ETV Bharat / state

ಹೊಸ ವರ್ಷಾಚರಣೆಗೆ ಕ್ಷಣಗಣನೆ: ಮೈಸೂರಿನಲ್ಲಿ ಡಿಜೆಗೆ ಅನುಮತಿ ಇಲ್ಲ ಎಂದ ಕಮಿಷನರ್​

author img

By

Published : Dec 26, 2022, 5:33 PM IST

Updated : Dec 26, 2022, 5:53 PM IST

ಹೊಸ ವರ್ಷದ ಸಂಭ್ರಮಕ್ಕಿಲ್ಲ ಡಿಜೆ - ಮೈಸೂರಿನಲ್ಲಿ ಕಮಿಷನರ್​ ಹೇಳಿಕೆ - ರಾಜ್ಯ ಸರ್ಕಾರದ ಮಾರ್ಗಸೂಚಿಯನುಸಾರ ಕ್ರಮ

mysore commissioner
ರಮೇಶ್​ ಭಾನೋತ್​
ನಗರ ಪೊಲೀಸ್​ ಆಯುಕ್ತ ರಮೇಶ್​ ಭಾನೋತ್​ ಹೇಳಿಕೆ

ಮೈಸೂರು: ಇನ್ನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರಲಿದೆ. ಈ ಹಿನ್ನೆಲೆ ನಗರದಲ್ಲಿ ಡಿಜೆಗೆ ಅವಕಾಶವಿಲ್ಲ. ರಾಜ್ಯ ಸರ್ಕಾರದಿಂದ ಬರುವ ಮಾರ್ಗಸೂಚಿಯ ಅನುಸಾರ ನಿರ್ಬಂಧ ಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್​ ಆಯುಕ್ತ ರಮೇಶ್​ ಭಾನೋತ್​ ಹೇಳಿಕೆ ನೀಡಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಡಿಜೆಗೆ ಅವಕಾಶವಿಲ್ಲ. ರಾತ್ರಿ 1 ಗಂಟೆಯವರೆಗೆ ಪಾರ್ಟಿ ಅವಧಿಯನ್ನು ವಿಸ್ತರಿಸುವಂತೆ ಮನವಿ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ನಾವು ಈಗಾಗಲೇ ಒಂದಿಷ್ಟು ಮಾರ್ಗಸೂಚಿಗಳನ್ನು ಸಿದ್ಧಮಾಡಿ ಇಟ್ಟುಕೊಂಡಿದ್ದೇವೆ. ಆದರೆ, ರಾಜ್ಯ ಸರ್ಕಾರದಿಂದ ಕೆಲವೊಂದು ಮಾರ್ಗಸೂಚಿ ನಿರೀಕ್ಷೆ ಇದ್ದು, ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನುಸಾರ ನಿರ್ಬಂಧಗಳನ್ನು ಕೈಗೊಳ್ಳುತ್ತೇವೆ. ಸರ್ಕಾರದಿಂದ ಒಂದೆರಡು ದಿನಗಳಲ್ಲಿ ಈ ಬಗ್ಗೆ ಮಾಹಿತಿ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಅಲ್ಲ: ಮೈಸೂರು ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಕಿರಣ್ ಗೌಡ ಎಂಬ ವ್ಯಕ್ತಿಯ ಹೆಸರು ರೌಡಿ ಶೀಟರ್​ನಲ್ಲಿ ಇಲ್ಲ. ಆದರೆ, ಅವರ ಮೇಲೆ ನಾಲ್ಕೈದು ಕೇಸ್​ಗಳು ದಾಖಲಾಗಿವೆ. ಆ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಕಿರಣ್ ಮೇಲಿದ್ದ ರೌಡಿಶೀಟರ್​ ಆಪಾದನೆಗೆ ತೆರೆ ಎಳೆದರು. ನಗರದಲ್ಲಿ ರೌಡಿಗಳ ಚಟುವಟಿಕೆಯ ಮೇಲೆ ಕಣ್ಣಿಟ್ಟಿದ್ದೇವೆ. ಈಗಾಗಲೇ ಇಬ್ಬರು ರೌಡಿಶೀಟರ್​​ಗಳನ್ನು ಗಡಿಪಾರು ಮಾಡಿದ್ದೇವೆ. ಇನ್ನು ಐದು ಮಂದಿ ರೌಡಿಶೀಟರ್​​ಗಳನ್ನು ಗಡಿಪಾರು ಮಾಡಲು ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಜೊತೆಗೆ ರೌಡಿಶೀಟರ್​ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಹೊಸ ವರ್ಷಾಚರಣೆ: ಬೆಂಗಳೂರು ಪೊಲೀಸರಿಗೆ ಎಚ್ಚರಿಕೆ ವಹಿಸಲು ಕಮಿಷನರ್​ ಸೂಚನೆ

ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್: ಹೆಚ್ಚುತ್ತಿರುವ ಕೊರೊನಾ ಸಂಬಂಧಿಸಿದಂತೆ ರಾಜ್ಯಸರ್ಕಾರ ಹೊಸ ಗೈಡ್​ಲೈನ್​ ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್​ ಕಡ್ಡಾಯಗೊಳಿಸಿದೆ. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಎಲ್ಲೆಲ್ಲ ಸಂಭ್ರಮಾಚರಣೆ ಮಾಡಲಾಗುವುದೋ ಅಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ನ್ಯೂ ಇಯರ್​ ನಿಮಿತ್ತ ಜನರು ಒಟ್ಟಾಗಿ ಸೇರುವುದರಿಂದ ರಾಜ್ಯದಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಸಧ್ಯಕ್ಕೆ ದಂಡ ವಿಧಿಸುವುದಿಲ್ಲ. ಆದರೆ, ಜನರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸುವುದು ಕಡ್ಡಾಯ. ಇದನ್ನು ಎಲ್ಲರೂ ಪಾಲಿಸಿ ಎಂದು ಹೇಳಿದೆ.

ಸಂಭ್ರಮಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗುವುದು. 1 ಗಂಟೆ ಬಳಿಕ ಯಾವುದೇ ಹೊಸ ವರ್ಷಾಚರಣೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ವಿಶೇಷವಾಗಿ ಹಿರಿಯ ನಾಗರಿಕರು, ಗರ್ಭಿಣಿಯರು, ಮಕ್ಕಳು ಜನಸಂದಣಿ ಇರುವ ಪ್ರದೇಶಗಳಲ್ಲಿ ಹಾಗೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳದಿರುವುದು ಒಳಿತು ಎಂದು ತಿಳಿಸಿದೆ. ಅಂತೂ ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಈ ಬಾರಿ ಹೊಸ ವರ್ಷ ಆಚರಿಸಲಿದ್ದೇವೆ.

ಹರ್ಷಾಚರಣೆಯಲ್ಲಿ ಭಯೋತ್ಪಾದಕ ಸಂಚಿನ ಶಂಕೆ: ಕಳೆದ ಮೂರು ತಿಂಗಳ ಅವಧಿಯಲ್ಲಿ ಮಂಗಳೂರು ಮತ್ತು ಕೊಯಮತ್ತೂರಿನಲ್ಲಿ ನಡೆದಿರುವ ಬಾಂಬ್ ಸ್ಪೋಟ ಪ್ರಕರಣಗಳು ಕಣ್ಮುಂದೆ ಇರುವುದರಿಂದ ಬೆಂಗಳೂರು ಪೊಲೀಸರಿಗೆ ಅಲರ್ಟ್ ಇರುವಂತೆ ನಗರ ಕಮಿಷನರ್​ ಪ್ರತಾಪ್​ ರೆಡ್ಡಿ ಸೂಚಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯಿಂದ ಯಾವುದೇ ರೀತಿಯಲ್ಲಿ ಮಾಹಿತಿಗಳು ಬಂದಿಲ್ಲ. ಆದರೂ ಸಹ ನಗರದಲ್ಲಿ ಪೊಲೀಸರಿಗೆ ಸೂಕ್ತ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡೇ ಈ ಬಾರಿ ಹೊಸ ವರ್ಷವನ್ನು ಆಚರಿಸುವ ತಯಾರಿಗಳು ನಡೆಯುತ್ತಿವೆ.

ಇದನ್ನೂ ಓದಿ: ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯ: ರಾಜ್ಯ ಸರ್ಕಾರದಿಂದ ಹೊಸ ಗೈಡ್​ಲೈನ್​ ಬಿಡುಗಡೆ!

ನಗರ ಪೊಲೀಸ್​ ಆಯುಕ್ತ ರಮೇಶ್​ ಭಾನೋತ್​ ಹೇಳಿಕೆ

ಮೈಸೂರು: ಇನ್ನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರಲಿದೆ. ಈ ಹಿನ್ನೆಲೆ ನಗರದಲ್ಲಿ ಡಿಜೆಗೆ ಅವಕಾಶವಿಲ್ಲ. ರಾಜ್ಯ ಸರ್ಕಾರದಿಂದ ಬರುವ ಮಾರ್ಗಸೂಚಿಯ ಅನುಸಾರ ನಿರ್ಬಂಧ ಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್​ ಆಯುಕ್ತ ರಮೇಶ್​ ಭಾನೋತ್​ ಹೇಳಿಕೆ ನೀಡಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಗರದಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಡಿಜೆಗೆ ಅವಕಾಶವಿಲ್ಲ. ರಾತ್ರಿ 1 ಗಂಟೆಯವರೆಗೆ ಪಾರ್ಟಿ ಅವಧಿಯನ್ನು ವಿಸ್ತರಿಸುವಂತೆ ಮನವಿ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ನಾವು ಈಗಾಗಲೇ ಒಂದಿಷ್ಟು ಮಾರ್ಗಸೂಚಿಗಳನ್ನು ಸಿದ್ಧಮಾಡಿ ಇಟ್ಟುಕೊಂಡಿದ್ದೇವೆ. ಆದರೆ, ರಾಜ್ಯ ಸರ್ಕಾರದಿಂದ ಕೆಲವೊಂದು ಮಾರ್ಗಸೂಚಿ ನಿರೀಕ್ಷೆ ಇದ್ದು, ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನುಸಾರ ನಿರ್ಬಂಧಗಳನ್ನು ಕೈಗೊಳ್ಳುತ್ತೇವೆ. ಸರ್ಕಾರದಿಂದ ಒಂದೆರಡು ದಿನಗಳಲ್ಲಿ ಈ ಬಗ್ಗೆ ಮಾಹಿತಿ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರೌಡಿ ಶೀಟರ್ ಅಲ್ಲ: ಮೈಸೂರು ನಗರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಕಿರಣ್ ಗೌಡ ಎಂಬ ವ್ಯಕ್ತಿಯ ಹೆಸರು ರೌಡಿ ಶೀಟರ್​ನಲ್ಲಿ ಇಲ್ಲ. ಆದರೆ, ಅವರ ಮೇಲೆ ನಾಲ್ಕೈದು ಕೇಸ್​ಗಳು ದಾಖಲಾಗಿವೆ. ಆ ಬಗ್ಗೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಕಿರಣ್ ಮೇಲಿದ್ದ ರೌಡಿಶೀಟರ್​ ಆಪಾದನೆಗೆ ತೆರೆ ಎಳೆದರು. ನಗರದಲ್ಲಿ ರೌಡಿಗಳ ಚಟುವಟಿಕೆಯ ಮೇಲೆ ಕಣ್ಣಿಟ್ಟಿದ್ದೇವೆ. ಈಗಾಗಲೇ ಇಬ್ಬರು ರೌಡಿಶೀಟರ್​​ಗಳನ್ನು ಗಡಿಪಾರು ಮಾಡಿದ್ದೇವೆ. ಇನ್ನು ಐದು ಮಂದಿ ರೌಡಿಶೀಟರ್​​ಗಳನ್ನು ಗಡಿಪಾರು ಮಾಡಲು ಪರಿಶೀಲನೆ ನಡೆಸುತ್ತಿದ್ದೇವೆ. ಇದರ ಜೊತೆಗೆ ರೌಡಿಶೀಟರ್​ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಹೊಸ ವರ್ಷಾಚರಣೆ: ಬೆಂಗಳೂರು ಪೊಲೀಸರಿಗೆ ಎಚ್ಚರಿಕೆ ವಹಿಸಲು ಕಮಿಷನರ್​ ಸೂಚನೆ

ವರ್ಷಾಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್: ಹೆಚ್ಚುತ್ತಿರುವ ಕೊರೊನಾ ಸಂಬಂಧಿಸಿದಂತೆ ರಾಜ್ಯಸರ್ಕಾರ ಹೊಸ ಗೈಡ್​ಲೈನ್​ ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್​ ಕಡ್ಡಾಯಗೊಳಿಸಿದೆ. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಎಲ್ಲೆಲ್ಲ ಸಂಭ್ರಮಾಚರಣೆ ಮಾಡಲಾಗುವುದೋ ಅಲ್ಲಿ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಿರಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ನ್ಯೂ ಇಯರ್​ ನಿಮಿತ್ತ ಜನರು ಒಟ್ಟಾಗಿ ಸೇರುವುದರಿಂದ ರಾಜ್ಯದಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಸಧ್ಯಕ್ಕೆ ದಂಡ ವಿಧಿಸುವುದಿಲ್ಲ. ಆದರೆ, ಜನರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸುವುದು ಕಡ್ಡಾಯ. ಇದನ್ನು ಎಲ್ಲರೂ ಪಾಲಿಸಿ ಎಂದು ಹೇಳಿದೆ.

ಸಂಭ್ರಮಾಚರಣೆಗೆ ರಾತ್ರಿ 1 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗುವುದು. 1 ಗಂಟೆ ಬಳಿಕ ಯಾವುದೇ ಹೊಸ ವರ್ಷಾಚರಣೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ವಿಶೇಷವಾಗಿ ಹಿರಿಯ ನಾಗರಿಕರು, ಗರ್ಭಿಣಿಯರು, ಮಕ್ಕಳು ಜನಸಂದಣಿ ಇರುವ ಪ್ರದೇಶಗಳಲ್ಲಿ ಹಾಗೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳದಿರುವುದು ಒಳಿತು ಎಂದು ತಿಳಿಸಿದೆ. ಅಂತೂ ಸಾಕಷ್ಟು ಮುಂಜಾಗ್ರತಾ ಕ್ರಮಗಳೊಂದಿಗೆ ಈ ಬಾರಿ ಹೊಸ ವರ್ಷ ಆಚರಿಸಲಿದ್ದೇವೆ.

ಹರ್ಷಾಚರಣೆಯಲ್ಲಿ ಭಯೋತ್ಪಾದಕ ಸಂಚಿನ ಶಂಕೆ: ಕಳೆದ ಮೂರು ತಿಂಗಳ ಅವಧಿಯಲ್ಲಿ ಮಂಗಳೂರು ಮತ್ತು ಕೊಯಮತ್ತೂರಿನಲ್ಲಿ ನಡೆದಿರುವ ಬಾಂಬ್ ಸ್ಪೋಟ ಪ್ರಕರಣಗಳು ಕಣ್ಮುಂದೆ ಇರುವುದರಿಂದ ಬೆಂಗಳೂರು ಪೊಲೀಸರಿಗೆ ಅಲರ್ಟ್ ಇರುವಂತೆ ನಗರ ಕಮಿಷನರ್​ ಪ್ರತಾಪ್​ ರೆಡ್ಡಿ ಸೂಚಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯಿಂದ ಯಾವುದೇ ರೀತಿಯಲ್ಲಿ ಮಾಹಿತಿಗಳು ಬಂದಿಲ್ಲ. ಆದರೂ ಸಹ ನಗರದಲ್ಲಿ ಪೊಲೀಸರಿಗೆ ಸೂಕ್ತ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡೇ ಈ ಬಾರಿ ಹೊಸ ವರ್ಷವನ್ನು ಆಚರಿಸುವ ತಯಾರಿಗಳು ನಡೆಯುತ್ತಿವೆ.

ಇದನ್ನೂ ಓದಿ: ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯ: ರಾಜ್ಯ ಸರ್ಕಾರದಿಂದ ಹೊಸ ಗೈಡ್​ಲೈನ್​ ಬಿಡುಗಡೆ!

Last Updated : Dec 26, 2022, 5:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.