ETV Bharat / state

ನನಗೆ ಬಂದ ಅಧಿಕಾರ ಅಲ್ಲ, ಸಚಿವರು ಸೂಚನೆ ನೀಡಿದ್ದಕ್ಕೆ ಕೆಲಸ ಮಾಡುತ್ತಿದ್ದೇನೆ: ರಾಮದಾಸ್

author img

By

Published : May 20, 2021, 4:01 PM IST

ಖಾಸಗಿ ಕೋವಿಡ್​ ಸೆಂಟರ್ ಮುಚ್ಚಲು​ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿರುವ ಶಾಸಕ ಸಾರಾ ಮಹೇಶ್​ ಹೇಳಿಕೆಗೆ ಶಾಸಕ ಎಸ್.ಎ.ರಾಮದಾಸ್ ತೀರುಗೇಟು ನೀಡಿದ್ದಾರೆ. ಅಲ್ಲಿರುವ ಅವ್ಯವಸ್ಥೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದು ಜಿಲ್ಲಾ ಉಸ್ತುವಾರಿ ಸಚಿವರು ನನಗೆ ಕೊಟ್ಟಿರುವ ಕರ್ತವ್ಯ ಎಂದಿದ್ದಾರೆ.

mla  SA Ramadas responds to the statement of MLA Mahesh
ರಾಮದಾಸ್

ಮೈಸೂರು: ಸಚಿವರು ಸೂಚನೆ ನೀಡಿದ ಕಾರಣಕ್ಕೆ ನಾನು ಸಲಹೆಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಇದು ನನಗೆ ಬಂದ ಅಧಿಕಾರ ಅಲ್ಲ, ನನ್ನ ಜಿಲ್ಲೆಯ ಕರ್ತವ್ಯ ಎಂದು ಶಾಸಕ ಎಸ್.ಎ. ರಾಮದಾಸ್ ಹೇಳಿದ್ದಾರೆ.

ರಾಮದಾಸ್

ಮೈಸೂರಿನಲ್ಲಿ 16 ಕೋವಿಡ್ ಸೆಂಟರುಗಳನ್ನು ಮುಚ್ಚಲು ಅನುಮತಿ ನೀಡಲಾಗಿದೆ ಎಂಬ ಶಾಸಕ ಸಾ.ರಾ. ಮಹೇಶ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಾಸಕ‌ ಎಸ್.ಎ. ರಾಮದಾಸ್, ಒಂದು ವಾರದ ಹಿಂದೆಯೇ ಅವ್ಯವಸ್ಥೆ ಬಗ್ಗೆ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸೂಚನೆ ನೀಡಲಾಗಿತ್ತು. ಇದನ್ನ ಗಮನಿಸಿ ಖುದ್ದು ನಾನೇ ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದೆ. ಈ ವೇಳೆ ಸಾಕಷ್ಟು ಲೋಪದೋಷ ಕಂಡು ಬಂತು. ಆಸ್ಪತ್ರೆಯಿಂದ ಬಂದ ಕೆಲವೇ ಕ್ಷಣದಲ್ಲಿ ಕರೆ ಬಂತು. ನಂತರ ಎಲ್ಲರೂ ಸರಿಯಾದ ಮಾಹಿತಿ ಕೊಟ್ಟರು. ನಮ್ಮ ಉದ್ದೇಶ ಬಡ ಜನರಿಗೆ ಸರಿಯಾದ ಚಿಕಿತ್ಸೆ ಸಿಗುವುದು. ಅದು ಸರ್ಕಾರಿ ಕೋಟಾದ ದುರ್ಬಳಕೆ ಆಗಬಾರದೆಂಬುದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಕೋವಿಡ್ ಕೇರ್ ಸೆಂಟರ್‌ಗಳ ಅನುಮತಿ ರದ್ದತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ರಾಮದಾಸ್,​ ಖಾಸಗಿ ಆಸ್ಪತ್ರೆಗಳು ಹಣ ಮಾಡುವ ದಂಧೆಗಾಗಿ ಕೇರ್ ಸೆಂಟರ್ ನಡೆಸುತ್ತಿವೆ. ಇದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದು ನಿಜ. ನಾನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಲ್ಲಿ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್ ಧರಿಸುತ್ತಿಲ್ಲ. ಇರುವ ಒಂದೇ ಲಿಫ್ಟ್​ನಲ್ಲಿ ರೋಗಿಗಳು, ಹೆಲ್ತ್ ವರ್ಕರ್, ಜನ ಸಾಮಾನ್ಯರು ಓಡಾಡಬೇಕು. ಇಂತಹ ಅವ್ಯವಸ್ಥೆ ತಪ್ಪಿಸಬೇಕು ಅನ್ನೋದು ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರು: ಸಚಿವರು ಸೂಚನೆ ನೀಡಿದ ಕಾರಣಕ್ಕೆ ನಾನು ಸಲಹೆಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಇದು ನನಗೆ ಬಂದ ಅಧಿಕಾರ ಅಲ್ಲ, ನನ್ನ ಜಿಲ್ಲೆಯ ಕರ್ತವ್ಯ ಎಂದು ಶಾಸಕ ಎಸ್.ಎ. ರಾಮದಾಸ್ ಹೇಳಿದ್ದಾರೆ.

ರಾಮದಾಸ್

ಮೈಸೂರಿನಲ್ಲಿ 16 ಕೋವಿಡ್ ಸೆಂಟರುಗಳನ್ನು ಮುಚ್ಚಲು ಅನುಮತಿ ನೀಡಲಾಗಿದೆ ಎಂಬ ಶಾಸಕ ಸಾ.ರಾ. ಮಹೇಶ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಾಸಕ‌ ಎಸ್.ಎ. ರಾಮದಾಸ್, ಒಂದು ವಾರದ ಹಿಂದೆಯೇ ಅವ್ಯವಸ್ಥೆ ಬಗ್ಗೆ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸೂಚನೆ ನೀಡಲಾಗಿತ್ತು. ಇದನ್ನ ಗಮನಿಸಿ ಖುದ್ದು ನಾನೇ ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿದೆ. ಈ ವೇಳೆ ಸಾಕಷ್ಟು ಲೋಪದೋಷ ಕಂಡು ಬಂತು. ಆಸ್ಪತ್ರೆಯಿಂದ ಬಂದ ಕೆಲವೇ ಕ್ಷಣದಲ್ಲಿ ಕರೆ ಬಂತು. ನಂತರ ಎಲ್ಲರೂ ಸರಿಯಾದ ಮಾಹಿತಿ ಕೊಟ್ಟರು. ನಮ್ಮ ಉದ್ದೇಶ ಬಡ ಜನರಿಗೆ ಸರಿಯಾದ ಚಿಕಿತ್ಸೆ ಸಿಗುವುದು. ಅದು ಸರ್ಕಾರಿ ಕೋಟಾದ ದುರ್ಬಳಕೆ ಆಗಬಾರದೆಂಬುದಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಕೋವಿಡ್ ಕೇರ್ ಸೆಂಟರ್‌ಗಳ ಅನುಮತಿ ರದ್ದತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ರಾಮದಾಸ್,​ ಖಾಸಗಿ ಆಸ್ಪತ್ರೆಗಳು ಹಣ ಮಾಡುವ ದಂಧೆಗಾಗಿ ಕೇರ್ ಸೆಂಟರ್ ನಡೆಸುತ್ತಿವೆ. ಇದನ್ನು ತಪ್ಪಿಸುವ ಸಲುವಾಗಿ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದು ನಿಜ. ನಾನು ಕೋವಿಡ್ ಕೇರ್ ಸೆಂಟರ್‌ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಅಲ್ಲಿ ವೈದ್ಯಕೀಯ ಸಿಬ್ಬಂದಿ ಪಿಪಿಇ ಕಿಟ್ ಧರಿಸುತ್ತಿಲ್ಲ. ಇರುವ ಒಂದೇ ಲಿಫ್ಟ್​ನಲ್ಲಿ ರೋಗಿಗಳು, ಹೆಲ್ತ್ ವರ್ಕರ್, ಜನ ಸಾಮಾನ್ಯರು ಓಡಾಡಬೇಕು. ಇಂತಹ ಅವ್ಯವಸ್ಥೆ ತಪ್ಪಿಸಬೇಕು ಅನ್ನೋದು ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.