಪಡೆದರು.

Scheduled Castes national Commission Member  Dr Anju Bala spoke.
ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಸದಸ್ಯ ಡಾ ಅಂಜು ಬಾಲಾ ಮಾತನಾಡಿದರು.

ಮೈಸೂರು: ಪರಿಶಿಷ್ಟ ಜಾತಿ ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಅವು ಅರ್ಹ ಎಸ್ಸಿ ಸಮುದಾಯದ ಜನರಿಗೆ ತಲುಪುವಂತಾಗಬೇಕು. ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಗಳಾಗಬೇಕು ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಸದಸ್ಯೆ ಡಾ. ಅಂಜು ಬಾಲಾ ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಜನ್​​ಧನ್ ಯೋಜನೆಯಡಿ ಹಲವು ಉಪಯೋಗಗಳು ಇವೆ. ಈ ಯೋಜನೆಯಿಂದ ವಂಚಿತರಾದವರನ್ನು ಗುರುತಿಸಿ ಅವರಿಗೆ ಈ ಯೋಜನೆಗಳ ಲಾಭ ಸಿಗಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ವಿದ್ಯಾಭ್ಯಾಸ ಸಾಲದ ಬಗ್ಗೆ ಆದ್ಯತೆ ವಹಿಸಬೇಕು. ಪ್ರತಿಯೊಂದು ಸಾಲ​ಗಳು ಹೇಗೆ ತಿರಸ್ಕಾರ ಆಗುತ್ತಿದೆ ಮತ್ತೆ ಏಕೆ ಎಂಬುದನ್ನು ಒಂದು ವರದಿ ಸಲ್ಲಿಸಿ, ಸಭೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಪ್ರತಿಯೊಂದು ಸಭೆಯಲ್ಲೂ ಸರ್ಕಾರದ ಯೋಜನೆಗಳನ್ನು ಜಾರಿಗೆ ತಂದಿರುವ ಬಗ್ಗೆ ಮಾಹಿತಿ ಪಡೆಯಬೇಕಾಗುತ್ತದೆ. ಆಯೋಗವು ಮಾಹಿತಿ ಬೇಕಾದಾಗ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುತ್ತದೆ. ಪತ್ರಕ್ಕೆ 15 ದಿನದ ಒಳಗೆ ಉತ್ತರ ನೀಡಬೇಕು, ಇಲ್ಲವಾದರೆ ಇದರ ಪರಿಣಾಮ ಬೇರೆ ರೀತಿ ಇರುತ್ತದೆ ಎಂದು ಎಚ್ಚರಿಕೆ ನೀಡಿದರು.

ಆಯೋಗಕ್ಕೆ ಯಾರಿಗೂ ತೊಂದರೆ ನೀಡುವ ಉದ್ದೇಶವಿಲ್ಲ. ಆದರೆ ಅಧಿಕಾರಿಗಳು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಹಾಗೂ ನ್ಯಾಯಸಮ್ಮತವಾಗಿ ಮಾಡಬೇಕು. ಪೊಲೀಸ್ ಇಲಾಖೆಯಿಂದ ಕಳೆದ ಬಾರಿ ಪ್ರಗತಿಪರಿಶೀಲನಾ ಸಭೆಯಲ್ಲಿ ನೋಡಿದಂತೆ ಈ ಬಾರಿ ಅನೇಕ ಬದಲಾವಣೆಗಳಾಗಿದ್ದು, ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಅವರು ಶ್ಲಾಘಿಸಿದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಜನನಿ ಸುರಕ್ಷಾ ಯೋಜನೆಯಡಿ 2020-21 ನೇ ಸಾಲಿನಲ್ಲಿ 21,076 ಫಲಾನುಭವಿಗಳಿದ್ದು, ಶೇ.25 ರಷ್ಟು ಫಲಾನುಭವಿಗಳು ಪರಿಶಿಷ್ಟ ಜಾತಿಯವರು ಇದ್ದಾರೆ. 2022-23 ನೇ ಸಾಲಿಗೆ 9,131 ಫಲಾನುಭವಿಗಳಿದ್ದು ಅದರಲ್ಲಿ 1,944 ಜನ ಪರಿಶಿಷ್ಟ ಜಾತಿಯವರು ಇದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್ ತಿಳಿಸಿದರು.

ನವೆಂಬರ್ ಮತ್ತು ಡಿಸೆಂಬರ್​​ನಲ್ಲಿ ಮತ್ತೊಂದು ಸಭೆ ನಡೆಯಲಿದೆ.ಅದಕ್ಕೆ ಆಯೋಗದ ಅಧ್ಯಕ್ಷರು ಭಾಗಿಯಾಗುವರು. ಆ ಸಭೆಯಲ್ಲಿ ಪ್ರತಿಯೊಬ್ಬರನ್ನು ಪ್ರಶ್ನಿಸಲಾಗುವುದು. ಎಲ್ಲದಕ್ಕೂ ತಯಾರಿ ಮಾಡಿಕೊಳ್ಳಿ ಇಂದಿನ ಸಭೆ ಮಾದರಿಯಲ್ಲಿ ಸಭೆಯಾಗಿದ್ದು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಿ ಎಂದರು.

ಸಭೆಯಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳನ್ನು ಪರಿಶೀಲಿಸಿದ ನಂತರ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ‌ ಅವರು ಶಾಲೆಗಳಲ್ಲಿ ದಾಖಲಾತಿ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ. ಕಡಿಮೆಯಾದರೆ ಅದರ ಬಗ್ಗೆ ವಿಶೇಷವಾಗಿ ಸಭೆ ನಡೆಸಿ ಏಕೆ ಕಡಿಮೆಯೋಗುತ್ತಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ ಆದಿವಾಸಿಗಳ ಸಂಖ್ಯೆಯು ಹೆಚ್ಚಿದ್ದು ಅಲ್ಲಿ ಮಕ್ಕಳು ಶಾಲೆಗೆ ಏಕೆ ಬರುತ್ತಿಲ್ಲ ಎಂಬುದರ ಬಗ್ಗೆ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುತ್ತಿದೆ. ಪ್ರತಿಷ್ಠಿತ ಶಾಲೆಗಳ‌ ಸ್ಕೀಮ್ ಗಳಡಿ ಶಾಲೆಗಳನ್ನು ಗುರುತಿಸಿ ಅಲ್ಲಿಗೆ ಎಸ್ಸಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಸಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಯಲ್ಲಿ ಎಷ್ಟು ಮನೆಗಳು ಮಂಜೂರಾಗಿವೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡು ಆಯೋಗಕ್ಕೆ ಜಿಲ್ಲಾಧಿಕಾರಿ ಸಮಗ್ರವಾಗಿ ಮಾಹಿತಿ ನೀಡಿದರು. ಅದರಂತೆ 2021 ಮತ್ತು 22ನೇ ಸಾಲಿನಲ್ಲಿ 409 ಮನೆಗಳಿಗೆ ಗುರಿ ನೀಡಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ 297 ಮನೆಗಳು ಹಂಚಿಕೆಯಾಗಿದೆ.

ಮನೆಗಳ ನಿರ್ಮಾಣಕ್ಕೆ ರಾಜೀವ್ ಗಾಂಧಿ ಹೌಸ್ ಕಾರ್ಪೊರೇಷನ್ ಕಡೆಯಿಂದ ಸಹಾಯಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 1.50 ಲಕ್ಷ ರೂ ಹಾಗೂ ರಾಜ್ಯ ಸರ್ಕಾರದಿಂದ ಅಂಬೇಡ್ಕರ್ ವಸತಿ ಯೋಜನೆಯಡಿ 3.50 ಲಕ್ಷ ರೂ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು?: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಗೀತಾ ಶಿವರಾಜ್​ಕುಮಾರ್

ಮೈಸೂರು: ಪರಿಶಿಷ್ಟ ಜಾತಿ ಜನರ ಶ್ರೇಯೋಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಅವು ಅರ್ಹ ಎಸ್ಸಿ ಸಮುದಾಯದ ಜನರಿಗೆ ತಲುಪುವಂತಾಗಬೇಕು. ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಕಾರ್ಯಕ್ರಮಗಳಾಗಬೇಕು ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಸದಸ್ಯೆ ಡಾ. ಅಂಜು ಬಾಲಾ ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಜನ್​​ಧನ್ ಯೋಜನೆಯಡಿ ಹಲವು ಉಪಯೋಗಗಳು ಇವೆ. ಈ ಯೋಜನೆಯಿಂದ ವಂಚಿತರಾದವರನ್ನು ಗುರುತಿಸಿ ಅವರಿಗೆ ಈ ಯೋಜನೆಗಳ ಲಾಭ ಸಿಗಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ವಿದ್ಯಾಭ್ಯಾಸ ಸಾಲದ ಬಗ್ಗೆ ಆದ್ಯತೆ ವಹಿಸಬೇಕು. ಪ್ರತಿಯೊಂದು ಸಾಲ​ಗಳು ಹೇಗೆ ತಿರಸ್ಕಾರ ಆಗುತ್ತಿದೆ ಮತ್ತೆ ಏಕೆ ಎಂಬುದನ್ನು ಒಂದು ವರದಿ ಸಲ್ಲಿಸಿ, ಸಭೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಪ್ರತಿಯೊಂದು ಸಭೆಯಲ್ಲೂ ಸರ್ಕಾರದ ಯೋಜನೆಗಳನ್ನು ಜಾರಿಗೆ ತಂದಿರುವ ಬಗ್ಗೆ ಮಾಹಿತಿ ಪಡೆಯಬೇಕಾಗುತ್ತದೆ. ಆಯೋಗವು ಮಾಹಿತಿ ಬೇಕಾದಾಗ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯುತ್ತದೆ. ಪತ್ರಕ್ಕೆ 15 ದಿನದ ಒಳಗೆ ಉತ್ತರ ನೀಡಬೇಕು, ಇಲ್ಲವಾದರೆ ಇದರ ಪರಿಣಾಮ ಬೇರೆ ರೀತಿ ಇರುತ್ತದೆ ಎಂದು ಎಚ್ಚರಿಕೆ ನೀಡಿದರು.

ಆಯೋಗಕ್ಕೆ ಯಾರಿಗೂ ತೊಂದರೆ ನೀಡುವ ಉದ್ದೇಶವಿಲ್ಲ. ಆದರೆ ಅಧಿಕಾರಿಗಳು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಹಾಗೂ ನ್ಯಾಯಸಮ್ಮತವಾಗಿ ಮಾಡಬೇಕು. ಪೊಲೀಸ್ ಇಲಾಖೆಯಿಂದ ಕಳೆದ ಬಾರಿ ಪ್ರಗತಿಪರಿಶೀಲನಾ ಸಭೆಯಲ್ಲಿ ನೋಡಿದಂತೆ ಈ ಬಾರಿ ಅನೇಕ ಬದಲಾವಣೆಗಳಾಗಿದ್ದು, ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಅವರು ಶ್ಲಾಘಿಸಿದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಜನನಿ ಸುರಕ್ಷಾ ಯೋಜನೆಯಡಿ 2020-21 ನೇ ಸಾಲಿನಲ್ಲಿ 21,076 ಫಲಾನುಭವಿಗಳಿದ್ದು, ಶೇ.25 ರಷ್ಟು ಫಲಾನುಭವಿಗಳು ಪರಿಶಿಷ್ಟ ಜಾತಿಯವರು ಇದ್ದಾರೆ. 2022-23 ನೇ ಸಾಲಿಗೆ 9,131 ಫಲಾನುಭವಿಗಳಿದ್ದು ಅದರಲ್ಲಿ 1,944 ಜನ ಪರಿಶಿಷ್ಟ ಜಾತಿಯವರು ಇದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಸಾದ್ ತಿಳಿಸಿದರು.

ನವೆಂಬರ್ ಮತ್ತು ಡಿಸೆಂಬರ್​​ನಲ್ಲಿ ಮತ್ತೊಂದು ಸಭೆ ನಡೆಯಲಿದೆ.ಅದಕ್ಕೆ ಆಯೋಗದ ಅಧ್ಯಕ್ಷರು ಭಾಗಿಯಾಗುವರು. ಆ ಸಭೆಯಲ್ಲಿ ಪ್ರತಿಯೊಬ್ಬರನ್ನು ಪ್ರಶ್ನಿಸಲಾಗುವುದು. ಎಲ್ಲದಕ್ಕೂ ತಯಾರಿ ಮಾಡಿಕೊಳ್ಳಿ ಇಂದಿನ ಸಭೆ ಮಾದರಿಯಲ್ಲಿ ಸಭೆಯಾಗಿದ್ದು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಿ ಎಂದರು.

ಸಭೆಯಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳನ್ನು ಪರಿಶೀಲಿಸಿದ ನಂತರ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ‌ ಅವರು ಶಾಲೆಗಳಲ್ಲಿ ದಾಖಲಾತಿ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ. ಕಡಿಮೆಯಾದರೆ ಅದರ ಬಗ್ಗೆ ವಿಶೇಷವಾಗಿ ಸಭೆ ನಡೆಸಿ ಏಕೆ ಕಡಿಮೆಯೋಗುತ್ತಿದೆ ಎನ್ನುವುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ ಆದಿವಾಸಿಗಳ ಸಂಖ್ಯೆಯು ಹೆಚ್ಚಿದ್ದು ಅಲ್ಲಿ ಮಕ್ಕಳು ಶಾಲೆಗೆ ಏಕೆ ಬರುತ್ತಿಲ್ಲ ಎಂಬುದರ ಬಗ್ಗೆ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲಾಗುತ್ತಿದೆ. ಪ್ರತಿಷ್ಠಿತ ಶಾಲೆಗಳ‌ ಸ್ಕೀಮ್ ಗಳಡಿ ಶಾಲೆಗಳನ್ನು ಗುರುತಿಸಿ ಅಲ್ಲಿಗೆ ಎಸ್ಸಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಸಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜಿಲ್ಲೆಯಲ್ಲಿ ಎಷ್ಟು ಮನೆಗಳು ಮಂಜೂರಾಗಿವೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡು ಆಯೋಗಕ್ಕೆ ಜಿಲ್ಲಾಧಿಕಾರಿ ಸಮಗ್ರವಾಗಿ ಮಾಹಿತಿ ನೀಡಿದರು. ಅದರಂತೆ 2021 ಮತ್ತು 22ನೇ ಸಾಲಿನಲ್ಲಿ 409 ಮನೆಗಳಿಗೆ ಗುರಿ ನೀಡಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ 297 ಮನೆಗಳು ಹಂಚಿಕೆಯಾಗಿದೆ.

ಮನೆಗಳ ನಿರ್ಮಾಣಕ್ಕೆ ರಾಜೀವ್ ಗಾಂಧಿ ಹೌಸ್ ಕಾರ್ಪೊರೇಷನ್ ಕಡೆಯಿಂದ ಸಹಾಯಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ 1.50 ಲಕ್ಷ ರೂ ಹಾಗೂ ರಾಜ್ಯ ಸರ್ಕಾರದಿಂದ ಅಂಬೇಡ್ಕರ್ ವಸತಿ ಯೋಜನೆಯಡಿ 3.50 ಲಕ್ಷ ರೂ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು?: ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಗೀತಾ ಶಿವರಾಜ್​ಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.