ಮೈಸೂರು: ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ವೃದ್ಧನನ್ನು ಕೊಲೆ ಮಾಡಿ ನಾಲೆಗೆ ಎಸೆದಿದ್ದ ಆರೋಪಿಗಳನ್ನು ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ನಂಜನಗೂಡು ಗೌಡರಹುಂಡಿ ಗ್ರಾಮದ ಶಿವರಾಜಪ್ಪ (60) ಕೊಲೆಯಾದ ವ್ಯಕ್ತಿ. ನಾಲ್ಕೈದು ದಿನಗಳ ಹಿಂದೆ ಮೃತ ವ್ಯಕ್ತಿಯ ಕುಟುಂಬಸ್ಥರು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ ಶಿವರಾಜಪ್ಪ ಮೃತದೇಹ ಹುಲ್ಲಹಳ್ಳಿ ಬಿದರಗೂಡು ಸಮೀಪದ ನಾಲೆಯಲ್ಲಿ ಪತ್ತೆಯಾಗಿತ್ತು.
![Murder accused arrested in Mysuru](https://etvbharatimages.akamaized.net/etvbharat/prod-images/11997239_t.jpg)
ಸದ್ಯ, ಕೊಲೆ ಆರೋಪಿಗಳಾದ ಶರತ್ ಕುಮಾರ್ ಮತ್ತು ಸುದರ್ಶನ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿ ವಿಚಾರವಾಗಿ ಮೃತ ವೃದ್ಧನ ಹೆಂಡತಿಯ ಸಂಬಂಧಿಕರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.