ETV Bharat / state

ಮನೆಬಿಟ್ಟು ಹೋಗುತ್ತೀನಿ ಎಂದಿದ್ದಕ್ಕೆ ಪ್ರಿಯತಮೆಯ ಕೊಂದ ಪ್ರಿಯಕರ

author img

By

Published : Apr 16, 2021, 9:53 AM IST

ಪ್ರಿಯಕರ ಪ್ರಿಯತಮೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಬೆಳವಾಡಿಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Man killed his Lover in mysore
ಮನೆಬಿಟ್ಟು ಹೋಗುತ್ತೀನಿ ಎಂದಿದ್ದಕ್ಕೆ ಪ್ರಿಯತಮೆಯ ಕೊಂದ ಪ್ರಿಯಕರ

ಮೈಸೂರು: ವಿಪರೀತ ಕಿರುಕುಳದಿಂದ ಬೇಸತ್ತು, ಮನೆಬಿಟ್ಟು ಹೋಗುತ್ತೀನಿ ಎಂದು ಹೇಳಿದ್ದಕ್ಕೆ ಕೋಪಗೊಂಡ ಪ್ರಿಯಕರ ಪ್ರಿಯತಮೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಮೈಸೂರು ತಾಲ್ಲೂಕಿನ ಬೆಳವಾಡಿಯಲ್ಲಿ ನಡೆದಿದೆ.

ಬೆಳವಾಡಿಯಲ್ಲಿ 25 ವರ್ಷದ ಯುವತಿಯ ಮೇಲೆ ಕಿರಣ್ (27) ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ.

ಪ್ರಕರಣದ ವಿವರ

ಹೆಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಯುವತಿ ಪತಿಯನ್ನು ತೊರೆದು ಕಳೆದ 8 ತಿಂಗಳಿನಿಂದ ಅತ್ತೆಯ ಮಗ ಕಿರಣ್ ಜತೆ ವಾಸವಿದ್ದಳು. ಆದರೆ ಕಿರಣ್​ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಆಕೆ ನಿನ್ನನ್ನು ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಕಿರಣ್​ ಆಕೆಯ ತಲೆಗೆ ಮಚ್ಚಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ.

ಈ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿರೋಧದ ನಡುವೆ ಪ್ರೀತಿಸಿ ಮದುವೆ; ಪತ್ನಿ ಕೊಂದು ನೇಣಿಗೆ ಶರಣಾದ ಪತಿ

ಮೈಸೂರು: ವಿಪರೀತ ಕಿರುಕುಳದಿಂದ ಬೇಸತ್ತು, ಮನೆಬಿಟ್ಟು ಹೋಗುತ್ತೀನಿ ಎಂದು ಹೇಳಿದ್ದಕ್ಕೆ ಕೋಪಗೊಂಡ ಪ್ರಿಯಕರ ಪ್ರಿಯತಮೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಮೈಸೂರು ತಾಲ್ಲೂಕಿನ ಬೆಳವಾಡಿಯಲ್ಲಿ ನಡೆದಿದೆ.

ಬೆಳವಾಡಿಯಲ್ಲಿ 25 ವರ್ಷದ ಯುವತಿಯ ಮೇಲೆ ಕಿರಣ್ (27) ಎಂಬ ಯುವಕ ಈ ಕೃತ್ಯ ಎಸಗಿದ್ದಾನೆ.

ಪ್ರಕರಣದ ವಿವರ

ಹೆಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಯುವತಿ ಪತಿಯನ್ನು ತೊರೆದು ಕಳೆದ 8 ತಿಂಗಳಿನಿಂದ ಅತ್ತೆಯ ಮಗ ಕಿರಣ್ ಜತೆ ವಾಸವಿದ್ದಳು. ಆದರೆ ಕಿರಣ್​ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಆಕೆ ನಿನ್ನನ್ನು ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಕಿರಣ್​ ಆಕೆಯ ತಲೆಗೆ ಮಚ್ಚಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ.

ಈ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿರೋಧದ ನಡುವೆ ಪ್ರೀತಿಸಿ ಮದುವೆ; ಪತ್ನಿ ಕೊಂದು ನೇಣಿಗೆ ಶರಣಾದ ಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.