ETV Bharat / state

ರಾಜ್ಯದ ನೂರು ದೇವಾಲಯಗಳಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ: ಶ್ರೀನಿವಾಸ ಪೂಜಾರಿ

ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗಿನಿಂದ ಹಿಂದೂ ಧಾರ್ಮಿಕ ದತ್ತಿ ವತಿಯಿಂದ ಬರುವ ಆರ್ಥಿಕ ಸಂಪನ್ಮೂಲವನ್ನು ಕ್ರೂಢೀಕರಿಸಿ ಅದೇ ದೇವಾಲಯಗಳ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

author img

By

Published : Feb 2, 2020, 7:38 PM IST

Kota Srinivasa Poojary
ರಾಜ್ಯದ ನೂರು ದೇವಾಲಯಗಳಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ: ಶ್ರೀನಿವಾಸ ಪೂಜಾರಿ

ಮೈಸೂರು: ಹಿಂದೂ ದೇವಾಲಯಗಳಿಂದ ಬರುವ ಆರ್ಥಿಕ ಸಂಪನ್ಮೂಲಗಳನ್ನು ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ರಾಜ್ಯದ ನೂರು ದೇವಾಲಯಗಳಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ: ಶ್ರೀನಿವಾಸ ಪೂಜಾರಿ

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗಿನಿಂದ ಹಿಂದೂ ಧಾರ್ಮಿಕ ದತ್ತಿ ವತಿಯಿಂದ ಬರುವ ಆರ್ಥಿಕ ಸಂಪನ್ಮೂಲವನ್ನು ಕ್ರೂಢೀಕರಿಸಿ ಅದೇ ದೇವಾಲಯಗಳ ಅಭಿವೃದ್ಧಿಗೆ ಮುಂದಾಗಿದ್ದೇವೆ. ಇತರೆ ಯಾವುದೇ ಧರ್ಮದ ದೇವಾಲಯಗಳ ಅಭಿವೃದ್ಧಿಗೆ ಈ ಹಣ ಬಳಕೆ ಮಾಡುವುದಿಲ್ಲ. ಅಲ್ಪಸಂಖ್ಯಾತ ದೇವಾಲಯದ ಅಭಿವೃದ್ಧಿಗೆ ಸರ್ಕಾರದಿಂದ ಹಣ ಬಿಡುಗಡೆಗೊಳಿಸಲಿದ್ದೇವೆ ಎಂದರು.

ಈಗಾಗಲೇ ಸಾರ್ವಜನಿಕರಲ್ಲಿ ಗೊಂದಲ ನಿರ್ಮಾಣಗೊಂಡಿದ್ದು, ಈ ಮೂಲಕ ಈ ಗೊಂದಲವನ್ನು ನಿವಾರಿಸಿದ್ದೀವಿ. ರಾಜ್ಯದಲ್ಲಿ ಇರುವ ಬಡವರಿಗೆ ಅನುಕೂಲವಾಗಲೆಂದೇ ರಾಜ್ಯದ ಪ್ರಮುಖ ದೇವಾಲಗಳಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ.

ಇದರಿಂದ ಸಾಮಾಜಿಕವಾಗಿ ಆರ್ಥಿಕವಾಗಿ ಹಾಗೂ ಇನ್ನಿತರ ಸಮಸ್ಯೆಗಳು ಬಗೆಹರಿಯಲಿದೆ. ಸಾಮೂಹಿಕ ವಿವಾಹದಲ್ಲಿ ಅಂತರ್ ಜಾತಿ ವಿವಾಹಕ್ಕೂ ಪ್ರೋತ್ಸಾಹ ನೀಡಲಾಗುವುದು. ಎರಡು ಕುಟುಂಬಗಳ ಒಪ್ಪಿಗೆ ಇದ್ದರೆ ಸಾಮೂಹಿಕ ವಿವಾಹ ನೆರವೇರಿಸಲಾಗುವುದು. ಈ ವಿಚಾರದಲ್ಲಿ ಸರ್ಕಾರದ ಅಭ್ಯಂತರ ಇಲ್ಲ. ರಾಜ್ಯದ ನೂರು ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ. ಹೀಗಾಗಿ ಆಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದೆ ಎಂದರು.

ಕೇಂದ್ರದ ಬಜೆಟ್ ಕುರಿತು ಸಿದ್ದರಾಮಯ್ಯ ಟೀಕೆ ಕುರಿತು ಪ್ರತಿಕ್ರಿಯಿಸಿ ಅವರು, ಜನಪರ, ರೈತಪರ, ಬಜೆಟ್ ಎಂಬ ಹೇಳಿಕೆಯನ್ನು ಸಿದ್ದರಾಮಯ್ಯ ಅವರಿಂದ ನಿರೀಕ್ಷೆ ಮಾಡಲು ಸಾಧ್ಯವೆ. ಅವರು ವಿರೋಧ ಪಕ್ಷದ ನಾಯಕನಾಗಿ ಸಹಜವಾಗಿಯೇ ಟೀಕೆ ಮಾಡಿದ್ದಾರೆ. ಅವರ ಟೀಕೆಯನ್ನ ನಾವು ಸ್ವೀಕರಿಸಿದ್ದೇವೆ. ಇದು ಜನಪರ ಬಜೆಟ್ ಎಂದು ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಪ್ರತಿಪಕ್ಷದ ನಾಯಕನಾಗಿ ಈ ಮಾತನ್ನ ಹೇಳಿದ್ದಾರೆ. ನಿನ್ನೆ ಮಂಡನೆಗೊಂಡಿರುವ ಬಜೆಟ್ ದೀನದಲಿತ ಹಾಗೂ ಬಡವರ ಪರವಾದ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೂ ಈ ಬಜೆಟ್ ಪೂರಕವಾಗಿದೆ ಎಂದು ತಿಳಿಸಿದರು.

ಮೈಸೂರು: ಹಿಂದೂ ದೇವಾಲಯಗಳಿಂದ ಬರುವ ಆರ್ಥಿಕ ಸಂಪನ್ಮೂಲಗಳನ್ನು ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ರಾಜ್ಯದ ನೂರು ದೇವಾಲಯಗಳಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ: ಶ್ರೀನಿವಾಸ ಪೂಜಾರಿ

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗಿನಿಂದ ಹಿಂದೂ ಧಾರ್ಮಿಕ ದತ್ತಿ ವತಿಯಿಂದ ಬರುವ ಆರ್ಥಿಕ ಸಂಪನ್ಮೂಲವನ್ನು ಕ್ರೂಢೀಕರಿಸಿ ಅದೇ ದೇವಾಲಯಗಳ ಅಭಿವೃದ್ಧಿಗೆ ಮುಂದಾಗಿದ್ದೇವೆ. ಇತರೆ ಯಾವುದೇ ಧರ್ಮದ ದೇವಾಲಯಗಳ ಅಭಿವೃದ್ಧಿಗೆ ಈ ಹಣ ಬಳಕೆ ಮಾಡುವುದಿಲ್ಲ. ಅಲ್ಪಸಂಖ್ಯಾತ ದೇವಾಲಯದ ಅಭಿವೃದ್ಧಿಗೆ ಸರ್ಕಾರದಿಂದ ಹಣ ಬಿಡುಗಡೆಗೊಳಿಸಲಿದ್ದೇವೆ ಎಂದರು.

ಈಗಾಗಲೇ ಸಾರ್ವಜನಿಕರಲ್ಲಿ ಗೊಂದಲ ನಿರ್ಮಾಣಗೊಂಡಿದ್ದು, ಈ ಮೂಲಕ ಈ ಗೊಂದಲವನ್ನು ನಿವಾರಿಸಿದ್ದೀವಿ. ರಾಜ್ಯದಲ್ಲಿ ಇರುವ ಬಡವರಿಗೆ ಅನುಕೂಲವಾಗಲೆಂದೇ ರಾಜ್ಯದ ಪ್ರಮುಖ ದೇವಾಲಗಳಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ.

ಇದರಿಂದ ಸಾಮಾಜಿಕವಾಗಿ ಆರ್ಥಿಕವಾಗಿ ಹಾಗೂ ಇನ್ನಿತರ ಸಮಸ್ಯೆಗಳು ಬಗೆಹರಿಯಲಿದೆ. ಸಾಮೂಹಿಕ ವಿವಾಹದಲ್ಲಿ ಅಂತರ್ ಜಾತಿ ವಿವಾಹಕ್ಕೂ ಪ್ರೋತ್ಸಾಹ ನೀಡಲಾಗುವುದು. ಎರಡು ಕುಟುಂಬಗಳ ಒಪ್ಪಿಗೆ ಇದ್ದರೆ ಸಾಮೂಹಿಕ ವಿವಾಹ ನೆರವೇರಿಸಲಾಗುವುದು. ಈ ವಿಚಾರದಲ್ಲಿ ಸರ್ಕಾರದ ಅಭ್ಯಂತರ ಇಲ್ಲ. ರಾಜ್ಯದ ನೂರು ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ. ಹೀಗಾಗಿ ಆಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದ್ದೆ ಎಂದರು.

ಕೇಂದ್ರದ ಬಜೆಟ್ ಕುರಿತು ಸಿದ್ದರಾಮಯ್ಯ ಟೀಕೆ ಕುರಿತು ಪ್ರತಿಕ್ರಿಯಿಸಿ ಅವರು, ಜನಪರ, ರೈತಪರ, ಬಜೆಟ್ ಎಂಬ ಹೇಳಿಕೆಯನ್ನು ಸಿದ್ದರಾಮಯ್ಯ ಅವರಿಂದ ನಿರೀಕ್ಷೆ ಮಾಡಲು ಸಾಧ್ಯವೆ. ಅವರು ವಿರೋಧ ಪಕ್ಷದ ನಾಯಕನಾಗಿ ಸಹಜವಾಗಿಯೇ ಟೀಕೆ ಮಾಡಿದ್ದಾರೆ. ಅವರ ಟೀಕೆಯನ್ನ ನಾವು ಸ್ವೀಕರಿಸಿದ್ದೇವೆ. ಇದು ಜನಪರ ಬಜೆಟ್ ಎಂದು ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಪ್ರತಿಪಕ್ಷದ ನಾಯಕನಾಗಿ ಈ ಮಾತನ್ನ ಹೇಳಿದ್ದಾರೆ. ನಿನ್ನೆ ಮಂಡನೆಗೊಂಡಿರುವ ಬಜೆಟ್ ದೀನದಲಿತ ಹಾಗೂ ಬಡವರ ಪರವಾದ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೂ ಈ ಬಜೆಟ್ ಪೂರಕವಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.