ETV Bharat / state

ನಾನು ಸಚಿವ ಸ್ಥಾನದ ರೇಸ್​​ನಲ್ಲಿ‌ ಇಲ್ಲ: ಹೆಚ್.​ ವಿಶ್ವನಾಥ್ - ಮೈಸೂರಿನಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎಂಎಲ್‌ಸಿ ಎಚ್‌ ವಿಶ್ವನಾಥ್‌ ಹೇಳಿಕೆ

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ‌ಈ ಬಾರಿ‌ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿ. ಹಿರಿಯರಾದ ಎಸ್​ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಕೇಳುತ್ತೇನೆ ಎಂದು ವಿಧಾನ ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್ ಹೇಳಿದ್ದಾರೆ.‌

ಮೈಸೂರಿನಲ್ಲಿಎಂಎಲ್‌ಸಿ ಎಚ್‌ ವಿಶ್ವನಾಥ್‌ ಹೇಳಿಕೆ
ಮೈಸೂರಿನಲ್ಲಿಎಂಎಲ್‌ಸಿ ಎಚ್‌ ವಿಶ್ವನಾಥ್‌ ಹೇಳಿಕೆ
author img

By

Published : Jan 24, 2022, 5:41 PM IST

ಮೈಸೂರು: ನಾನು ಸಚಿವ ಸ್ಥಾನದ ರೇಸ್​​ನಲ್ಲಿ ಇಲ್ಲ. ಮೈಸೂರು ಭಾಗಕ್ಕೆ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಎಂಎಲ್‌ಸಿ ಎಚ್‌ ವಿಶ್ವನಾಥ್‌ ಹೇಳಿಕೆ

ಜಿಲ್ಲಾ ಪಂಚಾಯತ್​ನಲ್ಲಿ ಸಚಿವರ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ‌ಈ ಬಾರಿ‌ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿ. ಹಿರಿಯರಾದ ಎಸ್​ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸುತ್ತೇನೆ ಎಂದರು.‌

ಸುಧಾರಣೆಗಾಗಿ ಬದಲಾವಣೆಯಾಗಬೇಕು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ. ಇದರ ಜೊತೆ ಮೈಸೂರು ಭಾಗದಿಂದ ಸಚಿವ ಸ್ಥಾನಕ್ಕಾಗಿ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ್​ ಪ್ರಸಾದ್ ಅವರ ಅಳಿಯ ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್ ಮಂತ್ರಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದು, ವಿಶ್ವನಾಥ್ ಅವರ ಹೇಳಿಕೆ ಈಗ ಮಹತ್ವ ಪಡೆದಿದೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮೈಸೂರು: ನಾನು ಸಚಿವ ಸ್ಥಾನದ ರೇಸ್​​ನಲ್ಲಿ ಇಲ್ಲ. ಮೈಸೂರು ಭಾಗಕ್ಕೆ ಈ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಎಂಎಲ್‌ಸಿ ಎಚ್‌ ವಿಶ್ವನಾಥ್‌ ಹೇಳಿಕೆ

ಜಿಲ್ಲಾ ಪಂಚಾಯತ್​ನಲ್ಲಿ ಸಚಿವರ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ‌ಈ ಬಾರಿ‌ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮೈಸೂರು ಭಾಗಕ್ಕೆ ಒಂದು ಸಚಿವ ಸ್ಥಾನ ನೀಡಿ. ಹಿರಿಯರಾದ ಎಸ್​ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸುತ್ತೇನೆ ಎಂದರು.‌

ಸುಧಾರಣೆಗಾಗಿ ಬದಲಾವಣೆಯಾಗಬೇಕು, ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಭಿ ನಡೆಸುತ್ತಿದ್ದಾರೆ. ಇದರ ಜೊತೆ ಮೈಸೂರು ಭಾಗದಿಂದ ಸಚಿವ ಸ್ಥಾನಕ್ಕಾಗಿ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ್​ ಪ್ರಸಾದ್ ಅವರ ಅಳಿಯ ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್ ಮಂತ್ರಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದು, ವಿಶ್ವನಾಥ್ ಅವರ ಹೇಳಿಕೆ ಈಗ ಮಹತ್ವ ಪಡೆದಿದೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.