ಮೈಸೂರು: ಕೊರೊನಾ ತಡೆಗಟ್ಟಲು ಸಾಧ್ಯವಿಲ್ಲದ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಕಾಂಗ್ರೆಸ್ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.
ಇಂದು ನಗರ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪೊಜಿಷನ್ಗಾಗಿ ಪೈಪೋಟಿ ನಡೆಸುತ್ತಿದ್ದಾರೆ ಆರ್. ಅಶೋಕ್ ಹೇಳುವುದು ಸರಿಯಲ್ಲ. ಇಬ್ಬರೂ ನಮ್ಮ ನಾಯಕರು, ಅವರ ಬಗ್ಗೆ ಸಚಿವ ಅಶೋಕ್ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಎರಡು ಮೂರು ತಿಂಗಳಿನಲ್ಲಿ ನಿಮ್ಮನ್ನು ತೆಗೆದು ಹೊಸಬರಿಗೆ ಮಂತ್ರಿ ಸ್ಥಾನ ಕೊಡುತ್ತಾರೆ. ಅದಕ್ಕಾಗಿ ನಿಮ್ಮ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ವಿರುದ್ಧ ಮಾತನಾಡುತ್ತಿದ್ದೀರಿ. ಕೊರೊನಾ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ದೇಶದಲ್ಲೇ ಅತೀ ಹೆಚ್ಚು ಸಾಯುವವರ ಸಂಖ್ಯೆ ಕರ್ನಾಟಕದಲ್ಲಿ ಇದೆ. ಅದನ್ನು ಸರಿಯಾಗಿ ನಿರ್ವಹಣೆ ಮಾಡಿ ಎಂದು ಎಂ. ಲಕ್ಷ್ಮಣ್ ಬಿಜೆಪಿ ವಿರುದ್ಧ ಹರಿಹಾಯ್ದರು.