ETV Bharat / state

ಮಗಳಿಗೆ ಮದುವೆ ಮಾಡಲು ಹೊರಟ ಅಪ್ಪ : ಬಾಲಕಿ ಆತ್ಮಹತ್ಯೆ ಯತ್ನ

author img

By

Published : Dec 21, 2020, 2:09 PM IST

ಅಪ್ರಾಪ್ತ ಬಾಲಕಿಯೋರ್ವಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಯತ್ನ
Minor Girl trying to committed suicide at Mysore

ಮೈಸೂರು: ಮದುವೆ ಮಾಡಲು ಹೊರಟ ಅಪ್ಪನ ನಡೆಯಿಂದ ಬೇಸತ್ತ ಅಪ್ರಾಪ್ತ ಬಾಲಕಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

Publics handover girl to police
ಬಾಲಕಿಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಚಾಮರಾಜನಗರ ಜಿಲ್ಲೆಯ ತಾವರೆಕಟ್ಟೆ ಮೋಳೆ ಗ್ರಾಮದ ಸಿದ್ದಶೆಟ್ಟಿ ಎಂಬುವರ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ. ಈಕೆಯ ತಂದೆ ಮಗಳನ್ನು ಶಾಲೆ ಬಿಡಿಸಿ ಮದುವೆ ಮಾಡಲು ಮುಂದಾಗಿದ್ದರು. ತಂದೆಯ ಈ ವರ್ತನೆಯಿಂದ ಬೇಸತ್ತ ಬಾಲಕಿ ತಿ.ನರಸೀಪುರದ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಇರುವ ನದಿಗೆ ಹಾರಲು ಯತ್ನಿಸಿದ್ದಳು.

ಓದಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ

ಇದನ್ನು ಕಂಡ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ತಿ.ನರಸೀಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್​ ಅಧಿಕಾರಿಗಳು ಈಕೆಯ ಪೋಷಕರನ್ನು ಕರೆಸಿ ಬಾಲಕಿಗೆ ವಿದ್ಯಾಭ್ಯಾಸ ನೀಡುವಂತೆ ತಿಳಿವಳಿಕೆ ಹೇಳಿ ಪೋಷಕರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ಮೈಸೂರು: ಮದುವೆ ಮಾಡಲು ಹೊರಟ ಅಪ್ಪನ ನಡೆಯಿಂದ ಬೇಸತ್ತ ಅಪ್ರಾಪ್ತ ಬಾಲಕಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.

Publics handover girl to police
ಬಾಲಕಿಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಚಾಮರಾಜನಗರ ಜಿಲ್ಲೆಯ ತಾವರೆಕಟ್ಟೆ ಮೋಳೆ ಗ್ರಾಮದ ಸಿದ್ದಶೆಟ್ಟಿ ಎಂಬುವರ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ. ಈಕೆಯ ತಂದೆ ಮಗಳನ್ನು ಶಾಲೆ ಬಿಡಿಸಿ ಮದುವೆ ಮಾಡಲು ಮುಂದಾಗಿದ್ದರು. ತಂದೆಯ ಈ ವರ್ತನೆಯಿಂದ ಬೇಸತ್ತ ಬಾಲಕಿ ತಿ.ನರಸೀಪುರದ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಇರುವ ನದಿಗೆ ಹಾರಲು ಯತ್ನಿಸಿದ್ದಳು.

ಓದಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ಯುವತಿ ಮೇಲೆ ಭಗ್ನ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ

ಇದನ್ನು ಕಂಡ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ತಿ.ನರಸೀಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್​ ಅಧಿಕಾರಿಗಳು ಈಕೆಯ ಪೋಷಕರನ್ನು ಕರೆಸಿ ಬಾಲಕಿಗೆ ವಿದ್ಯಾಭ್ಯಾಸ ನೀಡುವಂತೆ ತಿಳಿವಳಿಕೆ ಹೇಳಿ ಪೋಷಕರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.